ಉಪ್ಪುಂದ: ಲಾಡ್ಜ್ ನಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ: ಐವರ ಬಂಧನ
Team Udayavani, Sep 3, 2020, 7:54 PM IST
ಉಪ್ಪುಂದ: ಲಾಡ್ಜ್ ಒಂದರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಗಾಂಜಾ ವಶಪಡಿಸಿಕೊಂಡು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ (24), ಕೇರಳ ತಿರುವನಂತಪುರಂ ನಿವಾಸಿ ಯದುನಾರಾಯಣ (21), ಬಿಜೂರು ನಿವಾಸಿ ಗುರುರಾಜ್ ಪೂಜಾರಿ (25), ಉಪ್ಪುಂದ ನಿವಾಸಿ ಸುನಿಲ್ ಪೂಜಾರಿ (26) ಮತ್ತು ಬಿಜೂರು ನಿವಾಸಿ ರವಿ (25) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 2ರಂದು ಬೆಳಗ್ಗಿನ ಜಾವ 3 ಗಂಟೆಗೆ ಬೈಂದೂರು ಪೊಲಿಸ್ ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯಕ್ ಅವರಿಗೆ ಬಂದ ಅಧಿಕೃತ ಮಾಹಿತಿ ಆಧರಿಸಿ ನಂದನವನ ಗ್ರಾಮದ ಲಾಡ್ಜಿಗೆ ದಾಳಿ ನಡೆಸಲಾಗಿತ್ತು. ದಾಳಿ ಸಂದರ್ಭ ರೂಂ ಒಂದರಲ್ಲಿ ಗಾಂಜಾ ಸೇವಿಸುತ್ತಿದ್ದುದು ಪತ್ತೆಯಾಗಿದೆ. ಅಲ್ಲದೇ ಆರೋಪಿ ಯೋಗೇಶ್ ಗಾಣಿಗ ಬ್ಯಾಗಿನಲ್ಲಿ 40 ಗ್ರಾಂ ಗಾಂಜಾ ಪತ್ತೆಯಾಗಿದೆ.
ದಾಳಿ ಸಂದರ್ಭ ಆರೋಪಿಗಳಿಗೆ ಭಟ್ಕಳ ಮೂಲದ ಶಬೀರ್ ಎಂಬಾತ ಗಾಂಜಾ ಸರಬರಾಜು ಮಾಡುತ್ತಿದ್ದ ಎನ್ನುವುದು ತಿಳಿದು ಬಂದಿದೆ. ಬ್ಯಾಗಿನಲ್ಲಿ ಗಾಂಜಾ ಸೇವಿಸಲು ಬಳಸುವ ಒಸಿಬಿ ಸ್ಲಿಮ್ ಪ್ರೀಮಿಯಂ ಎನ್ನುವ ಕಾಗದದ ಚೂರುಗಳು ಪತ್ತೆಯಾಗಿವೆ.
ಆರೋಪಿತರಿಂದ 6 ಮೊಬೈಲ್ ಫೋನ್, 3 ದ್ವಿಚಕ್ರ ವಾಹನ ಸೇರಿದಂತೆ ರೂ. 1,71,500.00 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