ಕುಕ್ಕುಂದೂರು ಮುಕ್ತಿಧಾಮಕ್ಕೆ ಕಾಯಕಲ್ಪದ ನಿರೀಕ್ಷೆ

ಮುಕ್ತಿಧಾಮ ಅಭಿವೃದ್ಧಿಗೆ ಸ್ಥಳೀಯರ ನಿರ್ಧಾರ, ಸೇವಾ ಸಮಿತಿ ಅಸ್ತಿತ್ವಕ್ಕೆ

Team Udayavani, Sep 16, 2020, 7:37 AM IST

Udayavani Kannada Newspaper

ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರದಲ್ಲಿ ನಿರ್ವಹಣೆಯಿಲ್ಲದೆ ಸೊರಗಿದ್ದ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಸ್ಥಳೀಯ ನಾಗರಿಕರು ಮುಕ್ತಿಧಾಮ ಅಭಿವೃದ್ಧಿ ಸೇವಾ ಸಮಿತಿ ರಚಿಸಿ, ಕಾಯಕಲ್ಪ ನೀಡುವ ಕಾರ್ಯಕ್ಕೆ ಪಣತೊಟ್ಟಿದ್ದಾರೆ.

ಶ್ಮಶಾನ ಸುತ್ತಮುತ್ತಲ ಹತ್ತೂರಿನ ಗ್ರಾಮಗಳ ಜನತೆಗೆ ಶವ ಸಂಸ್ಕಾರಕ್ಕೆ ಬಹಳ ಉಪಯುಕ್ತವಾಗಿತ್ತು. ಅನಂತರದಲ್ಲಿ ನಿರ್ವಹಣೆಯಿಲ್ಲದೆ ಸೊರಗಿತ್ತು. ಪಾಳು ಬಿದ್ದ ಶ್ಮಶಾನವನ್ನು ಸುಸ್ಥಿತಿಗೆ ತರಲು ಕುಕ್ಕುಂದೂರು ಸ್ಥಳೀಯಾಡಳಿತ ಅನು ದಾನ ಮೀಸಲಿರಿಸಿದ್ದರೂ, ಅನುದಾನ ಸಾಕಾಗದೆ ಶೆಡ್‌ ಸಹಿತ ಕೆಲವು ಕೆಲಸಗಳು ಮಾತ್ರ ಆಗಿದ್ದವು. ಕಳೆದ ಕೆಲವು ಸಮಯಗಳಿಂದ ಶ್ಮಶಾನ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಲಿಲ್ಲ. ಮೂಲ ಸೌಕರ್ಯವಿಲ್ಲದೆ. ಶವವನ್ನು ಶ್ಮಶಾನ ತನಕ ತಂದು ವಾಪಸ್‌ ಕೊಂಡು ಹೋಗುವಂತಹ ಪ್ರಸಂಗ ಕೂಡ ಎದುರಾಗುತ್ತಿತ್ತು. ಶ್ಮಶಾನ ಕೊರತೆ ವಿಚಾರವಾಗಿ ಗ್ರಾ.ಪಂ. ಸಭೆ, ಸಾಮಾನ್ಯ ಸಭೆಗಳಲ್ಲಿ ಈ ಕುರಿತು ಪ್ರಶ್ನೆ, ಚರ್ಚೆಗಳು ನಡೆಯುತ್ತಿದ್ದರೂ ಅನುದಾನ ಹರಿದು ಬಾರದೇ ಇರುವುದರಿಂದ ಚರ್ಚೆ, ಮಾತುಕತೆಗೆ ಸೀಮಿತವಾಗಿತ್ತು.

ಇದೀಗ ಸ್ಥಳೀಯರು ಸುಸಜ್ಜಿತ ರುದ್ರಭೂಮಿ ನಿರ್ಮಿಸಲು ತೀರ್ಮಾನಿ ಸಿದ್ದು, ಅದಕ್ಕೆಂದೇ ಮುಕ್ತಿಧಾಮ ಅಭಿವೃದ್ಧಿ ಸೇವಾ ಸಮಿತಿ ರಚಿಸಿದ್ದಾರೆ. ಸಮಿತಿ ಅಧ್ಯಕ್ಷ ರಾಜೇಶ್‌ ರಾವ್‌ ನೇತೃತ್ವದಲ್ಲಿ ಕಾರ್ಯದರ್ಶಿ ಪ್ರತಾಪ್‌ ಮಾಬಿಯಾನ್‌, ಕೋಶಾಧಿ ಕಾರಿ ಆನಂದ ಬಂಡಿಮಠ, ಕಾನೂನು ಸಲಹೆಗಾರರಾಗಿ ಹಿರಿಯ ನ್ಯಾಯವಾದಿ ಸುನಿಲ್‌ಕುಮಾರ್‌ ಶೆಟ್ಟಿ ನೇತೃತ್ವದ 35 ಮಂದಿ ಸದಸ್ಯರನ್ನೊಳಗೊಂಡ ಸಮಿತಿ ಕಾರ್ಯಾರಂಭಿಸಿದೆ. ಸುಮಾರು 15 ಲಕ್ಷ ರೂ. ವೆಚ್ಚದ ಗುರಿ ಇರಿಸಿ ಶ್ಮಶಾನ ಅಭಿವೃದ್ಧಿಪಡಿಸಲು ನಿರ್ಧರಿಸಿ ದ್ದಾರೆ. ದಾನಿಗಳ, ಇಲಾಖೆಗಳ, ಜನಪ್ರತಿನಿಧಿಗಳ ನೆರವಿನ ನಿರೀಕ್ಷೆಯನ್ನು ಇರಿಸಿಕೊಂಡಿದ್ದಾರೆ.

