ಸಂಕಲಕರಿಯ: ಶಾಂಭವಿ ನದಿಯಲ್ಲಿ ಬತ್ತಿದ ಜೀವಜಲ 


Team Udayavani, Mar 17, 2019, 3:51 AM IST

shambavi.png

ಬೆಳ್ಮಣ್‌: ಮುಂಡ್ಕೂರು, ಸಂಕಲಕರಿಯ, ಸಚ್ಚೇರಿಪೇಟೆ, ಕಡಂದಲೆ ಭಾಗದ ಕೃಷಿಕರ ಜಲಮೂಲ ಎನಿಸಿರುವ ಶಾಂಭವಿ ನದಿ ಬತ್ತಿ ಹೋಗಿದ್ದು ಈ ಭಾಗದ ಜನತೆ ಕೃಷಿ ಚಟುವಟಿಕೆಗಳಿಗೆ ನೀರಿನ ಬರ ಎದುರಿಸುತ್ತಿದ್ದಾರೆ. 
ಬಿಸಿಲಿನ ಪ್ರಮಾಣ ಮಿತಿ ಮೀರಿದ್ದು  ನದಿ ನೀರಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬಾವಿಗಳಲ್ಲಿಯೂ ನೀರಿನ ಒರತೆ ಕಮ್ಮಿಯಾಗಿ ಆತಂಕ ಸೃಷ್ಟಿಯಾಗಿದೆ. ಇದರಿಂದಾಗಿ  ತಾಲೂಕಿನ ಜೀವನದಿ ಶಾಂಭವಿ ತಟದಲ್ಲಿ  ಹಾಹಾಕಾರ ಎದ್ದಿದೆ.

ಪಂಪ್‌ ಮಾಲಕರಿಗೆ ಸೂಚನೆ
ನದಿ ಬದಿಯ ಬಿಲ್‌ ರಹಿತ ಕೃಷಿ ಪಂಪ್‌ ಸೆಟ್‌ಗಳು ದಿನವಿಡೀ ಚಾಲೂ ಸ್ಥಿತಿಯಲ್ಲಿದ್ದು ಅಗತ್ಯಕ್ಕಿಂತ ಹೆಚ್ಚು ನೀರು ವಿನಿಯೋಗವಾಗುತ್ತಿದೆ ಎಂದು ಕೆಲ ಕೃಷಿಕರು  ಆರೋಪಿಸುತ್ತಿದ್ದಾರೆ.  ಹೀಗಾಗಿ  ಪಂಪ್‌ ಸೆಟ್‌ ಮಾಲಕರು ನೀರಿನ ಬವಣೆಯನ್ನು ಅರಿತು ಒಂದಿಷ್ಟು ಯೋಚಿಸಿ ನೀರನ್ನು ಬಳಸುವಂತೆಯೂ ನೀರಿನ ಸಮಸ್ಯೆ ಎದುರಿಸುತ್ತಿರುವ ಜನರು ವಿನಂತಿಸಿದ್ದಾರೆ.

ಸಾಣೂರು, ನಿಟ್ಟೆ ಪರಪ್ಪಾಡಿ, ಬೋಳ, ಸಚ್ಚೇರಿಪೇಟೆ, ಸಂಕಲಕರಿಯ, ಮುಂಡ್ಕೂರು, ಪಲಿಮಾರು ಭಾಗದಲ್ಲಿ ಹರಿದು ಅರಬ್ಬೀ  ಸಮುದ್ರ ಸೇರುವ  ಶಾಂಭವಿ ನದಿ ಈ ಬಾರಿ ಬಹುಬೇಗನೇ  ಬತ್ತಿ ಹೋಗಿರುವುದೇ  ನೀರಿನ ಕೊರತೆ ಉಂಟಾಗುವುದಕ್ಕೆ ಮುಖ್ಯ ಕಾರಣವಾಗಿದೆ.

ಅಣೆಕಟ್ಟುಗಳಲ್ಲಿಯೂ ನೀರಿಲ್ಲ
ಈಗಾಗಲೇ ಶಾಂಭವಿ ನದಿಗೆ ಬೋಳ , ಪಾಲಿಂಗೇರಿ, ಸಚ್ಚೇರಿಪೇಟೆ, ಸಂಕಲಕರಿಯದಲ್ಲಿ ಅಲ್ಲಲ್ಲಿ ಕಿಂಡಿ ಆಣೆಕಟ್ಟುಗಳನ್ನು ರಚಿಸಲಾಗಿದ್ದು ಕೆಲವೊಂದು ಅಣೆಕಟ್ಟುಗಳು ನಿರ್ವಹಣೆಯ ಕೊರತೆಯಿಂದ ನೇಪಥ್ಯಕ್ಕೆ ಸರಿದಿವೆ. ಇನ್ನು  ನಿರ್ವಹಣೆ ಕಂಡ ಅಣೆಕಟ್ಟುಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾಗಿದೆ. ಸಚ್ಚೇರಿಪೇಟೆಯ ನಲ್ಲೆಗುತ್ತಿ ಪರಿಸರದಲ್ಲಿರುವ ಅಣೆಕಟ್ಟು ನಿರ್ಮಾಣ ಹಂತದಲ್ಲಿದ್ದು ಇದರ ಕಾಮಗಾರಿಯೂ ಅರ್ಧಕ್ಕೆ ಮೊಟಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ  ಹಳೆಯ ಅಣೆಕಟ್ಟಿನಲ್ಲಿ ನೀರು ಶೇಖರಣೆ ಮಾಡಲಾಗಿದ್ದು  ನೀರಿನ ಪ್ರಮಾಣ ಸಂಪೂರ್ಣ ನೆಲಮಟ್ಟವನ್ನು ಕಂಡಿದೆ.

