ಪ್ರಮುಖ ರಸ್ತೆಗಳಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು!

ಸಾಂಕ್ರಾಮಿಕ ರೋಗ ಭೀತಿ; ವಾಣಿಜ್ಯ ಕಟ್ಟಡಗಳಿಂದ ಅವಜ್ಞೆ

Team Udayavani, Sep 30, 2020, 5:53 AM IST

udupiಪ್ರಮುಖ ರಸ್ತೆಗಳಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು!

ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದು.

ಉಡುಪಿ: ನಗರದ ಕೆಲವು ಬೃಹತ್‌ ಕಟ್ಟಡಗಳಲ್ಲಿ ಕೊಳಚೆಯನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ, ನೇರವಾಗಿ ಮಳೆನೀರು ಹರಿಯುವ ಚರಂಡಿಗೆ ಬಿಡಲಾಗುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಅದರ ಜತೆ ಕೊಳಚೆ ಸಮಸ್ಯೆಯೂ ಸೇರಿ ನಗರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ನಗರಸಭೆ ಕ್ರಮ?
ನಗರದ ಹೃದಯಭಾಗದ ಹೊಟೇಲ್‌, ಅಂಗಡಿ, ವಸತಿ ಕಟ್ಟಡಗಳು ಕೊಳಚೆ ನೀರು ವಿಲೇವಾರಿಗೆ ಡ್ರೈನೇಜ್‌ ಸಂಪರ್ಕ ಪಡೆದುಕೊಂಡಿಲ್ಲ. ಇದರಿಂದಾಗಿ ತ್ಯಾಜ್ಯ ನೀರು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ನೀರಿನ ಒಳಚರಂಡಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಹಿಂದೊಮ್ಮೆ ಪ್ರತಿಭಟನೆ ನಡೆದಿತ್ತು. ಆ ಸಂದರ್ಭದಲ್ಲಿ ನಗರಸಭೆಯ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿ ಅನಧಿಕೃತವಾಗಿ ತೋಡಿಗೆ ಬಿಟ್ಟಿದ್ದ ಕೆಲವು ವಾಣಿಜ್ಯ ಮಳಿಗೆ ಮಾಲಕರಿಗೆ ನೋಟಿಸ್‌ ನೀಡಿದ್ದರು. ಉಡುಪಿ ನಗರವನ್ನು ಸುಂದರ ನಗರವನ್ನಾಗಿ ಮಾಡುವ ಕನಸು ಕಂಡ ನಗರಾಡಳಿತ ಉಡುಪಿಯ ಭವಿಷ್ಯಕ್ಕಾಗಿ ಕೆಲವೊಂದು ನಿರ್ದಾಕ್ಷಿಣ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

ತ್ಯಾಜ್ಯ ನೀರಿನ ಸಮರ್ಪಕ ವಿಲೇವಾರಿಗೆ ಆದೇಶಿಸಿ ಪಾರ್ಕಿಂಗ್‌ ಸ್ಥಳ ಮತ್ತು ಸೆಲ್ಲಾರ್‌ನಲ್ಲಿ ಅನಧಿಕೃತವಾಗಿ ಅಂಗಡಿ ಮಾಡಿಕೊಂಡವರನ್ನು ಪತ್ತೆ ಹಚ್ಚಬೇಕು. ಜತೆಗೆ ಎಲ್ಲ ಕಟ್ಟಡಗಳು ತ್ಯಾಜ್ಯ ನೀರನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಆದೇಶ ಹೊರಡಿಸಬೇಕಾಗಿದೆ.

