ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ


Team Udayavani, Jan 22, 2022, 7:14 PM IST

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

ಸಾಂದರ್ಭಿಕ ಚಿತ್ರ.

ಉಡುಪಿ: ನಗರದ ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕ ರಿಗೆ ಅದರಲ್ಲೂ ವಿದ್ಯಾರ್ಥಿನಿಯರಿಗೆ ನಿತ್ಯ ಕಿರುಕುಳ ನೀಡುತ್ತಿರುವ ವಿಕೃತರ ಗುಂಪಿನ ಮೇಲೆ ನಿಗಾ ವಹಿಸಲು ನಗರ ಠಾಣೆ ಪೊಲೀಸರು ಬೀಟ್‌ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.

ಬಸ್‌ ನಿಲ್ದಾಣದಲ್ಲಿ ಒಂದು ಕ್ಷಣ ಕೂತುಕೊಂಡರೆ ಭಿಕ್ಷುಕರು ಸಹಿತ ಕೆಲವರು ವಿನಾ ಕಾರಣ ಕಿರುಕುಳ ನೀಡುವ ಘಟನೆಗಳು ನಡೆಯುತ್ತಿವೆ. ಬಸ್‌ ತಂಗುದಾಣದಲ್ಲಿ ಶುಚಿತ್ವ ಇಲ್ಲದಿರುವುದು ಹಾಗೂ ಎಲ್ಲೆಂದರಲ್ಲಿ ತಂಬಾಕು ಸೇವಿಸಿ ಉಗುಳುವುದು ಕೂಡ ನಗರದ ಅಂದಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಪ್ರಯಾಣಿಕರ ತಂಗುದಾಣದಲ್ಲಿಯೇ ದಾರಿಹೋಕರು ವಿಶ್ರಾಂತಿ ಪಡೆಯು ತ್ತಿದ್ದು, ಪ್ರಯಾಣಿಕರಿಗೆ ಇರಿಸುಮುರುಸು ಉಂಟುಮಾಡುತ್ತಿದೆ.

ವೇಶ್ಯಾವಾಟಿಕೆ ದಂಧೆ
ಈ ಎರಡೂ ಬಸ್‌ ತಂಗುದಾಣದ ಬಳಿ ವೇಶ್ಯಾವಾಟಿಕೆ ದಂಧೆ ನಡೆಯು ತ್ತಿವೆ. ಪ್ರಯಾಣಿಕರ ಆಸೀನದಲ್ಲಿ ಕುಳಿತು ಕೊಳ್ಳುವವರನ್ನೂ ವಕ್ರ ದೃಷ್ಟಿಯಿಂದ ನೋಡಲಾಗುತ್ತಿದೆ. ಸರ್ವಿಸ್‌ ಬಸ್‌ ನಿಲ್ದಾಣದ ಎರಡೂ ಬದಿಯೂ ದಿನಂಪ್ರತಿ ಇಂತಹ ಘಟನೆಗಳು ಕಾಣಸಿಗುತ್ತಿವೆ. ಅಲ್ಲದೆ ಕೆಎಸ್ಸಾರ್ಟಿಸಿ ಬಸ್‌ ತಂಗು ದಾಣದಲ್ಲಿಯೂ ಇವರ ಉಪಟಳ ನಿರಂ ತರವಾಗಿ ನಡೆಯುತ್ತಿದೆ.

ವಿದ್ಯಾರ್ಥಿನಿಯರಿಗೂ ತೊಂದರೆ
ನಗರ ವ್ಯಾಪ್ತಿಯಲ್ಲಿ ಹಲವಾರು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಕ್ಕೆ ಈ ಬಸ್‌ ತಂಗುದಾಣ ವನ್ನೇ ಆಶ್ರಯಿಸಿದ್ದಾರೆ. ವಿದ್ಯಾರ್ಥಿನಿಯ ರೊಂದಿಗೆ ಮೈಕೈ ತಾಗಿಸಿ ಮಾತುಕತೆ ನಡೆಸಿ ಪರಿಚಿತರಂತೆ ವರ್ತಿಸುತ್ತಿದ್ದಾರೆ. ಹಿಂದಿ- ಕನ್ನಡ ಮಾತನಾಡುವ ಮಂದಿಯಿಂದಲೇ ಈ ಕೃತ್ಯ ನಡೆಯುತ್ತಿದೆ ಎನ್ನುತ್ತಾರೆ
-ಕಾಲೇಜು ವಿದ್ಯಾರ್ಥಿನಿಯೊಬ್ಬರು.

