ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಸಂಪುಟದಲ್ಲಿ ಅನುಮೋದನೆ, ಉಡುಪಿಯಲ್ಲಿ ಸಂಭ್ರಮ
Team Udayavani, Oct 22, 2020, 10:26 PM IST
ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮಾಚರಣೆ ನಡೆಯಿತು.
ಉಡುಪಿ: ಜಿಲ್ಲಾಸ್ಪತ್ರೆಯನ್ನು 250 ಬೆಡ್ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ 115 ಕೋ.ರೂ. ವೆಚ್ಚದ ಯೋಜನೆ ಗುರುವಾರ ಬೆಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿದ್ದು, ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಸಂಭ್ರಮಾಚರಣೆ ನಡೆಯಿತು.
ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅವರ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮ ಆಚರಿಸಲಾಯಿತು.
ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್ ಮಾತನಾಡಿ ಬಹುಕಾಲದ ಕನಸು ನನಸಾಗಿದೆ. ಜಿಲ್ಲಾಸ್ಪತ್ರೆಯ ಬಹು
ನಿರೀಕ್ಷಿತ ಬೇಡಿಕೆಗಳಾದ 1961ರ ಮಂಗಳೂರು ಹೆಂಚಿನ ಕಟ್ಟಡ ನವೀಕೃತಗೊಳ್ಳುವುದರ ಜತೆಗೆ ಸಿಬಂದಿ ಕೊರತೆ ಕೂಡ ಪರಿಹಾರ ಕಾಣಲಿದೆ ಎಂದರು.
2001ರಿಂದ ಎರಡು ಬಾರಿ ಸಂಪುಟದ ಆರ್ಥಿಕ ವಿಭಾಗದಲ್ಲಿ ತಿರಸ್ಕೃತಗೊಂಡ ನವೀಕೃತ ಜಿಲ್ಲಾಸ್ಪತ್ರೆ ಯೋಜನೆಯನ್ನು ಎದೆಗುಂದದೆ ಮತ್ತೆ ಹಳಿಗೆ ತರುವಲ್ಲಿ ಶಾಸಕ ರಘುಪತಿ ಭಟ್ ಮಾಡಿದ್ದಾರೆ’ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಶ್ಲಾ ಸಿದರು.
ಉಡುಪಿ ಜನತೆಯ ಬಹು ನಿರೀಕ್ಷಿತ ಜಿಲ್ಲಾಸ್ಪತ್ರೆ ನವೀಕರಣ ಯೋಜನೆ ಸಂಪುಟದಲ್ಲಿ ಅನುಮೋದನೆಗೊಳ್ಳಲು ಕಾರಣಕರ್ತರಾದ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಹಾಗೂ ಹಾಲಿ ಅರೋಗ್ಯ ಸಚಿವರಾದ ಶ್ರೀರಾಮುಲು ಮತ್ತು ಡಾ| ಸುಧಾಕರ್, ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಮಹೇಶ್ ಠಾಕೂರ್ ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾಸ್ಪತ್ರೆಯ ಮೂಳೆತಜ್ಞ ಡಾ| ಗಣೇಶ್ ನಾಯಕ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಇದ್ದರು ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ನಿರೂಪಿಸಿದರು.
ಶಾಸಕರ ಐಸೊಲೇಶನ್
ಕೆ. ರಘುಪತಿ ಭಟ್ ಅವರು ಕೊರೊನಾ ಸೋಂಕಿನ ಕಾರಣ ಐಸೊಲೇಶನ್ನಲ್ಲಿರುವುದರಿಂದ ಮನೆಯಲ್ಲಿದ್ದು ಮುಖ್ಯಮಂತ್ರಿ, ಸಚಿವರು, ಹಿರಿಯ ಅಧಿಕಾರಿಗಳನ್ನು ಪ್ರಶಂಸಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್