ಉಡುಪಿ ನಗರ ಯುಜಿಡಿ ಅಭಿವೃದ್ಧಿ; ಇನ್ನೂ ಬಾರದ ನಿರೀಕ್ಷಿತ ಅನುದಾನ


Team Udayavani, Nov 11, 2022, 10:49 AM IST

6

ಉಡುಪಿ: ನಗರದಲ್ಲಿ ವ್ಯವಸ್ಥಿತ ಒಳಚರಂಡಿ ವ್ಯವಸ್ಥೆ (ಯುಜಿಡಿ) ರೂಪುಗೊಳ್ಳಲು ಇನ್ನೆಷ್ಟು ವರ್ಷ ಕಾಯಬೇಕು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಈಗಾಗಲೆ ಉಡುಪಿ ನಗರದ ಒಳಚರಂಡಿ ಅವ್ಯವಸ್ಥೆಯಿಂದ ಅಂತರ್ಜಲ ದಿನದಿಂದ ದಿನಕ್ಕೆ ಕಲುಷಿತವಾಗುತ್ತಿದೆ. ಇಂದ್ರಾಣಿ ನದಿ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ.

ಸಮರ್ಪಕವಾದ ಯುಜಿಡಿ ವ್ಯವಸ್ಥೆ ಇರದಿರುವುದು ಸುತ್ತಲಿನ ಪ್ರದೇಶ ಹಾಗೂ ಜಲಮೂಲಗಳಿಗೆ ಕಂಟಕವಾಗಿ ಪರಿಣಮಿಸುತ್ತಿದೆ. ನಗರದ ಯುಜಿಡಿ ವ್ಯವಸ್ಥೆ ಮರುಸ್ಥಾಪನೆಗೆ 330 ಕೋಟಿ ರೂ. ವೆಚ್ಚದ ಯೋಜನೆಯನ್ನು ನಗರಸಭೆ ಸರಕಾರಕ್ಕೆ ಸಲ್ಲಿಸಿ ವರ್ಷ ಕಳೆದಿದೆ. ಅನುದಾನ ಬಿಡುಗಡೆಗೆ ಸರಕಾರ ಮೀನಮೇಷ ಎಣಿಸುತ್ತಿದ್ದು, ಈ ಯೋಜನೆ ನನೆಗುದಿಗೆ ಬೀಳದಂತೆ ಜನ ಪ್ರತಿನಿಧಿಗಳು ಎಚ್ಚರವಹಿಸಬೇಕಿದೆ.

ಬೆಳೆದ ನಗರ, ಹೆಚ್ಚಿದ ಒತ್ತಡ ನಗರಸಭೆ ವ್ಯಾಪ್ತಿಯ ಶೇ. 17ರಷ್ಟು ಪ್ರದೇಶದಲ್ಲಿ ಕೆಲವು ದಶಕಗಳ ಹಿಂದೆ ನಿರ್ಮಿಸಿದ ಒಳ ಚರಂಡಿ ವ್ಯವಸ್ಥೆ ಇದ್ದರೂ, ಅದರ ಆರೋಗ್ಯ ಕೆಟ್ಟಿದೆ. ಆಗಿನ ಜನಸಂಖ್ಯೆಯನುಸಾರ ನಿರ್ಮಿಸಲಾಗಿದ್ದ ಒಳ ಚರಂಡಿಗಳು, ನಗರ ಬೆಳೆದಂತೆ ಒತ್ತಡ ಹೆಚ್ಚಾಗಿ ಪ್ರಯೋಜನಕ್ಕೆ ಬಾರದಾಗಿವೆ. ಎರಡು ಹಂತಗಳಲ್ಲಿ ಒಳಚರಂಡಿ ವ್ಯವಸ್ಥೆ ಮೇಲ್ದರ್ಜೆಗೇರಿದರೂ ವ್ಯವಸ್ಥಿತಗೊಳಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಸದಾ ಒಳಚರಂಡಿ ಸಮಸ್ಯೆ ನಾಗರಿಕರನ್ನು ಕಾಡತೊಡಗಿದೆ. ಅಲ್ಲಲ್ಲಿ ಪೈಪ್‌ಗಳು ಒಡೆಯುತ್ತಿದೆ. ಎಲ್ಲ ತ್ಯಾಜ್ಯವು ಇಂದ್ರಾಣಿ ನದಿಯ ಒಡಲು ಸೇರಿ ಕಲುಷಿತವಾಗಿದ್ದು, ಇಂದ್ರಾಣಿ ನದಿಯನ್ನು ಪುನಶ್ಚೇತನಗೊಳಿಸಬೇಕಿದೆ. ಇಂದ್ರಾಳಿಯಿಂದ ಕಲ್ಮಾಡಿವರೆಗೂ ನಗರದ ಒಳ ಚರಂಡಿಯ ತ್ಯಾಜ್ಯ ನೀರು ಮಳೆ ನೀರಿನ ಚರಂಡಿ ಮೂಲಕ ಇಂದ್ರಾಳಿಯನ್ನು ಸೇರುತ್ತಿದೆ.

ಹೊಸ ಪ್ರಸ್ತಾವನೆಯಲ್ಲಿ ಯುಜಿಡಿ ವ್ಯವಸ್ಥೆಯನ್ನು 148 ಕಿ.ಮೀ. ವಿಸ್ತರಿಸಲಾಗಿದೆ. ಪ್ರತೀ 30 ಮೀಟರ್‌ಗೆ ಒಂದರಂತೆ 5,600 ಮ್ಯಾನ್‌ ಹೋಲ್‌, 5 ವೆಟ್‌ವೆಲ್‌ಗ‌ಳು ನಿರ್ಮಾಣವಾಗಲಿವೆ. ಸರಕಾರ ಶೀಘ್ರ ಅನುದಾನ ಒದಗಿಸಲು ಕ್ರಮ ತೆಗೆದುಕೊಳ್ಳಬೇಕಿದೆ.