ರಸ್ತೆ ಮೇಲೆ ಕೊಳಚೆ ನೀರು
ಮಲ್ಪೆ- ಮಣಿಪಾಲ ಮಾರ್ಗದ ರಾಷ್ಟ್ರೀಯ ಹೆದ್ದಾರಿ 169 ಎ ಸೇರಿ ದಂತೆ ನಗರದ ವಿವಿಧ ಮುಖ್ಯರಸ್ತೆ ಸಮೀಪದಲ್ಲಿರುವ ಕೆಲವು ಸಂಕೀರ್ಣಗಳು ಕೊಳಚೆ ನೀರನ್ನು ಮಳೆ ನೀರು ಹರಿಯುವ ಚರಂಡಿ, ತೋಡುಗಳಿಗೆ ಬಿಡುತ್ತಿದ್ದಾರೆ ಎನ್ನುವ ಆರೋಪ ಹಲವು ಸಮಯಗಳಿಂದ ಕೇಳಿಬರುತ್ತಿದೆ. ಆದರೆ ಮಳೆಗಾಲದಲ್ಲಿ ವಾಣಿಜ್ಯ ಕಟ್ಟಡಗಳು ಕೊಳಚೆ ನೀರನ್ನು ನೇರವಾಗಿ ರಸ್ತೆ ಮೇಲೆ ಹರಿಸುತ್ತವೆ ಎಂಬ ಆರೋಪವೂ ಇದೆ.

ಸೆಲ್ಲರ್‌ಗಳಲ್ಲಿ ಅಂಗಡಿ ನಿರ್ಮಾಣ
ನಗರದಲ್ಲಿ ಹೆಚ್ಚಿನ ವಾಣಿಜ್ಯ ಕಟ್ಟಡ ಗಳು ನಗರಸಭೆಯಿಂದ ಪರವಾನಿಗೆ ಪಡೆದುಕೊಳ್ಳುವ ತನಕ ಸೆಲ್ಲರ್‌, ಪಾರ್ಕಿಂಗ್‌ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಇತ್ಯಾದಿ ಕುರಿತ ಸ್ಪಷ್ಟ ಚಿತ್ರವನ್ನು ಕಟ್ಟಡ ನಕ್ಷೆಯಲ್ಲಿ ಕಾಣಿಸುತ್ತಾರೆ. ಕಟ್ಟಡಕ್ಕೆ ಲೈಸೆನ್ಸ್‌ ದೊರೆತ ತತ್‌ಕ್ಷಣ ಸೆಲ್ಲರ್‌ ಮತ್ತು ವಾಹನ ಪಾರ್ಕಿಂಗ್‌ ಪ್ರದೇಶ ಅಂಗಡಿಗಳಾಗಿ ಪರಿವರ್ತನೆ ಮಾಡುತ್ತಾರೆ ಎನ್ನುವ ಆರೋಪವೂ ಇದೆ. ಇಂತಹ ಸ್ಥಳಗಳೇ ಮೊನ್ನೆಯ ವರುಣನ ಅರ್ಭಟಕ್ಕೆ ಅತಿ ಹೆಚ್ಚಿನ ಸಮಸ್ಯೆಯನ್ನು ಅನುಭವಿಸಿವೆ.

ನಗರಸಭೆಯಿಂದ ನೋಟಿಸ್‌
ಕೊಳಚೆ ನೀರು ಮಳೆ ನೀರು ಒಳಚರಂಡಿ ಹಾಗೂ ರಸ್ತೆಗಳ ಮೇಲೆ ಹರಿ ಬಿಡುತ್ತಿರುವುದು ಕಂಡು ಬಂದರೆ, ಕಟ್ಟಡ ಮಾಲಿಕರಿಗೆ ಪ್ರಾಥಮಿಕ ಹಂತದಲ್ಲಿ ತ್ಯಾಜ್ಯ ನೀರು ಸಮರ್ಪಕ ವಿಲೇವಾರಿಗೆ ಮಾರ್ಗವನ್ನು ಕಂಡುಕೊಳ್ಳುವಂತೆ ಆದೇಶಿಸಲಾಗುತ್ತದೆ. ಅನಂತರವೂ ಅವರು ಪರ್ಯಾಯ ಮಾರ್ಗ ಕಂಡುಕೊಳ್ಳದೆ ಇದ್ದರೆ ಅವರಿಗೆ ನಗರಸಭೆಯಿಂದ ನೋಟಿಸ್‌ ನೀಡಲಾಗುತ್ತದೆ.
-ಸ್ನೇಹ, ಪರಿಸರ ಎಂಜಿನಿಯರ್‌, ನಗರಸಭೆ, ಉಡುಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.