ಉಡುಪಿ-ಮಣಿಪಾಲ: ಬೀದಿ ದೀಪ ಸಮಸ್ಯೆಗಿಲ್ಲ ಮುಕ್ತಿ


Team Udayavani, Aug 4, 2022, 4:20 PM IST

11

ಉಡುಪಿ: ಆರೋಗ್ಯ, ಶಿಕ್ಷಣ ಸಂಸ್ಥೆ, ಕೈಗಾರಿಕೆ ಮೂಲಕ ಜಾಗತಿಕ ಗಮನ ಸೆಳೆದಿರುವ ಮಣಿಪಾಲ-ಉಡುಪಿ ನಗರದ ಹೃದಯ ಭಾಗದಲ್ಲಿನ ಪ್ರಮುಖ ರಸ್ತೆಯ ಬೀದಿದೀಪಗಳು ಕೆಟ್ಟುಹೋಗಿ ವರ್ಷಗಳೇ ಕಳೆದರೂ ಸರಿಪಡಿಸುವ ಕಾರ್ಯ ಆಗಿಲ್ಲ.

ಟೆಂಡರ್‌ ಹಂತ, ಸರಕಾರದ ಅನು ಮೋದನೆಗೆ ಸಾಕಷ್ಟು ವಿಳಂಬವಾಗು ತ್ತಿರುವುದರಿಂದ ಸಾರ್ವಜನಿಕರಿಗೆ ಕತ್ತಲೆ ಭಾಗ್ಯ ಸಿಕ್ಕಂತಾಗಿದೆ.

ನಗರದ ಹೆದ್ದಾರಿ ಮತ್ತು ಜಂಕ್ಷನ್‌ ಒಳಭಾಗದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳ ವ್ಯವಸ್ಥೆಯಿಲ್ಲದೆ ಸಂಜೆ ವೇಳೆ ಮಕ್ಕಳು, ಮಹಿಳೆಯರು ಆತಂಕದಿಂದ ಓಡಾಡಬೇಕಾದ ಪರಿಸ್ಥಿತಿ ಇದೆ. ಎಂಜೆಸಿ, ಮಾಧವ ಕೃಪಾ ಶಾಲೆಯ ಜಂಕ್ಷನ್‌, ಮಣಿಪಾಲ-ಅಲೆವೂರು ರಸ್ತೆ, ಇಂಡಸ್ಟ್ರಿಯಲ್‌ ಪ್ರದೇಶದ ಕಡೆಗೆ ಸಾಗುವ ರಸ್ತೆಯಲ್ಲಿ ಕೆಲವೆಡೆ ಬೀದಿದೀಪ ಬೆಳಗುತ್ತಿಲ್ಲ. ಅಂಚೆ ಕಚೇರಿ ಸಮೀಪ ಒಂದು ಬೀದಿದೀಪವೂ ಪ್ರಕಾಶಮಾನವಾಗಿ ಬೆಳಕು ನೀಡುತ್ತಿಲ್ಲ ನಾಗರಿಕರು ದೂರಿದ್ದಾರೆ.

ಮಣಿಪಾಲ ಬಸ್‌ ನಿಲ್ದಾಣ, ಲಕ್ಷ್ಮೀಂದ್ರ ನಗರ, ಇಂದ್ರಾಳಿ, ಎಂಜಿಎಂ, ಕುಂಜಿಬೆಟ್ಟು ಬಸ್‌ ನಿಲ್ದಾಣಗಳಿದ್ದು, ಸಂಜೆ 7ರ ಬಳಿಕ ಇಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಬಸ್‌ಗೆ ಕಾಯಲು ತೊಂದರೆಯಾಗುತ್ತಿದೆ. ಅಂಬಾಗಿಲು- ಜಂಕ್ಷನ್‌ನಿಂದ ಪೆರಂಪಳ್ಳಿ-ಮಣಿಪಾಲ ಕಾಯಿನ್‌ ಸರ್ಕಲ್‌ವರೆಗೂ ಬೀದಿದೀಪದ ವ್ಯವಸ್ಥೆ ಇಲ್ಲದೆ ರಾತ್ರಿ 7ರ ಅನಂತರ ಕತ್ತಲೆಯಲ್ಲಿ ಸಾರ್ವಜನಿಕರು ಆತಂಕ ದಿಂದ ಓಡಾಡಬೇಕಿದೆ. ರಾತ್ರಿ ಪಾಳಿ ಕೆಲಸಕ್ಕೆ ಹೋಗಿಬರುವ ಮಹಿಳೆಯರು, ಯುವತಿಯರು, ಕೋಚಿಂಗ್‌ ತೆರಳುವ ವಿದ್ಯಾರ್ಥಿಗಳಿಗೆ ಅಭದ್ರತೆ ವಾತಾವರಣವಿದೆ. ಪಾದಚಾರಿ ಮತ್ತು ವಾಹನ ಸವಾರರಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಲು ಕಟ್ಟಡ ಮತ್ತು ವಾಹನಗಳ ಬೆಳಕೇ ಆಶ್ರಯವಾಗಿದೆ.

690 ಬೀದಿ ದೀಪ ಕಂಬಗಳು ಅಳವಡಿಕೆ

ಹಂತಹಂತವಾಗಿ ನಗರದ ಬೀದಿ ದೀಪ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಇದೀಗ ನಗರದ ಮುಖ್ಯರಸ್ಥೆಗಳಲ್ಲಿ ಒಟ್ಟು 18 ಕಿ. ಮೀ. ಬೀದಿ ದೀಪ ಯೋಜನೆ ಟೆಂಡರ್‌ ಹಂತದಲ್ಲಿದೆ. ಒಟ್ಟು 690 ದೀಪ ವ್ಯವಸ್ಥೆ ಕಂಬಗಳನ್ನು ಅಳವಡಿಸಲಾಗುತ್ತದೆ. ಅಂಬಾಗಿಲು-ಪೆರಂಪಳ್ಳಿ ರಸ್ತೆ, ಮಣಿಪಾಲ ಜೂನಿಯರ್‌ ಕಾಲೇಜು- ಇಂಡಸ್ಟ್ರಿಯಲ್‌ ಏರಿಯ, ಪರ್ಕಳ-ಮಲ್ಪೆಯವರೆಗೆ ದೀಪಗಳನ್ನು ಅಳವಡಿಸಲಾಗುವುದು. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ, ಜಿಲ್ಲಾಧಿಕಾರಿಗಳು ಅನುಮೋದನೆಗೆ ಬಾಕಿ ಇದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಶೀಘ್ರ ವ್ಯವಸ್ಥೆ: ಕೆಲವು ತಾಂತ್ರಿಕ ಕಾರಣಗಳಿಂದ ಟೆಂಡರ್‌ ಮೂರು ಸಲ ರದ್ದು ಆಗಿರುವ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆಯಲ್ಲಿ ಸಮಸ್ಯೆಯಾಗಿತ್ತು. ಇದೀಗ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ನಗರದ ಮುಖ್ಯರಸ್ತೆಗಳಲ್ಲಿ ಬೀದಿ ದೀಪದ ವ್ಯವಸ್ಥೆ ಶೀಘ್ರದಲ್ಲೆ ಆಗಲಿದೆ. – ಸುಮಿತ್ರಾ ಎಸ್‌. ನಾಯಕ್‌, ಅಧ್ಯಕ್ಷೆ, ಉಡುಪಿ ನಗರಸಭೆ

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.