Malpe: ವಡಭಾಂಡ ಬಲರಾಮ ದೇವಸ್ಥಾನ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಮಕ್ಕಳನ್ನು ದೇವಸ್ಥಾನಗಳಿಗೆ ಕರೆತನ್ನಿ : ಪೇಜಾವರ ಶ್ರೀ

Team Udayavani, Mar 22, 2024, 12:31 PM IST

4-malpe

ಮಲ್ಪೆ: ಮಕ್ಕಳನ್ನು ದೇವಸ್ಥಾನಗಳಿಗೆ ಹೆಚ್ಚು ಹೆಚ್ಚು ಕರೆತರುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರದ ಪರಿಚಯವನ್ನು ಮಾಡಿಸಬೇಕಾಗಿದೆ. ಮುಂದೆ ಅವರ ಮೂಲಕ ನಿರಂತರವಾಗಿ ಈ ಸಂಸ್ಕೃತಿ ಬೆಳಗಬೇಕು, ಈ ನಿಟ್ಟಿನಲ್ಲಿ ದೇವರ ಅನುಗ್ರಹ ಇಡೀ ಗ್ರಾಮಕ್ಕೆ ಸದಾ ದೊರಕುವಂತಾಗಲಿ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನುಡಿದರು.

ಅವರು ಗುರುವಾರ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ದೇವರ ಅನುಗ್ರಹ ಇದ್ದರೆ ಮಾತ್ರ ನಮ್ಮ ಬದುಕಿನ ಪ್ರಯತ್ನ ಯಶ್ವಸಿಯಾಗುತ್ತದೆ. ನಮ್ಮ ಎಲ್ಲ ಶ್ರಮ ಸಾರ್ಥಕವಾಗುವುದು ಸತ್ಕರ್ಮಗಳು ನಿರಂತರವಾಗಿ ನಡೆದಾಗ ಮಾತ್ರ. ಬಲರಾಮ ದೇವಸ್ಥಾನದಲ್ಲಿ  ನಿರಂತರವಾಗಿ ಒಳ್ಳೆಯ ಕೆಲಸ ಕಾರ್ಯಕ್ರಮಗಳು ನಡೆದು ನಾಡಿಗೆ ಸುಭಿಕ್ಷೆ, ಜನರಿಗೆ ನೆಮ್ಮದಿಯ ಬದುಕು ದೊರೆಯುವಂತಾಗಲಿ ಎಂದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ವೇ| ಮೂ| ವೇದವ್ಯಾಸ ಐತಾಳ ಸಗ್ರಿ ಅವರಿಂದ ಪ್ರವಚನ ನಡೆಯಿತು.

ಮುಖ್ಯ ಅತಿಥಿಗಳಾಗಿ ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌, ಮಾಜಿ ಶಾಸಕ ರಘುಪತಿ ಭಟ್‌, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರು ಪ್ರವೀಣ್‌ ಎಂ. ಪೂಜಾರಿ, ಮಲ್ಪೆ ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಸುಭಾಸ್‌ ಮೆಂಡನ್‌, ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಬಲ್ಲಾಳ್‌, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸಂದೀಪ್‌ ಕುಮಾರ್‌ ಮಂಜ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಮಂಜುನಾಥ ಉಪಾಧ್ಯಾಯ, ನಗರಸಭಾ ಸದಸ್ಯೆ ಎಡ್ಲಿನ್‌ ಕರ್ಕಡ, ಲೆಕ್ಕ ಪರಿಶೋಧಕ ಪ್ರಶಾಂತ್‌ ಹೊಳ್ಳ, ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಸತ್ಯನಾರಾಯಣದ ಆಚಾರ್ಯ, ಉದ್ಯಮಿ ಪ್ರಶಾಂತ್‌ ಬನ್ನಂಜೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ ಮೂಲಿಗಾರ್‌, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಜಿ. ಕೊಡವೂರು, ಕಾರ್ಯದರ್ಶಿ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

ವಿಕ್ರಮ್‌ ಟಿ. ಶ್ರೀಯಾನ್‌ ಸ್ವಾಗತಿಸಿದರು. ನಿರೂಪಿಸಿ, ವಂದಿಸಿದರು. ಪೂರ್ಣಿಮಾ ಜನಾರ್ದನ ನಿರೂಪಿಸಿದರು, ಸತೀಶ್‌ ಕೊಡವೂರು ವಂದಿಸಿದರು.

ಇಂದು ದೇವರ ಪ್ರತಿಷ್ಠೆ, ಮಹಾ ಅನ್ನಸಂತರ್ಪಣೆ

ಗುರುವಾರ ಸೂರ್ಯಾಸ್ತದಿಂದ ಶುಕ್ರವಾರ ಸುರ್ಯೋದಯದ ವರೆಗೆ ನಡೆಯುವ ಭಜನೆಗೆ ಪೇಜಾವರ ಶೀಗಳು ಚಾಲನೆ ನೀಡಿದರು. ಬೆಳಗ್ಗೆ ಗಣಪತಿ ಯಾಗ, ಪೂರ್ಣ ಗ್ರಹಶಾಂತಿ, ಚೋರ ಶಾಂತಿ, ಗೋಪೂಜೆ, ಪ್ರತ್ಯಕ್ಷ ಗೋದಾನ, ಶಿಲಾ ಪ್ರತಿಷ್ಠೆ, ಪೀಠ ಪ್ರತಿಷ್ಠೆಯಾಗಲಿದೆ. ಬೆಳಗ್ಗಿನ 10.06ರ ವೃಷಭ ಲಗ್ನದಲ್ಲಿ ಪರಿವಾರ ಸಹಿತ ದೇವರ ಬಿಂಬ ಪ್ರತಿಷ್ಠೆಗೊಳ್ಳಲಿದೆ. ಬಳಿಕ ಜೀವಕುಂಭಾಭಿಷೇಕ, ನಿದ್ರಾಕುಂಭ, ತತ್ವಕಲಶಾಭಿಷೇಕ, ನ್ಯಾಸಪೂಜೆ, ಪ್ರತಿಷ್ಠಾಂಗ ಬಲಿ, ನಿತ್ಯ ನೈಮಿತ್ತಿಕ ಪೂಜಾ ವಿಧಿ ಜರಗಲಿರುವುದು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.