ನೀರು ರಸ್ತೆ ಪಾಲು, ವಾಹನ ಸಂಚಾರ ದುಸ್ತರ
Team Udayavani, Nov 14, 2022, 9:33 AM IST
ಉಡುಪಿ: ಪೆರಂಪಳ್ಳಿ- ಮಣಿಪಾಲ ರಸ್ತೆಯಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿ ಯಾಗಿ ಸಾಕಷ್ಟು ಪ್ರಮಾಣದ ನೀರು ಪೋಲಾಗುತ್ತಿರುವ ಜತೆಗೆ ವಾಹನ ಸವಾರ ರಿಗೂ ಸಂಚಾರ ತೊಂದರೆಯಾಗುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ವೃತ್ತದಿಂದ ಪೆರಂಪಳ್ಳಿಗೆ ಹೋಗುವ ಮಾರ್ಗದಲ್ಲಿ ಭಾರತೀಯ ವಿಕಾಸ್ ಟ್ರಸ್ಟ್ (ಬಿವಿಟಿ) ಕಚೇರಿ ಸಮೀಪದಲ್ಲಿ ಪೈಪ್ ಲೈನ್ ಹಾಳಾಗಿ ಕಳೆದ ನಾಲ್ಕೈದು ದಿನದಿಂದ ನಿರಂತರ ಸಾಕಷ್ಟು ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಪೈಪ್ಲೈನ್ ಸಂಪೂರ್ಣವಾಗಿ ಹಾಳಾಗಿರುವುದರಿಂದ ರಸ್ತೆಯ ಮೇಲಿಂದಲೇ ನೀರು ಹರಿದುಹೋಗುತ್ತಿದೆ. ದ್ವಿಚಕ್ರ ಸವಾರರಿಗೆ ಸಂಚಾರಕ್ಕೂ ಕಷ್ಟವಾಗುತ್ತಿದೆ.
ಪೈಪ್ಲೈನ್ ಹಾಳಾಗಿರುವ ಜಾಗವು ಸದ್ಯ ಸಣ್ಣ ಕೆರೆಯಂತಾಗಿದೆ. ಮೂರ್ನಾಲ್ಕು ಅಡಿಗೂ ಆಳವಾದ ಹೊಂಡದಲ್ಲಿ ನೀರು ತುಂಬಿಕೊಂಡಿದೆ. ಪಾದಚಾರಿಗಳಿಗೂ ಸಮಸ್ಯೆಯಾಗುವ ಸಾಧ್ಯತೆಯಿದೆ. ರಾತ್ರಿ ವೇಳೆಯಲ್ಲಿ ನೀರಿನ ಹೊಂಡ ಗಮನಿಸದೆ ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಅಥವಾ ಸ್ಥಳೀಯಾಡಳಿತ ತುರ್ತಾಗಿ ಪರಿಹಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ನಗರಕ್ಕೆ ದಿನದ 24 ಗಂಟೆ ಕುಡಿಯುವ ನೀರು ಪೂರೈಕೆ ಸಂಬಂಧ ವಾರಾಹಿ ನೀರುಸರಬರಾಜು ಯೋಜನೆಯ ಪೈಪ್ಲೈನ್ ಇದಾಗಿದೆ. ನೀರು ಪೂರೈಕೆ ಪ್ರಕ್ರಿಯೆ ಪರೀಕ್ಷಿಸಲು ಕೆಲವು ಕಡೆಗಳಲ್ಲಿ ಮುಖ್ಯ ಸಂಪರ್ಕ ಕೊಂಡಿಗಳನ್ನು ತೆರೆದು ಪರಿಶೀಲನೆ ನಡೆಸಲಾಗುತ್ತಿದೆ. ಈ ವೇಳೆ ಒತ್ತಡ ಅಧಿಕವಾಗಿ ನೀರು ಪೋಲಾಗಿರುತ್ತದೆ. ಎರಡು ದಿನಗಳ ಹಿಂದೆ ಸರಿಪಡಿಸಲಾಗಿತ್ತು. ನೀರು ಪೋಲಾಗದಂತೆ ವ್ಯವಸ್ಥಿತವಾಗಿ ಪೈಪ್ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು. –ರಾಜಶೇಖರ್, ಕುಡ್ಸೆಂಪ್ ಎಂಜಿನಿಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…