ಉಡುಪಿಯಲ್ಲಿ  ಭಕ್ತರಿಂದ ಅಂತಿಮ ದರ್ಶನ


Team Udayavani, Jul 20, 2018, 9:38 AM IST

7650768304astr6379.png

ಉಡುಪಿ: ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಪಾರ್ಥಿವ ಶರೀರವನ್ನು ಗುರುವಾರ ಅಪರಾಹ್ನ 3.30ಕ್ಕೆ ರಥಬೀದಿಗೆ ತಂದಾಗ ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು. ಪಾರ್ಥಿವ ಶರೀರಕ್ಕೆ ಕಾವಿವಸ್ತ್ರವನ್ನು ಉಡಿಸಿ ಸಾಸಿವೆ, ಉಪ್ಪು, ಕಾಳು ಮೆಣಸು,ಹತ್ತಿ, ಪಚ್ಚೆ ಕರ್ಪೂರ ಮತ್ತು ಪೂಜಾ ಸಾಮಗ್ರಿಗಳಿದ್ದ ಬುಟ್ಟಿ ಪಲ್ಲಕಿಯಲ್ಲಿ ರಿಸಿ ರಥಬೀದಿಯ ಶೀರೂರು ಮಠಕ್ಕೆ ತರಲಾಯಿತು. ಮಠದ ದೇವರಿಗೆ ಪ್ರದಕ್ಷಿಣೆ ಬಂದ ಬಳಿಕ ಸ್ನಾನ ಮಾಡಿಸ ಲಾಯಿತು. ಪುನಃ ಪ್ರದಕ್ಷಿಣೆ ತಂದು ಶ್ರೀ ದೇವರ ಮುಂದೆ ಕುಳ್ಳಿರಿಸಲಾಯಿತು. ದೇವರ ಮಂಗಳಾ ರತಿಯ ಬಳಿಕ ಶ್ರೀಗಳಿಗೆ ಆರತಿ ಬೆಳಗಲಾಯಿತು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಶಾಸಕ ರಘುಪತಿ ಭಟ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ಅಂತಿಮ ನಮನ ಸಲ್ಲಿಸಿದರು. ಅನಂತರ ಸುಮಾರು 1 ತಾಸು ಶೀರೂರು ಮಠದ ಮುಂಭಾಗ ಅಂತಿಮ ನಮನಕ್ಕೆ ಅವಕಾಶ ನೀಡಲಾಯಿತು. ಕೇಮಾರು ಶ್ರೀ ಈಶ ವಿಟಲದಾಸ ಸ್ವಾಮೀಜಿ ಉಪಸ್ಥಿತರಿದ್ದರು. 

ಕನಕನ ಕಿಂಡಿ ಮೂಲಕ ದರ್ಶನ 
ಮರಣೋತ್ತರ ಪರೀಕ್ಷೆ ನಡೆಸಿದ ಕಾರಣ ಪಾರ್ಥಿವ ಶರೀರವನ್ನು ಶ್ರೀಕೃಷ್ಣ ಮಠದೊಳಗೆ ಒಯ್ಯದೆ ಕನಕನ ಕಿಂಡಿ ಮೂಲಕ ಕೃಷ್ಣದರ್ಶನ ಮಾಡಿಸಲಾಯಿತು. ಪರ್ಯಾಯ ಶ್ರೀ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ಆರತಿಯೆತ್ತಿ ಶ್ರೀಗಳಿಗೂ ಬೆಳಗಿದರು. ಅನಂತರ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರಿಗೆ ದೇವರಿಗೆ ಸಮರ್ಪಿಸಿದ ತುಳಸಿ ಮಾಲೆಯನ್ನು ಅರ್ಪಿಸಿದರು. ಅಲ್ಲಿಂದ ಚಂದ್ರಮೌಳೀಶ್ವರ, ಅನಂತೇಶ್ವರ ದೇವರ ದರ್ಶನ ಮಾಡಿಸಿ ರಥಬೀದಿಗೆ ಪ್ರದಕ್ಷಿಣೆ ಬಂದು ಹಿರಿಯಡಕ ಸಮೀಪದ ಶೀರೂರು ಮೂಲ ಮಠಕ್ಕೆ ಕರೆದೊಯ್ಯಲಾಯಿತು. 