ಏನಿದು ಯುಜಿಡಿ?

ಮನೆ (ಅಪಾರ್ಟ್‌ಮೆಂಟ್‌ ಸಹಿತ), ಕೈಗಾರಿಕೆ, ಹೊಟೇಲ್‌, ರೆಸ್ಟೋರೆಂಟ್‌, ವಾಣಿಜ್ಯ ಮಳಿಗೆಗಳಿಂದ ಹೊರ ಬರುವ ಕೊಳಚೆ ನೀರು ವ್ಯವಸ್ಥಿತವಾಗಿ ಭೂಮಿಯ ಒಳಗೆ ಹರಿಯುವ ವ್ಯವಸ್ಥೆಯೇ ಒಳಚರಂಡಿ (ಯುಜಿಡಿ: ಅಂಡರ್‌ ಗ್ರೌಂಡ್‌ ಡ್ರೈನೇಜ್‌). ಇದರ ಮೂಲಕ ಹರಿದ ನೀರನ್ನು ಶುದ್ಧೀಕರಣ ಘಟಕಗಳಿಗೆ ಹರಿಸಿ ಅಲ್ಲಿ ಶುದ್ಧೀಕರಿಸಿ ಮರುಬಳಕೆಗೆ ಯುಕ್ತಗೊಳಿಸುವ ವ್ಯವಸ್ಥೆಯೇ ಕೊಳಚೆ ನೀರು ನಿರ್ವಹಣೆ ಮತ್ತು ಶುದ್ಧೀರಣ ವ್ಯವಸ್ಥೆ.

ಇಂದ್ರಾಣಿ ನದಿ ಪುನಶ್ಚೇತನ ಅಗತ್ಯ

ಇಂದ್ರಾಣಿ ನದಿ ಪುನಶ್ಚೇತನಕ್ಕೆ ಈ ಯೋಜನೆ ಅಗತ್ಯವಾಗಿ ಅನುಷ್ಠಾನಗೊಳ್ಳಬೇಕಿದೆ. ಪ್ರಸ್ತುತ ನಗರದ ಎಲ್ಲ ತ್ಯಾಜ್ಯವು ಇಂದ್ರಾಣಿ ನದಿಯ ಒಡಲು ಸೇರಿ ಕಲುಷಿತವಾಗಿದೆ. ಇಂದ್ರಾಳಿಯಿಂದ ಕಲ್ಮಾಡಿವರೆಗೂ ನಗರದ ಒಳಚರಂಡಿಯ ತ್ಯಾಜ್ಯ ನೀರು ಮಳೆ ನೀರಿನ ಚರಂಡಿ ಮೂಲಕ ಇಂದ್ರಾಳಿಯನ್ನು ಸೇರುತ್ತಿದೆ. ಇಲ್ಲಿನ ನೀರು ಬಣ್ಣ ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿ, ಹಲವೆಡೆ ಪರಿಸರ ದುರ್ವಾಸನೆಯಿಂದ ಕೂಡಿರುತ್ತದೆ. ನಗರ ಭಾಗದಲ್ಲಿ 800ಕ್ಕೂ ಅಧಿಕ ಬಾವಿಗಳು ಸಂಪೂರ್ಣ ಹದಗೆಟ್ಟಿವೆ.

ಸರಕಾರ ಅನುಮೋದನೆ: ನಗರಸಭೆ ವ್ಯವಸ್ಥಿತ ಯುಜಿಡಿ ರೂಪಿಸಲು ಸಲ್ಲಿಸಿದ ಯೋಜನಾ ವರದಿಗೆ ಸರಕಾರ ಅನುಮೋದನೆ ನೀಡಿದ್ದು, ಅನುದಾನ ಬಿಡುಗಡೆಗಾಗಿ ಶಾಸಕ ರಘುಪತಿ ಭಟ್‌ ಅವರ ನೇತೃತ್ವದಲ್ಲಿ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿದೆ. ಸಿಎಂ ಅವರು ಉಡುಪಿಗೆ ಆಗಮಿಸಿದ್ದಾಗಲೂ ಈ ಬಗ್ಗೆ ಚರ್ಚೆ ನಡೆದಿದೆ. ಸದ್ಯದ ಮಟ್ಟಿಗೆ ನಾಗರಿಕರಿಗೆ ಸಮಸ್ಯೆಯಾಗದಂತೆ ಒಳಚರಂಡಿಯ ತುರ್ತು ಕಾಮಗಾರಿಗಳನ್ನು ನಗರಸಭೆ ಅನುದಾನದಿಂದ ಹಂತಹಂತವಾಗಿ ನಡೆಸಲಾಗುತ್ತಿದೆ. ಕಲ್ಸಂಕ ವೆಟ್‌ ವೆಲ್‌, ಕಿನ್ನಿಮೂಲ್ಕಿ, ಶಾರದಾ ಹೊಟೇಲ್‌ ಬಳಿ ಕಾಮಗಾರಿ ನಿರ್ವಹಿಸಲಾಗಿದೆ. – ಸುಮಿತ್ರಾ ನಾಯಕ್‌, ಅಧ್ಯಕ್ಷರು, ಉಡುಪಿ ನಗರಸಭೆ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.