ವಿದ್ಯಾನಿಧಿಗೆ ಸರ್ಕಾರದ ಷರತ್ತುಗಳ ವಿಘ್ನ

ಕೃಷಿ ಜಮೀನು ಹೊಂದಿರುವ ರೈತರ ಮಕ್ಕಳಿಗೆ ಮಾತ್ರ ವಿದ್ಯಾರ್ಥಿವೇತನ  ಮಾಹಿತಿ ಸಂಗ್ರಹ ಪ್ರಕ್ರಿಯೆ ಆರಂಭ

Team Udayavani, Nov 12, 2021, 11:45 AM IST

ವಿದ್ಯಾನಿಧಿಗೆ ಸರ್ಕಾರದ ಷರತ್ತುಗಳ ವಿಘ್ನ

ಉಡುಪಿ: ರೈತರ ಮಕ್ಕಳಿಗೆ ಸರ್ಕಾರದ ವಿದ್ಯಾನಿಧಿ ವಿದ್ಯಾರ್ಥಿ ವೇತನ ಒದಗಿಸಲು ಮಾಹಿತಿ ಸಂಗ್ರಹ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾನಿಧಿ ಪಡೆಯಲು ಸರ್ಕಾರ ವಿಧಿಸಿರುವ ಷರತ್ತು ಪೂರೈಸುವುದೇ ಕಷ್ಟಸಾಧ್ಯವಾಗಿದೆ. ತಂದೆ ಅಥವಾ ತಾಯಿ ನಿರ್ದಿಷ್ಟ ಕೃಷಿ ಜಮೀನು ಹೊಂದಿದ್ದರೆ ಮಾತ್ರ ಅವರ ಮಕ್ಕಳು ವಿದ್ಯಾನಿಧಿ ಪಡೆಯಲು ಅರ್ಹರು.

ಸ್ವಂತ ಜಮೀನು ಇಲ್ಲದೆ ಬೇರೆಯವರ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರ ಮಕ್ಕಳು, ಕೇಂದ್ರ ಅಥವಾ ರಾಜ್ಯ ಸರ್ಕಾರದ ಇತರ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿ ವೇತನ ಪಡೆ ಯುವ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸಿಗುವುದಿಲ್ಲ. ಈ ಎರಡು ಷರತ್ತುಗಳೇ ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ. ರೈತ ವಿದ್ಯಾನಿಧಿ ಪಡೆಯಲು ವಿದ್ಯಾರ್ಥಿಗಳಿಗೆ ಜಾತಿ ಅಥವಾ ಆದಾಯದ ಮಿತಿ ಇಲ್ಲ. ಎಲ್ಲ ವರ್ಗದವರಿಗೂ ಅನ್ವಯಿಸುತ್ತದೆ.

ಆದರೆ ವಿದ್ಯಾರ್ಥಿಯ ತಂದೆ ಅಥವಾ ತಾಯಿಯ ಹೆಸರಿನಲ್ಲಿ ಕೃಷಿ ಭೂಮಿ ಇರಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಿತ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯಾವುದೇ ವಿದ್ಯಾರ್ಥಿ ವೇತನ, ಮೆರಿಟ್‌ ಶಿಷ್ಯವೇತನ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಅನ್ವಯಿಸುವುದಿಲ್ಲ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿ ಮಾಹಿತಿ ಸಂಗ್ರಹ: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಬಂದಿರುವ ಸೂಚನೆಯಂತೆ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ (ಎಸ್‌ಎಟಿಎಸ್‌)ಯಲ್ಲಿ ಅಪ್‌ ಡೇಟ್‌ ಮಾಡುತ್ತಿದ್ದೇವೆ. ಅಪ್‌ಡೇಟ್‌ ಮಾಡಿದ ಮಾಹಿತಿಯನ್ನು ಕೃಷಿ ಇಲಾಖೆಯವರು ಪಡೆದು, ಅಲ್ಲಿಂದ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ವಿದ್ಯಾನಿಧಿ ಹಣ ಜಮಾ ಮಾಡುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯಿಂದ ಕೃಷಿಕ ಕುಟುಂಬದ ವಿದ್ಯಾರ್ಥಿಗಳ ಮಾಹಿತಿಯನ್ನು ಮಾತ್ರ ಅಪ್‌ಲೋಡ್‌ ಮಾಡುತ್ತಿಲ್ಲ.