ಹಿಂಬಾಗಿಲಿನಿಂದ ಪ್ರವೇಶ
ಬೆಳಗ್ಗೆ 11 ಗಂಟೆ ಸುಮಾರಿಗೆ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ
ಯಿದ್ದುದರಿಂದ ಸಾಕಷ್ಟು ಮಂದಿ ಭಕ್ತರು ಸೇರಿದ್ದರು. ಮಧ್ಯಾಹ್ನ ವೇಳೆ ಜನ ಕೊಂಚ ಕಡಿಮೆಯಾದರೂ ಶ್ರೀಗಳ ಶರೀರವನ್ನು ಮಠದ ಬಳಿ ತರುವಷ್ಟರಲ್ಲಿ ಮತ್ತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಹೀಗಾಗಿ ಶೀರೂರು ಮಠಕ್ಕೆ ಶ್ರೀಗಳ ಶರೀರವನ್ನು ಹಿಂಬಾಗಿಲ ಮೂಲಕ ತರಲಾಯಿತು.

ಸೋದೆ ಮಠದ ನೇತೃತ್ವ
ಶ್ರೀಗಳ ವೃಂದಾವನ ಸೇರ್ಪಡೆಯ ಎಲ್ಲ ವಿಧಿವಿಧಾನಗಳನ್ನು ಸೋದೆ ಮಠದ ನೇತೃತ್ವದಲ್ಲಿ ನಡೆಸಲಾಯಿತು.
ಶಿಷ್ಯರನ್ನು ಗುರುತಿಸಿದ್ದರೆ  ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು ತಮ್ಮ ಪಟ್ಟಶಿಷ್ಯನನ್ನು ಗುರುತಿಸಿದ್ದರು ಎಂದು ಬಲ್ಲ ಮೂಲಗಳು ತಿಳಿಸಿವೆ. ಸೂಕ್ತ ಸಮಯದಲ್ಲಿ ಘೋಷಿಸಲು ಚಿಂತನೆ ನಡೆಸಿದ್ದರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.

ನಿರಂತರ ನಗಾರಿ ವಾದನ

ಅಷ್ಟಮಠಗಳ ಶ್ರೀಗಳು ಅಸ್ತಂಗತರಾದರೆ ಸಂತಾಪ ಸೂಚಕವಾಗಿ 54 ಬಾರಿ ಬೆಡಿ ಸಿಡಿಸಲಾಗುತ್ತದೆ ಮತ್ತು ನಿರಂತರವಾಗಿ ನಗಾರಿ ಬಾರಿಸಲಾಗುತ್ತದೆ. ಹಿಂದೆ ಈ ಬೆಡಿ ಸದ್ದು ಸುಮಾರು 15ರಿಂದ 20 ಕಿ.ಮೀ. ವರೆಗೆ ಕೇಳಿಸುತ್ತಿತ್ತು. ಈ ಮೂಲಕವೇ ಕೃಷ್ಣ ಮಠದಲ್ಲಿ ಶ್ರೀಗಳು ನಿಧನರಾಗಿದ್ದಾರೆ ಎನ್ನುವ ವಾರ್ತೆ ಊರಿ ನವರಿಗೆ ತಿಳಿಯುತ್ತಿತ್ತು. ಗುರುವಾರ ಕೃಷ್ಣ ಮಠದ ನಗಾರಿ ಬಾರಿಸುವ ಸದಾಶಿವ ಮಧ್ಯಾಹ್ನದಿಂದಲೇ ನಗಾರಿ ಬಾರಿಸುತ್ತಿದ್ದರು. ನಗಾರಿ ಚರ್ಮ ಸಡಿಲು ಬಿಟ್ಟು ಬಾರಿಸುವ ಇದನ್ನು ಹಸಿ ನಗಾರಿ ಎನ್ನುತ್ತಾರೆ. ಇದರ ಧ್ವನಿ ಭಿನ್ನವಾಗಿರುತ್ತದೆ. 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.