ಸಹಾಯವಾಣಿ ಸಂ. 112
ಬಸ್‌ ತಂಗುದಾಣದಲ್ಲಿ ಕಿರುಕುಳ ನೀಡುವ ಬಗ್ಗೆ ದೂರುಗಳು ಬಂದಿದ್ದು, ಈಗಾಗಲೇ ಕೆಲವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಈ ಭಾಗದಲ್ಲಿ ಬೀಟ್‌ ಕಾರ್ಯಾಚರಣೆಯಲ್ಲಿದ್ದಾರೆ. ಇಬ್ಬರು ಸಿಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಸಾರ್ವಜನಿಕರು ಅಥವಾ ಪ್ರಯಾಣಿಕರಿಗೆ ತೊಂದರೆ ಉಂಟಾದರೆ ಕೂಡಲೇ 112ಗೆ ಕರೆ ಮಾಡಬಹುದು. 5 ನಿಮಿಷದೊಳಗೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿ ಸಲಿದ್ದಾರೆ. ನಗರ ಠಾಣೆಗೆ ಮುಖತಃ ಭೇಟಿಯಾಗಿಯೂ ದೂರು ನೀಡಬಹುದಾಗಿದೆ.
-ಪ್ರಮೋದ್‌ ಕುಮಾರ್‌,
ಪೊಲೀಸ್‌ ನಿರೀಕ್ಷಕರು,
ಉಡುಪಿ ನಗರ ಠಾಣೆ

ರಾತ್ರಿ ವೇಳೆ ಉಪಟಳ ಹೆಚ್ಚಳ
ಸಿಟಿ ಬಸ್‌ ತಂಗುದಾಣದಿಂದ ಸರ್ವಿಸ್‌ ಬಸ್‌ ತಂಗುತಾಣಕ್ಕೆ ತೆರಳುವ ಭಾಗದಲ್ಲಿ ವೇಶ್ಯೆಯರು ಜನರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುತ್ತಾರೆ. ಕೆಲವೊಂದು ಬಾರಿ ಈ ಭಾಗದಲ್ಲಿ ಬೀದಿದೀಪಗಳೂ ಉರಿಯದ ಕಾರಣ ಪ್ರಯಾಣಿಕರೂ ತೊಂದರೆ ಎದುರಿಸಬೇಕಾಗುತ್ತದೆ.

ವಸ್ತು ಮಾರಾಟದ ನೆಪದಲ್ಲಿ ಕಿರುಕುಳ
ಪರ್ಸ್‌, ಕೀಚೈನ್‌ ಮಾರಾಟದ ನೆಪದಲ್ಲಿ ಬಸ್‌ನೊಳಗೆ ಆಗಮಿಸಿ ಪ್ರಯಾ ಣಿಕರೊಂದಿಗೆ ಅನುಚಿತವಾಗಿ ವರ್ತಿಸುವ ಘಟನೆಗಳೂ ನಿರಂತರವಾಗಿ ನಡೆಯುತ್ತಿದೆ. ವಸ್ತುಗಳನ್ನು ಖರೀದಿಸುವಂತೆ ಒತ್ತಡ ಹಾಕುವುದು ಹಾಗೂ ಕಿರುಕುಳವನ್ನೂ ನೀಡಲಾಗುತ್ತಿದೆ ಎನ್ನುತ್ತಾರೆ ನಿತ್ಯ ಪ್ರಯಾಣಿಕರೊಬ್ಬರು.

– ಪುನೀತ್‌ ಸಾಲ್ಯಾನ್‌

 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.