ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್ಪಿ
Team Udayavani, Mar 30, 2023, 7:30 AM IST
ಕಾಪು: ಮದ್ಯಪಾನ ಮಾಡಿ ರಾ. ಹೆ. 66ರಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಎಬ್ಬಿಸಿ, ಉಪಚರಿಸುವ ಮೂಲಕ ಉಡುಪಿ ಡಿಸಿ ಮತ್ತು ಎಸ್ಪಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಡಿಸಿ ಕೂರ್ಮಾ ರಾವ್ ಮತ್ತು ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ತಮ್ಮ ವಾಹನಗಳಲ್ಲಿ ಉಡುಪಿಯಿಂದ ಹೆಜಮಾಡಿ ಕಡೆಗೆ ತೆರಳುತ್ತಿದ್ದ ವೇಳೆ ಎರ್ಮಾಳು ಬಳಿ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದನ್ನು ಗಮನಿಸಿದ್ದರು.
ವಾಹನ ನಿಲ್ಲಿಸಿ ಆತನ ಬಳಿಗೆ ಬಂದ ಅವರು ಎಬ್ಬಿಸಿ ಅಂಗರಕ್ಷಕ ಸಿಬಂದಿ ಮತ್ತು ಸ್ಥಳೀಯರ ಸಹಕಾರದೊಂದಿಗೆ ರಸ್ತೆ ಬದಿಗೆ ಕರೆ ತಂದು ಉಪಚರಿಸಿದರು. ಬಳಿಕ ಹೈವೇ ಪೆಟ್ರೋಲ್ ಪೊಲೀಸರ ಮೂಲಕ ಆತನ ಮನೆಯವರನ್ನು ಸಂಪರ್ಕಿಸಿ, ಕರೆದೊಯ್ಯುವ ವ್ಯವಸ್ಥೆ ಮಾಡಿದರು. ಈ ಮಾನವೀಯ ನಡೆ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