Udupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ


Team Udayavani, Feb 24, 2024, 1:04 AM IST

bUdupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ

ಉಡುಪಿ: ಅಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಆ್ಯಂಡ್‌ ಆರ್ಕಿಟೆಕ್ಟ್$Õ ಮತ್ತು ಬೆಂಗಳೂರಿನ ಯು.ಎಸ್‌. ಕಮ್ಯೂನಿಕೇಶನ್ಸ್‌ ವತಿಯಿಂದ ಫೆ. 25ರ ವರೆಗೆ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾದ “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕ್ರೆಡೈ ಉಡುಪಿ ಅಧ್ಯಕ್ಷ ಮನೋಹರ ಎಸ್‌. ಶೆಟ್ಟಿ ಉದ್ಘಾಟಿಸಿ, ಹಿಂದೆ ಮನೆ, ಕಟ್ಟಡಗಳನ್ನು ನಿರ್ಮಿಸಲು ಸಾಕಷ್ಟು ಕಷ್ಟ ಎದುರಿಸುವುದರೊಂದಿಗೆ ಸಮಯದ ಅಭಾವವೂ ಎದುರಾಗುತ್ತಿತ್ತು. ಆದರೆ ಪ್ರಸ್ತುತ ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಕಟ್ಟಡ, ಮನೆಗಳ ನಿರ್ಮಾಣ ಅತ್ಯಂತ ಸುಲಭವಾಗಿ ಪರಿಣಮಿಸಿದೆ ಎಂದರು.

ಕಟ್ಟಡ ನಿರ್ಮಾಣಕ್ಕೆ ಬೇಕಾದ ಎಲ್ಲ ಬಗೆಯ ಸಾಮಗ್ರಿಗಳನ್ನು ಒಟ್ಟುಗೂಡಿಸಲು ಹೆಚ್ಚು ಕಷ್ಟವಾಗದು. ಪ್ರಸ್ತುತ ಜನತೆಗೆ ಅವರ ಕನಸಿನ ಮನೆ ಕಟ್ಟಲು ವಿನ್ಯಾಸಗಾರರು, ವಾಸ್ತುತಜ್ಞರು, ಕಟ್ಟಡ ಸಾಮಗ್ರಿಗಳು, ಕಾರ್ಮಿಕರು ಇತ್ಯಾದಿ ಎಲ್ಲ ರೀತಿಯ ಸಹಾಯ ಸಹಕಾರ ಅತ್ಯಂತ ಸುಲಭವಾಗಿ ದೊರಕುತ್ತಿದೆ. ಜನರಿಗೆ ಇನ್ನಷ್ಟು ಪ್ರಯೋಜನವಾಗಬೇಕು ಎನ್ನುವ ನೆಲೆಯಲ್ಲಿ ಉಡುಪಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನದಲ್ಲಿ ಎಲ್ಲ ಸಾಮಗ್ರಿಗಳೊಂದಿಗೆ ಮಾಹಿತಿ ದೊರಕಲಿವೆ. ಜನರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲ ಬುಡದಲ್ಲೇ ಸೌಲಭ್ಯ
ಮಾಂಡವಿ ಬಿಲ್ಡರ್ ಆ್ಯಂಡ್‌ ಡೆವಲಪರ್ನ ಎಂಡಿ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಮಾತನಾಡಿ, ಹಿಂದೆ ಕಟ್ಟಡ ಸಾಮಗ್ರಿಗಳಿಗಾಗಿ ದೂರದ ಪಟ್ಟಣಕ್ಕೆ ತೆರಳಬೇಕಿತ್ತು. ಆದರೆ ಪ್ರಸ್ತುತ ನಮ್ಮ ಕಾಲ ಬುಡದಲ್ಲೇ ಎಲ್ಲ ಬಗೆಯ ಸಾಮಗ್ರಿಗಳು ದೊರಕುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಅಸೋಸಿಯೇಶನ್‌ ಗೌರವಾಧ್ಯಕ್ಷ ಶ್ರೀನಾಗೇಶ್‌ ಹೆಗ್ಡೆ ಅವರು, ಒಂದೇ ಸೂರಿನಡಿ ಎಲ್ಲ ಬಗೆಯ ಉತ್ತಮ ಗುಣಮಟ್ಟದ ಸಾಮಗ್ರಿಗಳು ದೊರಕುತ್ತಿದ್ದು, ಎಲ್ಲರಿಗೂ ಅನುಕೂಲವಾಗಿದೆ ಎಂದು ತಿಳಿಸಿದರು.

