ಉಡುಪಿ ಪುತ್ತಿಗೆ ಮಠ ಇಂದು ಉತ್ತರಾಧಿಕಾರಿ ಸ್ವೀಕಾರ
Team Udayavani, Apr 22, 2019, 6:30 AM IST
ಉಡುಪಿ: ಅಷ್ಟಮಠಗಳಲ್ಲಿ ಒಂದಾಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪಟ್ಟಶಿಷ್ಯರ ಸ್ವೀಕಾರ ಸಮಾರಂಭ ಎ. 22ರಂದು ಪೂರ್ವಾಹ್ನ 11.45ಕ್ಕೆ ಹಿರಿಯಡಕ ಸಮೀಪದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ಸರಳವಾಗಿ ಜರಗಲಿದೆ.
ಎಂಜಿನಿಯರಿಂಗ್ ಪದವೀಧರ ಪ್ರಶಾಂತ ಆಚಾರ್ಯ (27) ಅವರನ್ನು ಶ್ರೀ ಸುಗುಣೇಂದ್ರತೀರ್ಥರು ಮಠದ ಕಿರಿಯ ಯತಿಯಾಗಿ ನೇಮಿಸಲಿದ್ದಾರೆ.
ಶ್ರೀ ಪುತ್ತಿಗೆ ಮಠದ ಶ್ರೀ ಉಪೇಂದ್ರತೀರ್ಥ ಶ್ರೀಪಾದರ 750 ವರ್ಷಗಳ ಗುರುಪರಂಪರೆಯಲ್ಲಿ 30ನೇ ಯತಿಗಳಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 12ನೇ ವಯಸ್ಸಿನಲ್ಲಿ ಬಾಲ ಸನ್ಯಾಸ ಸ್ವೀಕರಿಸಿದ್ದರು. ಸೋಮವಾರಕ್ಕೆ ಸನ್ಯಾಸ ಸ್ವೀಕರಿಸಿ 45 ಸಂವತ್ಸರಗಳನ್ನು ಪೂರೈಸಲಿದ್ದಾರೆ.
ಶ್ರೀಗಳು ದೇಶ ವಿದೇಶದಲ್ಲಿ ಧರ್ಮ ಪ್ರಸಾರ ಕಾರ್ಯದ ಮೂಲಕ ಪ್ರಸಿದ್ಧರು.
ಪ್ರಶಾಂತ ಆಚಾರ್ಯ ಅವರು ಕುಂಜಿಬೆಟ್ಟಿನ ಗುರುರಾಜ ಆಚಾರ್ಯ ಮತ್ತು ವಿನುತಾ ಆಚಾರ್ಯ ದಂಪತಿಯ ಪುತ್ರ. ಸಂಸ್ಕೃತದ ಬಗ್ಗೆ ಮೂಲಜ್ಞಾನವಿದೆ.
ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಬಾಲ್ಯದಿಂದಲೇ ಅಧ್ಯಾತ್ಮದ ಒಲವಿತ್ತು. ಜಾತಕ ಪರಿಶೀಲಿಸಿ ಆಯ್ಕೆ ಮಾಡಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!