ಇಂದ್ರಾಳಿ ದಲಿತ ಕಾಲನಿಯಲ್ಲಿ ಹನಿ ನೀರಿಗೂ ತತ್ವಾರ


Team Udayavani, Apr 29, 2019, 6:30 AM IST

indrali

ಉಡುಪಿ: ಹನಿ ನೀರಿಗಾಗಿ ಪರದಾತ್ತಿರುವ ಜನ, ನೀರಿಗಾಗಿ ಕಾದು ಕೂತರೆ ತುತ್ತಿಗೆ ಕತ್ತರಿ ಬೀಳುವ ಆತಂಕ. ಇಂತಹ ಸ್ಥಿತಿ ಇರುವುದು ಇಂದ್ರಾಳಿ ವಾರ್ಡ್‌
ನ ಮಂಚಿಯ ದಲಿತ ಕಾಲನಿಯಲ್ಲಿ.

ವರ್ಷಗಳ ಸಮಸ್ಯೆಗೆ ಪರಿಹಾರವಿಲ್ಲ!
ಇಂದ್ರಾಳಿ ವಾರ್ಡ್‌ ವ್ಯಾಪ್ತಿಯಲ್ಲಿ 1,250 ಮನೆಗಳಿವೆ. ಸುಮಾರು 6,000 ಜನಸಂಖ್ಯೆ ಇದೆ. ಇತರೆ ವಾರ್ಡ್‌ಗಳಂತೆ ಈ ವಾರ್ಡ್‌ಗೆ ಮೂರು ದಿನಕ್ಕೊಮ್ಮೆ ನೀರು ಬಿಟ್ಟರೂ ಎತ್ತರದಲ್ಲಿರುವ ದಲಿತ ಕಾಲನಿಗಳಿಗೆ ನೀರು ತಲುಪುತ್ತಿಲ್ಲ. ಇದು ಇಂದು ನಿನ್ನೆಯ ಕಥೆಯಲ್ಲ, ಆನೇಕ ವರ್ಷದಿಂದ ಈ ಸಮಸ್ಯೆ ಉಲ್ಬಣಿಸುತ್ತಿದ್ದರೂ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ ಎಂಬ ಆರೋಪವಿದೆ.

ವಿ.ಪಿ. ನಗರ, ಇಂದ್ರಾಳಿ ರೈಲ್ವೇ ನಿಲ್ದಾಣ, ದುರ್ಗಾನಗರ, ಹಯಗ್ರೀವ ನಗರದ ಕೆಲವೊಂದು ಮನೆಗಳಲ್ಲಿ ಬಾವಿ ಹಾಗೂ ನೀರಿನ ದಾಸ್ತಾನಿಗೆ ಪರ್ಯಾಯ ವ್ಯವಸ್ಥೆ ಇದೆ. ಆದರೆ ಎತ್ತರದ ಪ್ರದೇಶ‌ ಮಂಜುಶ್ರೀ ನಗರ, ಮಂಚಿ ಕೆಳ ಮಂಚಿ, ಮಂಚಿ ಶಾಲೆ, ಮಂಚಿ ಕುಮೇರಿಯ ಮನೆಗಳಲ್ಲಿ ನೀರಿನ ಸಂಗ್ರಹಣೆಗೆ ಅಗತ್ಯವಿರುವ ವ್ಯವಸ್ಥೆ ಇಲ್ಲದ ಕಾರಣ ನೀರಿನ ಸಮಸ್ಯೆ ಈ ಪ್ರದೇಶದಲ್ಲಿ ತುಸು ಹೆಚ್ಚಾಗಿದೆ.