ಸಮಿತಿ ರಚನೆ: ಕೆಲಸಕ್ಕೆ ವೇಗ
ಸೆ. 21ರಿಂದ ಸಾರ್ವಜನಿಕ ಬಳಕೆಗೆ ಮುಕ್ತವಾಗಿಸುವ ಗುರಿ ಇಟ್ಟುಕೊಂಡು ರುದ್ರಭೂಮಿಯನ್ನು ಸುಸಜ್ಜಿತ ಗೊಳಿಸುವ ಕಾರ್ಯ ನಡೆಯುತ್ತಿದೆ. ಸುಮಾರು 50 ಸಾವಿರ ರೂ. ವೆಚ್ಚದ ಕೆಲಸಗಳು ಈಗಾಗಲೇ ನಡೆದಿವೆ. ಇನ್ನು ಮೇಲ್ಛಾವಣಿ, ಇಂಟರ್‌ಲಾಕ್‌, ಉಳಿದ ಭಾಗಕ್ಕೆ ಕಾಂಪೌಂಡ್‌, ಗಾರ್ಡನ್‌, ನೀರು ಸಹಿತ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸುತ್ತಿದ್ದಾರೆ.

ಸುದಿನ ವರದಿಯಿಂದ ಎಚ್ಚರ
ತಾಲೂಕಿನ ಅತೀ ದೊಡ್ಡ ಗ್ರಾ.ಪಂ. ಹಾಗೂ ಹೆಚ್ಚು ಸದಸ್ಯ ಸ್ಥಾನಗಳನ್ನು ಹೊಂದಿರುವ ನಗರಕ್ಕೆ ಹತ್ತಿರವಾಗಿರುವ ಕುಕ್ಕುಂದೂರು ಗ್ರಾಮ ಪಂಚಾಯತ್‌ವ್ಯಾಪ್ತಿಯಲ್ಲಿ ಶವಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆಯಿಲ್ಲದೆ ಶ್ಮಶಾನ ಮುಚ್ಚಿರುವ ಬಗ್ಗೆ ಇತ್ತೀಚೆಗೆ ಉದಯವಾಣಿ ಸುದಿನದಲ್ಲಿ ವರದಿ ಪ್ರಕಟಗೊಂಡಿತ್ತು. ಬಳಿಕ ಈ ವಿಚಾರ ತಾ.ಪಂ. ಸಾಮಾನ್ಯ ಸಭೆಯಲ್ಲಿ ತಾ.ಪಂ. ಸದಸ್ಯ ಅಶೋಕ್‌ ಶೆಟ್ಟಿ ಪ್ರಸ್ತಾವಿಸಿದ್ದರು.

ಸ್ವಚ್ಛತೆಗೆ ಆದ್ಯತೆ
ಕುಕ್ಕುಂದೂರಿನಲ್ಲಿ ಶ್ಮಶಾನವನ್ನು ಸುಸಜ್ಜಿತಗೊಳಿಸುವ ಬಗ್ಗೆ ಚರ್ಚೆ ನಡೆಸಿ, ಸಮಿತಿ ರಚಿಸಿಕೊಂಡಿದ್ದೇವೆ. ದಾನಿಗಳು, ಇಲಾಖೆ, ಜನಪ್ರತಿನಿಧಿಗಳ ಎಲ್ಲರ ಸಹಕಾರ ಪಡೆದು ಸುಸಜ್ಜಿತವಾಗಿ ಪೂರ್ಣಗೊಳಿಸುತ್ತೇವೆ. ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಿ ನಿರ್ವಹಣೆ ಮಾಡುತ್ತೇವೆ.
-ರಾಜೇಶ್‌ ರಾವ್‌, ಮುಕ್ತಿಧಾಮ ಅಭಿವೃದ್ಧಿ ಸೇವಾ ಸಮಿತಿ

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.