ಮಂಗಳೂರು ವಿಶ್ವವಿದ್ಯಾನಿಲಯ; ಹೈನುಗಾರಿಕೆ ವಿಜ್ಞಾನ ಸಂಶೋಧನ ಪೀಠಕ್ಕೆ ಸಿದ್ಧತೆ

ಐವರು ಸದಸ್ಯರ ಸಾಧ್ಯತಾ ಸಮಿತಿ ರಚನೆ

Team Udayavani, Oct 17, 2020, 1:08 AM IST

ಮಂಗಳೂರು ವಿಶ್ವವಿದ್ಯಾನಿಲಯ; ಹೈನುಗಾರಿಕೆ ವಿಜ್ಞಾನ ಸಂಶೋಧನ ಪೀಠಕ್ಕೆ ಸಿದ್ಧತೆ

ಸಾಂದರ್ಭಿಕ ಚಿತ್ರ

ಕಾರ್ಕಳ: ಹೈನುಗಾರಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ನೂತನ ತಂತ್ರಜ್ಞಾನಗಳ ಅಧ್ಯಯನಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಹೈನುಗಾರಿಕೆ ವಿಜ್ಞಾನ ಸಂಶೋಧನ ಪೀಠ ಸ್ಥಾಪನೆಗೆ ಚಾಲನೆ ದೊರಕಿದ್ದು, ಐವರನ್ನೊಳಗೊಂಡ ಸಾಧ್ಯತಾ ಸಮಿತಿಯ ರಚನೆಯಾಗಿದೆ.

ಸಂಶೋಧನಾ ಪೀಠ ಸ್ಥಾಪಿಸುವಂತೆ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸಾಣೂರು ನರಸಿಂಹ ಕಾಮತ್‌ ಅವರು ಮಂಗಳೂರು ವಿ.ವಿ. ಸಿಂಡಿಕೇಟ್‌ ಸದಸ್ಯ ಮೋಹನ ಪಡಿವಾಳ ಅವರ ಮೂಲಕ ಪ್ರಸ್ತಾವ ಸಲ್ಲಿಸಿದ್ದರು. ಸಿಂಡಿಕೇಟ್‌ ಸಭೆಯಲ್ಲಿ ಚರ್ಚೆ ನಡೆದು ವಿ.ವಿ.ಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್‌, ಸಿಂಡಿಕೇಟ್‌ ಸದಸ್ಯ ಪ್ರೊ| ಡಿ. ಶಿವಲಿಂಗಯ್ಯ ಅವರ ನೇತೃತ್ವದಲ್ಲಿ ಸಮಿತಿ ರಚನೆಗೊಂಡಿದೆ. ಸಮಿತಿಯು ಪ್ರಸ್ತಾವನೆಯ ಅಂಶಗಳ ಅಧ್ಯಯನ ಮಾಡುವುದಲ್ಲದೆ ಸಂಶೋಧನ ಕೇಂದ್ರದ ಸಾಧ್ಯತಾ ವರದಿ ಸಿದ್ಧಪಡಿಸಲಿದೆ.

ಎರಡನೇ ಹಂತದಲ್ಲಿ ಪ್ರಸಕ್ತ ಹೈನೋದ್ಯಮದ ಸ್ಥಿತಿಗತಿ, ಸಂಶೋಧನಾ ಘಟಕದ ಆವಶ್ಯಕತೆ, ಸ್ಥಾಪನೆಗೆ ಕಾರಣ, ಘಟಕದ ಕಾರ್ಯಚಟುವಟಿಕೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸರಕಾರಕ್ಕೆ ಅನುಮತಿ ಮತ್ತು ಆರ್ಥಿಕ ಸಹಕಾರಕ್ಕೆ ಮನವಿ ಮಾಡಲಿದೆ.

ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರ‌ರಿದ್ದು, ರಾಜ್ಯದ 14 ಹಾಲು ಒಕ್ಕೂಟಗಳಲ್ಲಿ ದ.ಕ. ಸಹಕಾರಿ ಹಾಲು ಒಕ್ಕೂಟ ಅತ್ಯಂತ ಹೆಚ್ಚು ಗುಣಮಟ್ಟದ ಹಾಲು ಒದಗಿಸುವುದಲ್ಲದೆ ಹಾಲು ಸಂಗ್ರಹಣೆಯಲ್ಲಿ ಮೊದಲ ಸ್ಥಾನದಲ್ಲಿದೆ. ಹೈನುಗಾರರಿಗೆ ಗರಿಷ್ಠ ಮೊತ್ತವನ್ನು ಪಾವತಿಸುತ್ತಿದೆ.

