ಉಡುಪಿ: ದೀಪಾವಳಿ, ಗೋಪೂಜೆ ಸಂಭ್ರಮ; ದೇಗುಲಗಳಲ್ಲಿ ವಿಶೇಷ ಅಲಂಕಾರ ಪೂಜೆ 


Team Udayavani, Nov 15, 2020, 9:31 PM IST

ಉಡುಪಿ: ದೀಪಾವಳಿ, ಗೋಪೂಜೆ ಸಂಭ್ರಮ; ದೇಗುಲಗಳಲ್ಲಿ ವಿಶೇಷ ಅಲಂಕಾರ ಪೂಜೆ 

ಪಲಿಮಾರು ಸ್ವಾಮೀಜಿಯವರು ಗೋಪೂಜೆ ನಡೆಸಿದರು.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಜನ ಸಂಭ್ರಮ – ಸಡಗರದಿಂದ ಆಚರಿಸಲಾಯಿತು. ಕೊರೊನಾದಿಂದ ಕಳೆಗುಂದಿದ್ದ ಜನರಲ್ಲಿ ದೀಪಾವಳಿ ನವೋಲ್ಲಾಸ ತಂದಿದ್ದು, ನಗರದೆಲ್ಲೆಡೆ ರವಿವಾರ ಲಕ್ಷ್ಮೀ ಪೂಜೆ ಆಚರಿಸಿದರು.

ಹಬ್ಬದ ಪ್ರಯುಕ್ತ ವಿವಿಧ ದೇವಸ್ಥಾನ ಗಳಲ್ಲಿಯೂ ದೇವರಿಗೆ ವಿಶೇಷ ಅಲಂಕಾರದೊಂದಿಗೆ ವಿಶೇಷ ಪೂಜೆ ನೆರವೇರಿಸ ಲಾಯಿತು. ಇದಲ್ಲದೆ ಹಲವೆಡೆಗಳಲ್ಲಿ ರವಿವಾರವೂ ಅಂಗಡಿ, ವ್ಯಾಪಾರ ಮಳಿಗೆ, ಕಚೇರಿಗಳಲ್ಲಿ ಲಕ್ಷ್ಮೀಪೂಜೆ, ವಾಹನಗಳಿಗೆ ಪೂಜೆ ನೆರವೇರಿತು.

ಖರೀದಿ ಭರಾಟೆ ಮುಂದುವರಿಕೆ
ರವಿವಾರ ರಜಾದಿನವಾದ ಕಾರಣ ಹಾಗೂ ಸೋಮವಾರ ಸಂಕ್ರಮಣ ಇರುವುದರಿಂದ ನಗರದೆಲ್ಲೆಡೆ ಹೂ- ಹಣ್ಣುಗಳ ಮಾರಾಟ ಜೋರಾಗಿತ್ತು. ಪಟಾಕಿ ಅಂಗಡಿಗಳಲ್ಲಿಯೂ ಶನಿವಾರ ಉತ್ತಮ ವ್ಯಾಪಾರವಿತ್ತು. ದ.ಕ.ದಲ್ಲಿ ರವಿವಾರ ದೀಪಾವಳಿ ಹಬ್ಬವಿರುವುದರಿಂದ ಹೆಚ್ಚಿನ ವ್ಯಾಪಾರಿಗಳು ನೆರೆಜಿಲ್ಲೆಗೆ ತೆರಳಿದ್ದರು.

ಗೋಪೂಜೆ ಆಚರಣೆ
ನಾಡಿನ ವಿವಿಧ ಮಠ ಮಂದಿರ, ಮನೆಗಳು, ಗೋಶಾಲೆಗಳಲ್ಲಿ ರವಿವಾರ ಗೋಪೂಜೆ ಸಂಪನ್ನಗೊಂಡಿತು. ಗೋವುಗಳಿಗೆ ಸ್ನಾನ ಮಾಡಿಸಿ ಮುದ್ರೆಗಳೊಂದಿಗೆ ಅಲಂಕಾರ ಮಾಡಿ ತಿನಿಸುಗಳನ್ನು ನೀಡಿದರು. ಗ್ರಾಮೀಣ ಭಾಗದಲ್ಲಿ ಕೆರೆಯಲ್ಲಿ ಬೆಳೆಯುವ ಹೂವಿನ ಹಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಶ್ರೀಕೃಷ್ಣಮಠ
ಶ್ರೀಕೃಷ್ಣಮಠದಲ್ಲಿ ಗೋಪೂಜೆ ನಿಮಿತ್ತ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಗೋಪಾಲಕೃಷ್ಣ ಅಲಂಕಾರವನ್ನು ನಡೆಸಿದ ಬಳಿಕ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾ ಪೂಜೆ ಸಲ್ಲಿಸಿದರು. ಗೋಶಾಲೆಯ ದನಗಳನ್ನು ವಾದ್ಯ ಘೋಷ, ಸಹಿತ ರಥಬೀದಿಯಲ್ಲಿ ಮೆರ ವಣಿಗೆ ಮಾಡಿದ ಬಳಿಕ ಕನಕನ ಕಿಂಡಿಯ ಹೊರಗೆ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು. ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಅದಮಾರು ಮಠ
ಅದಮಾರು ಮಠದ ಗೋಶಾಲೆಯಲ್ಲಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು. ದನಗಳಿಗೆ ತಿನಿಸು ನೀಡಿದ ಶ್ರೀಪಾದರು ಮಂಗಳಾರತಿ ಬೆಳಗಿದರು. ಮಠದ ವ್ಯವಸ್ಥಾಪಕ ರಾಘವೇಂದ್ರ ಭಟ್‌, ವಿದ್ವಾಂಸ ವಂಶಿ ಕೃಷ್ಣಾಚಾರ್ಯ, ಜನಾರ್ದನ ಕೊಟ್ಟಾರಿ ಪಾಲ್ಗೊಂಡಿದ್ದರು.

ಪಲಿಮಾರು ಮಠ
ಪಲಿಮಾರು ಮಠದಲ್ಲಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಗೋವುಗಳಿಗೆ ಪೂಜೆ ಸಲ್ಲಿಸಿದರು.

ನೀಲಾವರ ಗೋಶಾಲೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನಡೆಸುತ್ತಿರುವ ನೀಲಾವರದ ಗೋಶಾಲೆಯಲ್ಲಿ ಅನಾಥ ಗೋವುಗಳಿಗೆ ಶ್ರೀಪಾದರು ಪೂಜೆ ಸಲ್ಲಿಸಿದರು.

ಕೆ.ರಘುಪತಿ ಭಟ್‌
ಉಡುಪಿ: ಶಾಸಕ ಕೆ. ರಘುಪತಿ ಭಟ್‌ ಅವರಿಂದ ಕರಂಬಳ್ಳಿಯಲ್ಲಿರುವ ಮನೆಯಲ್ಲಿ ಗೋಪೂಜೆ ನಡೆಯಿತು. ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಪ್ರಮೋದ್‌ ಮಧ್ವರಾಜ್‌
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮನೆಯ ಗೋಶಾಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಪೂಜೆ ನಡೆಯಿತು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.