‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ
Team Udayavani, Mar 10, 2021, 8:25 AM IST
ಬೆಂಗಳೂರು: ‘ಸ್ಯಾಟಲೈಟ್ ಮ್ಯಾನ್’ ಎಂಬ ಬಿರುದಾಂಕಿತ ವಿಜ್ಞಾನಿ, ಇಸ್ರೋ ಮಾಜಿ ಮುಖ್ಯಸ್ಥರಾದ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನವನ್ನು ಗೂಗಲ್ ತನ್ನ ಡೂಡಲ್ ಮೂಲಕ ಬುಧವಾರ ವಿಶಿಷ್ಟವಾಗಿ ಆಚರಿಸಿದೆ.
ರಾಮಚಂದ್ರರಾವ್ ಉಡುಪಿ ಸಮೀಪದ ‘ಮಾರ್ಪಳ್ಳಿ’ಯಲ್ಲಿ ಮಾರ್ಚ್ 10, 1932ರಲ್ಲಿ ಜನಿಸಿದರು. ಇವರ ತಾಯಿ ಕೃಷ್ಣವೇಣೀಯಮ್ಮ, ತಂದೆ, ಲಕ್ಷ್ಮೀನಾರಾಯಣರಾವ್. ಇವರದು ಕೃಷಿಕ ಕುಟುಂಬ. ಡಾ ಯು.ಆರ್.ರಾವ್, ಎಂದೇ ಚಿರಪರಿಚಿತರಾಗಿರುವ ಉಡುಪಿ ರಾಮಚಂದ್ರರಾವ್, ‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ’ (ಇಸ್ರೋ)ಯ ಮಾಜಿ ಮುಖ್ಯಸ್ಥರಾಗಿ ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ. ರಾಮಚಂದ್ರ ರಾವ್, ಅಂತರರಾಷ್ಟ್ರೀಯ ವೈಮಾನಿಕ ಫೆಡರೇಷನ್ ಸಂಸ್ಥೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಅತ್ಯುತ್ತಮ ಸೇವೆಸಲ್ಲಿಸಿದವರಲ್ಲಿ ಪ್ರಮುಖರು.
ರಾಮಚಂದ್ರರಾಯರು, ಉಡುಪಿ, ಅನಂತಪುರ, ಮದ್ರಾಸ್, ಬನಾರಸ್ ಮೊದಲಾದ ಸ್ಥಳಗಳಲ್ಲಿ ಅಧ್ಯಯನ ಮಾಡಿದರು. ಭಾರತದ ಬಾಹ್ಯಾಕಾಶ ಯೋಜನೆಯ ಪಿತಾಮಹ ಎಂದೇ ಖ್ಯಾತರಾಗಿದ್ದ ವಿಕ್ರಮ್ ಸಾರಾಭಾಯಿಯವರ ಮಾರ್ಗದರ್ಶನದಲ್ಲಿ ವಿಶ್ವಕಿರಣಗಳ ಬಗೆಗೆ ಅಧ್ಯಯನ ಮಾಡಿ ಗುಜರಾತ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದರು. ಬಳಿಕ ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿ. ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಸಂಶೋಧಕರಾಗಿ, ಉಪನ್ಯಾಸಕರಾಗಿ ದುಡಿದು, 1966 ರಲ್ಲಿ ಭಾರತಕ್ಕೆ ಮರಳಿದರು.
ಇದನ್ನೂ ಓದಿ: ಅಯೋಧ್ಯೆ ಸುಸಜ್ಜಿತ ವಿಮಾನ ನಿಲ್ದಾಣ ಶೀಘ್ರ ಸಾರ್ವಜನಿಕರಿಗೆ ಸಂಚಾರ ಮುಕ್ತ
ಮೊದಲಿಗೆ ‘ಅಹಮದಾಬಾದಿನ ಫಿಜಿಕಲ್ ರಿಸರ್ಚ್ ಲೆಬೊರೆಟರಿ’ಯಲ್ಲಿ ಪ್ರಾಧ್ಯಾಪಕರಾಗಿದ್ದ ಪ್ರೊ.ಯು.ಆರ್.ರಾವ್ ಆ ಬಳಿಕ ಇಸ್ರೊದಲ್ಲಿ ಸೇವೆಗೈದರು. ಬಾಹ್ಯಾಕಾಶ ಕಕ್ಷೆಗೆ ಅನೇಕ ಉಪಗ್ರಹಗಳನ್ನುಸೇರಿಸಿದ ಕೀರ್ತಿ ಡಾ.ಯು.ಆರ್.ರಾವ್ ಅವರದು.
ಇವರ ಸಾಧನೆಯನ್ನು ಪರಿಗಣಿಸಿ ಭಾರತದ ಎರಡನೇ ಅತಿ ಶ್ರೇಷ್ಠ ಪ್ರಶಸ್ತಿ ಪದ್ಮ ವಿಭೂಷಣ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ನಾಸಾ ಪುರಸ್ಕಾರ ಮೊದಲಾದ ಗೌರವಗಳು ಲಭಿಸಿವೆ. ಇದರ ಜೊತೆಗೆ ‘ಪ್ರತಿಷ್ಠಿತ ಸ್ಯಾಟಲೈಟ್ ಹಾಲ್ ಆಫ್ ಫೇಮ್’ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರು 2017ರ ಜುಲೈ 24 ರಂದು ಬೆಂಗಳೂರಿನಲ್ಲಿ ನಿಧನರಾದರು.
ಇದನ್ನೂ ಓದಿ: ಎಲ್ಪಿಜಿ ದರ ದುಪ್ಪಟ್ಟು: ಧರ್ಮೇಂದ್ರ ಪ್ರಧಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!