ಉಪಯೋಗವೇನು?
ಆಧುನಿಕ ತಂತ್ರಜ್ಞಾನದ ಸದ್ಬಳಕೆ, ದೇಶ- ವಿದೇಶಗಳ ಸಂಪನ್ಮೂಲಗಳ ಬಳಕೆ, ಅಧ್ಯಯನ, ಜಾನುವಾರು ತಳಿ ಅಭಿವೃದ್ಧಿ ಹಾಗೂ ಗುಣಮಟ್ಟ ಅಳವಡಿಕೆ ಕುರಿತು ತರಬೇತಿ ನೀಡಲು ಅನುಕೂಲವಾಗಲಿದೆ. ಹೈನೋದ್ಯಮ ಕ್ಷೇತ್ರವನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸಿ, ಪೂರ್ಣ ಯಾಂತ್ರೀಕರಣಗೊಳಿಸುವುದು, ಸಂಶೋಧನೆಗೆ ಪೂರಕ ಅವಕಾಶ, ತತ್ರಾಂಶ, ಮಾಹಿತಿ, ಆರ್ಥಿಕ ಸೌಲಭ್ಯ ಒದಗಿಸುವುದಲ್ಲದೆ ಯುವ ಸಮೂಹ ಹಾಗೂ ಆಸಕ್ತ ಸ್ಥಳೀಯ ಹೈನುಗಾರರಿಗೆ ತರಗತಿ ಶಿಕ್ಷಣ ದೊರೆತು ಹೈನುಗಾರಿಕೆ ಬಗ್ಗೆ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಲಿದೆ. ಉದ್ಯೋಗಾವಕಾಶ ಹೆಚ್ಚುವುದಲ್ಲದೆ ವಿದ್ಯಾರ್ಥಿಗಳಲ್ಲಿ ಕೃಷಿ-ಹೈನುಗಾರಿಕೆಯತ್ತ ಒಲವು ಹೆಚ್ಚಾಗಬಹುದು. ಕೇಂದ್ರ ತೆರೆಯಲು ಸುಮಾರು 5 ಕೋ.ರೂ. ನೆರವಿನ ಆವಶ್ಯಕತೆಯೂ ಇದೆ.

ಅಂಕಿ-ಅಂಶ
ರಾಜ್ಯದಲ್ಲಿರುವ ಸಹಕಾರಿ ಸಂಘಗಳು-14
ಹಾಲು ಉತ್ಪಾದಕ ಸಂಘ-16,000
ಒಕ್ಕೂಟದಲ್ಲಿರುವ ಸಹಕಾರಿ ಹಾಲು ಒಕ್ಕೂಟ-726
ನಿತ್ಯ ಹಾಲು ಸಂಗ್ರಹಣೆ-5 ಲಕ್ಷ ಲೀ.
ಅವಿಭಜಿತ ದ.ಕ. ಜಿಲ್ಲೆಯಲ್ಲಿರುವ ಹೈನುಗಾರರು-80 ಸಾವಿರಕ್ಕೂ ಅಧಿಕ

ಸಂಶೋಧನ ಕೇಂದ್ರ ತೆರೆಯುವ ಬಗ್ಗೆ ಸಮಿತಿ ರಚನೆಯಾಗಿದ್ದು, ಸಮಿತಿಯು ಸಂಪೂರ್ಣ ಆಧ್ಯಯನ ನಡೆಸಲಿದೆ. ಆರ್ಥಿಕ ನೆರವು ಇತ್ಯಾದಿಗಳ ಬಗ್ಗೆ ಈಗ ಯೋಚಿಸಿಲ್ಲ.
– ಮೋಹನ ಪಡಿವಾಳ, ವಿ.ವಿ.ಯ ಸಿಂಡಿಕೇಟ್‌ ಸದಸ್ಯ

ಹೈನುಗಾರಿಕಾ ಸಂಶೋಧನ ಕೇಂದ್ರ ಸ್ಥಾಪನೆಯಾದಲ್ಲಿ ನವತಂತ್ರಜ್ಞಾನಗಳ ಮೂಲಕ ಹೈನುಗಾರಿಕಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ.
– ನರಸಿಂಹ ಕಾಮತ್‌ ಸಾಣೂರು, ನಿರ್ದೇಶಕರು, ದ.ಕ. ಸಹಕಾರಿ ಹಾಲು ಒಕ್ಕೂಟ

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.