ಉಡುಪಿ: ರಸ್ತೆಯಲ್ಲಿ ನೋಟಿನ ಕಂತೆಗಳನ್ನು ಹರಡಿ ಯುವಕನ ಅವಾಂತರ!
Team Udayavani, Apr 13, 2020, 1:18 PM IST
ಉಡುಪಿ; ಇಲ್ಲಿನ ವಾದಿರಾಜ ರಸ್ತೆಯಲ್ಲಿ ಯವಕನೋರ್ವ ನೋಟಿನ ಕಂತೆ ಹರಡಿ ಕೆಲ ಕಾಲ ಆತಂಕ ಸ್ರಷ್ಟಿಸಿದ ಘಟನೆ ಸೋಮವಾರ ನಡೆದಿದೆ.
ಸೋಮ ವಾರ ಯುವಕನೋರ್ವ ರಸ್ತೆಯಲ್ಲಿ ಎಲ್ಲೆಂದರಲ್ಲಿ ನೋಟುಗಳನ್ನ ಚೆಲ್ಲಿದ್ದಾನೆ. ಎರಡು ಸಾವಿರ, ಐನೂರು ಹಾಗೂ ಇನ್ನೂರರ ನೋಟುಗಳನ್ನ ನಡೆದುಕೊಂಡು ಹೋಗುತ್ತಿದ್ದಂತೆ ಚೆಲ್ಲಿದ್ದಾನೆ. ಇದನ್ನು ಕಂಡ ಜನತೆಯೂ ನೋಟು ಹೆಕ್ಕಲು ಮುಗಿಬಿದ್ದಿದ್ದಾರೆ. ಆದರೆ ಈ ನೋಟುಗಳೆಲ್ಲವೂ ನಕಲಿ ನೋಟುಗಳಾಗಿದ್ದವು. ಅವುಗಳೆಲ್ಲಾ ಜೆರಾಕ್ಸ್ ಮಾಡಲಾದ ನೋಟುಗಳು ಎಂದು ತಿಳಿದುಬಂದಿದೆ.
ವಿಷಯ ತಿಳಿದ ಜನ ,ಕೂಡಲೇ ಯುವಕನನ್ನು ಹಿಡಿಯಲು ಯತ್ನಿಸಿದ್ದಾರೆ. ಅದರೆ ಯುವಕ ಪರಾರಿಯಾಗಿದ್ದಾನೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮಧುಕರ್ ಮುದ್ರಾಡಿ ಎಲ್ಲಾ ನಕಲಿ ನೋಟುಗಳನ್ನ ಸಂಗ್ರಹಿಸಿ ನಗರ ಠಾಣ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನಲ್ಲಿ ಬಳಿ ಎರಡಕ್ಕಿಂತಲೂ ಹೆಚ್ಚು ನೋಟಿನ ಬಂಡಲ್ ಇದ್ದವು ಎನ್ನಲಾಗಿದೆ.
ಮಹಾಮಾರಿ ಕೋವಿಡ್ -19 ವೈರಸ್ ನೋಟುಗಳ ಮೂಲಕ ಹರಿಯಬಿಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಂಡಿದ್ದ ಜನ ,ಇದೀಗ ಭಯಪಟ್ಟಿದ್ದಾರೆ. ದುಷ್ಕರ್ಮಿಗಳು ನೋಟುಗಳ ಮೂಲಕ ಜನರನ್ನ ಭಯ ಪಡಿಸುವ ಯತ್ನಇದಾಗಿರಬಹುದೆಂದು ಮಧುಕರ್ ಮುದ್ರಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್