ಅನಧಿಕೃತ ಬ್ಯಾನರ್‌, ಸಭೆ, ಸಮಾರಂಭಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಸೂಚನೆ 


Team Udayavani, Mar 16, 2023, 6:12 AM IST

ಅನಧಿಕೃತ ಬ್ಯಾನರ್‌, ಸಭೆ, ಸಮಾರಂಭಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಸೂಚನೆ 

ಉಡುಪಿ: ಜಿಲ್ಲಾದ್ಯಂತ ಅನಧಿಕೃತ ಜಾಹೀರಾತು ಫ‌ಲಕ ಅಳವಡಿಸಲು ಹಾಗೂ ಸಭೆ ಸಮಾರಂಭ ನಡೆಸಲು ಅವಕಾಶ ನೀಡಬಾರದು ಮತ್ತು ಈ ಸಂಬಂಧ ಎಲ್ಲೆಡೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅವರು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ನಗರ ಮತ್ತು ಗ್ರಾಮಾಂತರ ಪ್ರದೇಶ ಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್‌, ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌, ಗೋಡೆ ಬರಹ, ವಿವಿಧ ಪಕ್ಷಗಳ ಜಾಹೀರಾತು ಫ‌ಲಕ ಇತ್ಯಾದಿ ಕಂಡುಬಂದಲ್ಲಿ ತತ್‌ಕ್ಷಣವೇ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಬೇಕು ಮತ್ತು ಅದನ್ನು ತೆರವುಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ನಿರ್ದಿಷ್ಟ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಸಭೆ, ಸಮಾರಂಭ ಅಥವಾ ಯಾವುದೇ ಸಾರ್ವಜನಿಕ ಕಾರ್ಯಗಳು, ಔತಣಕೂಟಗಳನ್ನು ಸ್ಥಳೀಯಾಡಳಿತದ ಅನುಮತಿ ಇಲ್ಲದೇ ನಡೆಸುತ್ತಿರುವುದು ಕಂಡು ಬಂದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹಾಗೆಯೇ ನಿರ್ದಿಷ್ಟ ಕಾರ್ಯಕ್ರಮಗಳಿಗೆ ಬ್ಯಾನರ್‌, ಬಂಟಿಂಗ್ಸ್‌, ಫ್ಲೆಕ್ಸ್‌ ಇತ್ಯಾದಿಗಳನ್ನು ಹಾಕಲು ಅನುಮತಿ ಪಡೆದ ದಿನಗಳಿಗಷ್ಟೇ ಸೀಮಿತವಾಗಬೇಕು. ಕಾರ್ಯಕ್ರಮ ಮುಗಿದು ನಿರ್ದಿಷ್ಟ ಕಾಲಮಿತಿಯೊಳಗೆ ತೆರವುಗೊಳಿಸುವ ಕಾರ್ಯವೂ ಆಗಬೇಕು. ಸಾರ್ವಜನಿಕ ಸ್ಥಳಗಳ ಅಂದ ಕೆಡಿಸಲು ಅವಕಾಶ ನೀಡಬಾರದು. ಕಾನೂನು ಉಲ್ಲಂ ಸಿ ಕಾರ್ಯಕ್ರಮ ನಡೆಯದಂತೆಯೂ ನಿಗಾ ವಹಿಸಲು ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.