ಸ್ನಾನಕ್ಕೆ ಬೇರೆ ಪ್ರದೇಶಕ್ಕೆ ತೆರಳಬೇಕು
ಬಸವಳಿದು ಬಂದರೆ ಸ್ನಾನ ಮಾಡಲು ಸಹ ನೀರು ಸಿಗುತ್ತಿಲ್ಲ. ಒಮ್ಮೆ ಹಾಕಿಕೊಂಡ ಬಟ್ಟೆಯನ್ನು ಮತ್ತೆ ಹಾಕಿಕೊಳ್ಳಬೇಕಾದ ಪರಿಸ್ಥಿತಿ. ನಗರಸಭೆಯಿಂದ ಬಿಡುವ ನೀರು ಎತ್ತರ ಪ್ರದೇಶದ ಮನೆಗಳಿಗೆ ತಲುಪುತ್ತಿಲ್ಲ ಎನ್ನುತ್ತಾರೆ ಪ.ಪಂ. ಕಾಲನಿಯ ವಿಜಯ.

ಊಟಕ್ಕಿಂತ ನೀರೇ ದುಬಾರಿ!
ಮೇ ತಿಂಗಳಿನಲ್ಲಿ ಮಗನ ಮದುವೆ ಇದೆ. ಸಮಾರಂಭದ ನಿಮಿತ್ತ ಸಂಬಂಧಿಕರು ಬರುತ್ತಾರೆ. ಇದೇ ರೀತಿ ನೀರಿನ ಸಮಸ್ಯೆ ಎದುರಾದರೇನು ಎಂಬ ಚಿಂತೆ ಕಾಡುತ್ತಿದೆ. ಮದುವೆ ಊಟದ ಖರ್ಚಿಗಿಂತ ನೀರಿನ ಖರ್ಚು ಹೆಚ್ಚಾಗುತ್ತದೆ ಎನ್ನುವ ಆತಂಕ ಕಾಡುತ್ತಿದೆ ಎನ್ನುತ್ತಾರೆ ಮಂಜುಶ್ರೀ ನಗರದ ಆನಂದ.

ಇದುವರೆೆಗೂ ಕಾಣದ ಜಲಕ್ಷಾಮ
ದುರ್ಗಾ ನಗರದಲ್ಲಿ 33 ವರ್ಷದಿಂದ ವಾಸಿಸುತ್ತಿದ್ದೇನೆ. ಆದರೆ ಇದುವರೆಗೆ ಈ ತರಹದ ಜಲಕ್ಷಾಮ ಕಂಡಿಲ್ಲ. ವರ್ಷದಿಂದ ವರ್ಷಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದೀಗ ನಗರಸಭೆಯಿಂದ ಮೂರು ದಿನಕ್ಕೊಮ್ಮೆ ಬಿಡುವ ನೀರು ಸಹ ಸಾಕಾಗುತ್ತಿಲ್ಲ. ಮನೆಯಲ್ಲಿ 8 ಮಂದಿ ಇದ್ದೇವೆ. ಎಲ್ಲರೂ ಹೊಟ್ಟೆಪಾಡಿಗಾಗಿ ಕೆಲಸಕ್ಕೆ ಹೋಗುತ್ತೇವೆ. ನೀರಿಗಾಗಿ ಕಾದು ಕುಳಿತುಕೊಳ್ಳಲು ಒಬ್ಬರು ರಜೆ ಪಡೆದು ಮನೆಯಲ್ಲಿ ಇರುತ್ತಾರೆ ಎನ್ನುತ್ತಾರೆ ಇಂದ್ರಾಳಿ ದುರ್ಗಾ ನಗರದ ಮೀನು ವ್ಯಾಪಾರಿ ಮಹಿಳೆ ವನಜಾ.