ಇದನ್ನೂ ಓದಿ:– ಸೆಮಿ ಫೈನಲ್ ನಲ್ಲಿ ಸೋಲುಂಡ ಪಾಕ್: ಮತ್ತೆ ಟ್ರೆಂಡ್ ಆಗುತ್ತಿದೆ ‘ಮೌಕಾ ಮೌಕಾ’

ಎಲ್ಲ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್‌ ಮಾಡುತ್ತಿದ್ದೇವೆ. ಕೃಷಿಕ ಕುಟುಂಬದ ವಿದ್ಯಾರ್ಥಿಗಳು ಯಾರು ಎಂಬುದನ್ನು ಕೃಷಿ ಇಲಾಖೆಯಿಂದ ದೃಢೀಕರಿಸಿ ವಿದ್ಯಾನಿಧಿ ನೀಡುತ್ತಾರೆ. ವಿದ್ಯಾರ್ಥಿಗಳ ಕುಟುಂಬದ ಜಮೀನಿನ ಮಾಹಿತಿ ಕೃಷಿ ಇಲಾಖೆಯಲ್ಲೇ ಇರುವುದರಿಂದ ಅಲ್ಲಿಂದಲೇ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಡಿಡಿಪಿಯು ಮಾರುತಿ ವಿವರ ನೀಡಿದ್ದಾರೆ.

ಆಧಾರ್‌ ಲಿಂಕ್‌: ರಾಜ್ಯದ ಪದವಿಪೂರ್ವ ಮಟ್ಟದ ಸುಮಾರು 3,500 ವಿದ್ಯಾರ್ಥಿಗಳ ಆಧಾರ್‌ ಸಂಖ್ಯೆ ಯೂ ಬ್ಯಾಂಕ್‌ ಖಾತೆಗಳಿಗೆ ಲಿಂಕ್‌ ಆಗಿಲ್ಲ. ಬ್ಯಾಂಕ್‌ ಖಾತೆಗೆ ಲಿಂಕ್‌ ಆಗಿರುವ ಅರ್ಹ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾನಿಧಿ ಸಿಗಲಿದೆ. ಉಡುಪಿ ಜಿಲ್ಲೆಯಲ್ಲಿ ಶೇ. 90ರಷ್ಟು ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡಲಾಗಿದೆ. ಉಳಿದ ಶೇ. 10ರಷ್ಟು ವಿದ್ಯಾ ರ್ಥಿಗಳ ಆಧಾರ್‌ ಲಿಂಕ್‌ ಕೂಡ ಶೀಘ್ರವೇ ಆಗಲಿದೆ. ಇದರ ಜತೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾನಿಧಿಯ ಕುರಿತು ಮಾಹಿತಿ ನೀಡುವ ಕಾರ್ಯ ಆರಂಭವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

“ವಿದ್ಯಾನಿಧಿ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳ ಆಧಾರ್‌ ಬ್ಯಾಂಕ್‌ ಖಾತೆಗೆ ಲಿಂಕ್‌ ಆಗಿರಬೇಕು. ಹಾಗೆಯೇ ಯಾರ ಹೆಸರಿನಲ್ಲಿ ಜಮೀನು ಇದೆಯೊ ಅವರ ಆಧಾರ್‌ ಕಡ್ಡಾಯವಾಗಿ ಬೇಕಾಗುತ್ತದೆ. ಇಲ್ಲಿ ಆದಾಯದ ಮಿತಿ ಇಲ್ಲ. ಜಮೀನು ಹೊಂದಿರುವ ಎಲ್ಲ ರೈತರ ಮಕ್ಕಳಿಗೂ ಇದರ ಸೌಲಭ್ಯ ಸಿಗಲಿದೆ.– ನಬ್ರಿಜೇಶ್‌ ಕುಮಾರ್‌, ಆಯುಕ್ತ, ಕೃಷಿ ಇಲಾಖೆ.

  • – ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.