ಶಾಂತಾ ಎಲೆಕ್ಟ್ರಿಕಲ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌ನ ಎಂಡಿ ಶ್ರೀಪತಿ ಭಟ್‌, 3 ದಿನಗಳ ಪ್ರದರ್ಶನದ ಯಶಸ್ಸಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು.ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಗೋಪಾಲ ಎಂ. ಭಟ್‌, ಯು.ಎಸ್‌. ಕಮ್ಯೂನಿಕೇಶನ್ಸ್‌ನ ಉಮಾಪತಿ, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಅಸೋಸಿಯೇಶನ್‌ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಅಸೋಸಿಯೇಶನ್‌ ಅಧ್ಯಕ್ಷ ಪಾಂಡುರಂಗ ಆಚಾರ್‌ ಕೆ. ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಯೋಗೀಶ್ಚಂದ್ರಧರ ವಂದಿಸಿದರು. ಅರ್ಚನಾ ಪ್ರೊಜೆಕ್ಟ್ ನ ಪಾಲುದಾರ ಅಮಿತ್‌ ಅರವಿಂದ್‌ ನಿರೂಪಿಸಿದರು.

ಕಟ್ಟಡ ಸಾಮಗ್ರಿಗಳ ಪ್ರದರ್ಶನ
ಎಲ್ಲ ತಾಲೂಕುಗಳ ಎಂಜಿನಿಯರ್, ಕಾಂಟ್ರಾಕ್ಟರ್, ಬಿಲ್ಡರ್, ಡೆವಲಪರ್, ಕಟ್ಟಡ ಸಾಮಗ್ರಿಗಳ ಉತ್ಪಾದಕರು ಮತ್ತು ಮಾರಾಟಗಾರರು, ಮೇಸನ್ಸ್‌, ಪೈಂಟರ್, ಫ್ಲಂಬರ್, ಟೈಲ್ಸ್‌ ಫಿಟ್ಟರ್, ಬಾರ್‌ ಬೆಂಡರ್ ಮತ್ತು ಸೆಂಟ್ರಿಂಗ್‌ ಇರುವರು. ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಅಗತ್ಯ ಸಾಲ ಸೌಲಭ್ಯಗಳ ಮಾಹಿತಿ ದೊರಕುವುದು. ರಾಷ್ಟ್ರ, ಅಂತಾರಾಷ್ಟ್ರೀಯ ಉತ್ಪಾದಕರಿಂದ ಕಟ್ಟಡ ಸಾಮಗ್ರಿಗಳು, ಇಂಟೀರಿಯರ್, ಎಕ್ಸ್‌ಟೀರಿಯರ್ ಉತ್ಪನ್ನಗಳು, ಕನ್‌ಸ್ಟ್ರಕ್ಷನ್‌ ಟೆಕ್ನಾಲಜೀಸ್‌, ಸೋಲಾರ್‌ ಪ್ರೊಡಕ್ಟ್, ಫ್ಲೋರಿಂಗ್‌ ಮತ್ತು ರೂಫಿಂಗ್‌ಗೆ ಸಂಬಂಧಿಸಿದ ಉತ್ಪನ್ನಗಳು, ಪೈಂಟ್ಸ್‌/ವಾಟರ್‌ ಪ್ರೂಫ್ ಕೆಮಿಕಲ್ಸ್‌, ಸ್ಟೀಲ್‌, ಸಿಮೆಂಟ್‌, ಪ್ಲೆವುಡ್‌, ಸೇಫ್ಟಿ ಮತ್ತು ಮೆಷಿನರಿ ಎಕ್ವಿಪ್‌ಮೆಂಟ್ಸ್‌, ಎಲಿವೇಟರ್ ಹೀಗೆ ಹತ್ತಾರು ಕಟ್ಟಡ ಸಾಮಗ್ರಿ ಇಲ್ಲಿನ ಆಕರ್ಷಣೆಯಾಗಿದೆ.

 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.