ವಾರ್ಡ್‌ ಜನರ ಬೇಡಿಕೆ
– ಟ್ಯಾಂಕರ್‌ ನೀರು ಒದಗಿಸಿ
– ನೀರು ದಾಸ್ತಾನು ಮಾಡಲು ಪರ್ಯಾಯ ವ್ಯವಸ್ಥೆ
– ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣಕ್ಕೆ ಒತ್ತಡ

ಓವರ್‌ ಹೆಡ್‌ ಟ್ಯಾಂಕ್‌ನಿಂದ ಸಮಸ್ಯೆಗೆ ಮುಕ್ತಿ
ಇಂದ್ರಾಳಿ ವಾರ್ಡ್‌ಗೆ ವಿ.ಪಿ. ನಗರದಲ್ಲಿ ಒಂದು ಓವರ್‌ ಹೆಡ್‌ ಟ್ಯಾಂಕ್‌ ಇದೆ. ಈ ಪ್ರದೇಶದಿಂದ ಸುಮಾರು ಮೂರೂವರೆ ಕಿ.ಮೀ. ದೂರದಲ್ಲಿರುವ ಮಂಚಿಗೆ ನೀರು ತಲುಪಬೇಕು. ಬೆಳಗ್ಗೆ 6ಕ್ಕೆ ನೀರು ಬಿಟ್ಟರೂ ಮಧ್ಯಾಹ್ನ 2 ಗಂಟೆವರೆಗೆ ತಲುಪುದಿಲ್ಲ. ಅದೇ ಪ್ರದೇಶದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣವಾದರೆ ಈ ಸಮಸ್ಯೆಗೆ ಮುಕ್ತಿ ಸಿಗುತ್ತದೆ.
-ಅಶೋಕ್‌, ಇಂದ್ರಾಳಿ ವಾರ್ಡ್‌ ನಗರಸಭೆ ಸದಸ್ಯ

ನೀರು ದಾಸ್ತಾನು ಮಾಡಲು ವ್ಯವಸ್ಥೆಯಿಲ್ಲ
ಕಳೆದ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದೀಗ ಐದಾರು ದಿನಗಳಿಗೊಮ್ಮೆ ಬರುವ ನೀರು ದಾಸ್ತಾನು ಮಾಡಲು ಟ್ಯಾಂಕ್‌ಗಳು ಇಲ್ಲ. ಮನೆಯಲ್ಲಿ ಇರುವ ಬಕೆಟ್‌, ಬಿಂದಿಗೆ, ಕ್ಯಾನ್‌ಗಳಲ್ಲಿ ತುಂಬಿ ಇಡುತ್ತೇವೆ. ಆದರೆ ಅದು ಕೇವಲ ಅಡುಗೆ ಮಾಡಲು ಮಾತ್ರ ಬಳಸಲಾಗುತ್ತದೆ ಎನ್ನುತ್ತಾರೆ ಮಂಚಿ ನಿವಾಸಿ ಜಯಂತಿ.

ಎತ್ತರದ ಕಾಲನಿಗಳಿಗೆ ನೀರಿಲ್ಲ
ಮಂಚಿಯಲ್ಲಿರುವ ದಲಿತ ಕಾಲನಿಯಲ್ಲಿ ನಗರಸಭೆಯಿಂದ ನಿರ್ಮಾಣವಾದ 5 ಅಡಿ ಎತ್ತರದ ಟ್ಯಾಂಕ್‌ಗಳಿವೆ. ಅದರಲ್ಲಿ ನೀರು ಸಂಗ್ರಹವಾದರೆ ಈ ಕಾಲನಿಗಳಿಗೆ ಅಷ್ಟಾಗಿ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದರೆ ಈ ಪ್ರದೇಶದ ವಾರ್ಡ್‌ನ ಇತರೆ ಎಲ್ಲ ಪ್ರದೇಶಗಳಿಗಿಂತ ಎತ್ತರವಾದ ಸ್ಥಳದಲ್ಲಿದೆ. ಬೇಸಗೆ ಕಾಲದಲ್ಲಿ ನೀರಿನ ಒತ್ತಡ ಕಡಿಮೆ ಇರುವುದರಿಂದ ಈ ಕಾಲನಿಗೆ ನೀರು ಬರುತ್ತಿಲ್ಲ.

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.