ಅಡೆತಡೆ ನಡುವೆಯೂ ಸುಮೋ ತಳಿಯ ಕಲ್ಲಂಗಡಿ ಬೆಳೆ


Team Udayavani, Jan 22, 2023, 11:45 AM IST

5-katapady-agri-story

ಕಟಪಾಡಿ: ಬೇಸಗೆಯ ಬಿಸಿಲ ಬೇಗೆಯನ್ನು ತೀರಿಸಲು ಬೆರಳೆಣಿಕೆಯ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ ಮಟ್ಟು ಪ್ರದೇಶದ ಪ್ರಯೋಗ ಶೀಲ ಕೃಷಿಕನ ಸಿಹಿಯಾದ ಕಲ್ಲಂಗಡಿ ಹಣ್ಣು.

ಮಟ್ಟುಗುಳ್ಳ ಬೆಳೆಯ ಜತೆಗೆ ಆರ್ಥಿಕ ಶಕ್ತಿಯನ್ನು ನೀಡುತ್ತಿರುವ ಈ ಕಲ್ಲಂಗಡಿ ಹಣ್ಣನ್ನು ಬೆಳೆಯುವಲ್ಲಿ ಯಶಸ್ಸನ್ನು ಕಂಡವರು ಯಶೋಧರ ಕೋಟ್ಯಾನ್‌ ಮಟ್ಟು. ಕಳೆದ 12 ವರ್ಷದಿಂದಲೂ ಕಲ್ಲಂಗಡಿ ಹಣ್ಣನ್ನು ಸೀಸನಲ್‌ ಬೆಳೆಯಾಗಿ ಬೆಳೆಯುತ್ತಿದ್ದಾರೆ.

ಸುಮಾರು ಒಂದು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದು ಉಡುಪಿ ಮತ್ತು ಮಂಗಳೂರು ಪರಿಸರದ ಮಾರುಕಟ್ಟೆಯನ್ನು ಕಂಡುಕೊಳ್ಳಲಿದ್ದಾರೆ. ಇವರ ಸಾಧನೆ ಅನುಸರಿಸಿದ ಸ್ಥಳೀಯ ಇತರ ಏಳೆಂಟು ಕೃಷಿಕರೂ ಈ ಬಾರಿ ಕಲ್ಲಂಗಡಿ ಹಣ್ಣು ಬೆಳೆಯನ್ನು ಬೆಳೆದಿದ್ದು, ಉತ್ತಮ ಫಸಲನ್ನು ಕಾಣುತ್ತಿದ್ದಾರೆ.

ಎರವಲು ಗದ್ದೆ- ಮಲ್ಚಿಂಗ್‌ ಶೀಟ್‌

ಸಮಗ್ರ ಕೃಷಿಕನಾಗಿ ವರ್ಷವಿಡೀ ಕೃಷಿ ಮಣ್ಣಿನ ನಂಟಿನೊಂದಿಗೆ ಗಾಢವಾದ ಬಾಂಧವ್ಯವನ್ನು ಬೆಸೆದುಕೊಂಡಿರುವ ಯಶೋಧರ ಮಟ್ಟು ಅವರು, ಈ ಬಾರಿಯ ಕಲ್ಲಂಗಡಿ ಬೆಳೆಗೂ ಗೊಬ್ಬರ, ಮಲ್ಚಿಂಗ್‌ ಶೀಟ್‌, ಕೃಷಿ ಕಾರ್ಮಿಕರ ಬಳಕೆ ಸಹಿತ ಸುಮಾರು 40 ಸಾವಿರ ರೂ. ನಷ್ಟು ಹಣವನ್ನು ಎರವಲು ಕೃಷಿ ಗದ್ದೆಯಲ್ಲಿ ತೊಡಗಿಸಿ ಬೆಳೆಯನ್ನು ಬೆಳೆದಿದ್ದಾರೆ. 60 ದಿನಗಳ ಸೂಕ್ತ ಆರೈಕೆಯ ಬಳಿಕ ಕಲ್ಲಂಗಡಿ ಹಣ್ಣು ಫಸಲನ್ನು ಪಡೆಯುತ್ತಿದ್ದಾರೆ.

25 ಟನ್‌ ಫಸಲಿನ ನಿರೀಕ್ಷೆ: ಈ ಬಾರಿ ಒಂದು ಎಕರೆ ಗದ್ದೆಯಲ್ಲಿ ಇಂಡೋ ಅಮೆರಿಕನ್‌ ಸುಮೋ ತಳಿಯ ವಾಟರ್‌ ಮೆಲನ್‌ ಬೆಳೆಯನ್ನು ಬೆಳೆದಿದ್ದಾರೆ. ಇದು ಸಿಹಿಯಾದ ಕಲ್ಲಂಗಡಿ ಹಣ್ಣಿನ ತಳಿ. ಈ ಬಾರಿ ಪ್ರಕೃತಿ ವಿಕೋಪ ಬಾಧಿಸದೆ ಇದ್ದರೂ ನವಿಲು ಮತ್ತು ಮುಳ್ಳು ಹಂದಿಯ ಕಾಟದಿಂದ ಸ್ವಲ್ಪ ಬೆಳೆಹಾನಿ ಸಂಭವಿಸಿದ್ದು, 3 ಬಾರಿ ಬಿತ್ತನೆ ನಡೆಸಬೇಕಾಯಿತು. ಗಿಡವನ್ನು ಎಳವೆಯಲ್ಲಿಯೇ ನವಿಲು ತಿಂದು ಹಾಕಿತ್ತು. ಹಣ್ಣನ್ನು ಮುಳ್ಳು ಹಂದಿ ತಿಂದು ಹಾಕುತ್ತಿದೆ. ಆದರೂ 25 ಟನ್‌ ಕಲ್ಲಂಗಡಿ ಹಣ್ಣಿನ ಫಸಲಿನ ನಿರೀಕ್ಷೆ ಇದೆ.

ಲಾಭದ ಭರವಸೆ: ಸಿಹಿಯಾದ ಸುಮೋ ತಳಿಯ ವಾಟರ್‌ ಮೆಲನ್‌. ಒಂದು ಹಣ್ಣು ಸುಮಾರು 12-16 ಕೆಜಿ ತೂಗುತ್ತದೆ. 25 ಟನ್‌ ಫಸಲಿನ ನಿರೀಕ್ಷೆ ಇದೆ. ಹೋಲ್‌ಸೇಲ್‌ ಏಜೆಂಟರು ಉತ್ತಮ ಬೆಲೆ ನೀಡಿ ಕೃಷಿ ಗದ್ದೆಯಿಂದಲೇ ಖರೀದಿಸಿ ಕೊಂಡೊ ಯ್ಯುತ್ತಾರೆ. ಈ ಬಾರಿ ಅಧಿಕ ಬೆಲೆ, ಲಾಭದಾಯಕದ ಭರವಸೆ ಇದೆ. –ಯಶೋಧರ ಕೋಟ್ಯಾನ್‌, ಮಟ್ಟು

-ವಿಜಯ ಆಚಾರ್ಯ ಉಚ್ಚಿಲ

 

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.