ಸಂಕಲಕರಿಯ ಯುವಕನ ಏಕಾಂಗಿ ಹೋರಾಟ
ಸಂಕಲಕರಿಯದಲ್ಲಿ ಸಾಮಾಜಿಕ ಕಳಕಳಿಯ ಯುವಕ ಸುಧಾಕರ ಸಾಲ್ಯಾನ್‌ ಎಂಬವರು ಏಕಾಂಗಿಯಾಗಿ ಹೋರಾಟ ನಡೆಸಿ ಊರಿನ ಅಕ್ಕಪಕ್ಕದ ಕೃಷಿಕರು ಹಾಗೂ ನೀರಾವರಿ ಇಲಾಖೆಯ ನೆರವಿನಿಂದ ಅಣೆಕಟ್ಟು ನಿರ್ವಹಣೆ ನಡೆಸಿ ಸುಮಾರು 20 ಕಿ.ಮೀ.ವ್ಯಾಪ್ತಿಯವರೆಗೂ ನದಿ ನೀರು ನಿಲ್ಲುವಂತೆ ಮಾಡಿ ಕೃಷಿಕರಿಗೆ ಆಸರೆಯಾಗಿದ್ದರು. ಆದರೆ ಈಗ  ಸಂಕಲಕರಿಯದಲ್ಲೂ ನೀರಿನ ಮಟ್ಟ ಸಂಪೂರ್ಣ ಕುಸಿದಿದೆ.  ಕೆಲವೊಂದು ಕಡೆಗಳಲ್ಲಿ ಶಾಂಭವಿ ಸಂಪೂರ್ಣ ಬತ್ತಿ ಹೋಗಿದೆ.

ಜಲ ಕ್ಷಾಮದ ಸೂಚನೆ
ಕೃಷಿ ಪ್ರಧಾನವಾದ ಬೋಳ, ಪೊಸ್ರಾಲು, ಸಂಕಲಕರಿಯ ಗ್ರಾಮಗಳಿಗೆ ಶಾಂಭವಿ ನದಿ ನೀರು ಹೆಚ್ಚು ಅನಿವಾರ್ಯವಾಗಿದ್ದು ನೀರು ಬತ್ತಿದ್ದರಿಂದ  ಕೃಷಿಕರು ಕಂಗಾಲಾಗಿದ್ದಾರೆ. ಅಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. 

ಹೀಗಾಗಿ ನೀರಿನ  ಬಳಕೆ ಹಾಗೂ ನೀರಿನ ಬಗ್ಗೆ ಗ್ರಾಮಸ್ಥರು ಜಾಗಗೊಳ್ಳಬೇಕಾಗಿದ್ದು, ಜಲಕ್ಷಾಮ ತಲೆದೋರುವ ಮುನ್ನವೇ ಪರ್ಯಾಯ ಕ್ರಮಗಳನ್ನು ಕೈಗೊಂಡರೆ ಒಳಿತು. ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಯ ಕುರಿತು ಸಂಬಂಧಿಸಿದ ಅಧಿಕಾರಿಗಳು ಲಕ್ಷ್ಯ ವಹಿಸಿದರೆ ಸಮಸ್ಯೆ ಕೊಂಚ ಮಟ್ಟಿಗೆ ಸರಿಹೋಗಬಹುದು ಎನ್ನುವುದು ಬಹುತೇಕ ಕೃಷಿಕರ ಅಭಿಪ್ರಾಯ.

ಮಿತ ಬಳಕೆ ಮಾಡಬೇಕು
ಶಾಂಭವಿ ನದಿಯ ಎಲ್ಲಾ ಕಿಂಡಿ ಅಣೆಕಟ್ಟು ಸಹಿತ ದೊಡ್ಡ ಅಣೆಕಟ್ಟುಗಳ  ನಿರ್ವಹಣೆಗಾಗಿ ಜಪ್ರತಿನಿಧಿಗಳು, ಇಲಾಖೆ ಹಾಗೂ ಗ್ರಾಮಸ್ಥರು ಸಹಕರಿಸಬೇಕು. ಈ ಮೂಲಕ ನೀರಿನ ಸಂಗ್ರಹಣೆ ಸಾಧ್ಯ, ನೀರನ ಮಿತ ಬಳಕೆಯ ಬಗ್ಗೆಯೂ ಯೋಚಿಸಬೇಕಾಗಿದೆ. ಇಲ್ಲದಿದ್ದಲ್ಲಿ ಮಳೆಯೇ ಆಧಾರ.
ಸುಧಾಕರ ಸಾಲ್ಯಾನ್‌ ಸಂಕಲಕರಿಯ,  ಕೃಷಿಕ

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.