“ನಾವು ಹೊರಗೆ ಬಂದು ತಪ್ಪು ಮಾಡಿದ್ದೇವೆ; ನೀವು ಮನೆಯೊಳಗೇ ಇರಿ’


Team Udayavani, Mar 22, 2020, 6:30 AM IST

“ನಾವು ಹೊರಗೆ ಬಂದು ತಪ್ಪು ಮಾಡಿದ್ದೇವೆ; ನೀವು ಮನೆಯೊಳಗೇ ಇರಿ’

ಮಣಿಪಾಲ: “ಇಂದು (ಮಾ. 22) ಆದಷ್ಟು ಒಳಗೇ ಇರಿ. ನೀವು ಇರುವುದು ದೇಶಕ್ಕಾಗಿ. ಪರಸ್ಪರ ನಮ್ಮೊಳಗೆ ಧೈರ್ಯವನ್ನು ತುಂಬಿಕೊಳ್ಳಲು ರಾಷ್ಟ್ರಗೀತೆಯನ್ನು ಹಾಡಿ, ಸಕಾರಾತ್ಮಕವಾಗಿ ಯೋಚಿಸಿ. ಸಕಾರಾತ್ಮಕವಾದುದನ್ನು ವೀಕ್ಷಿಸಿ. ನಾವೂ ಅದನ್ನೇ ನಿತ್ಯವೂ ಮಾಡುತ್ತಿದ್ದೇವೆ’.

ಇಟಲಿಯ ಸಿನೆಮಾ ನಿರ್ದೇಶಕ ಇಟಾಲೋ ಸ್ಪಿನೆಲಿ. ಉದಯವಾಣಿ ಯೊಂದಿಗೆ ಸಾಮಾಜಿಕ ಮಾಧ್ಯಮದ ಮೂಲಕ ಸಂಭಾಷಿಸಿದ ಅವರು ಜನತಾ ಕಪ್ಯೂì ಸಂದರ್ಭದಲ್ಲಿ ಭಾರತೀಯರಿಗೆ ನೀಡಿದ ಎರಡು ಸಲಹೆ ಗಳೆಂದರೆ, ಒಂದು-ಮನೆಯೊಳಗೇ ಆದಷ್ಟು ಇರಿ, ಕಷ್ಟವಾಗುತ್ತದೆ ನಿಜ. ಆದರೂ ಹೊರಗೆ ಬರಬೇಡಿ.

ಎರಡು – ಸಕಾರಾತ್ಮಕವಾಗಿ ಯೋಚಿಸಿ, ಒಳ್ಳೆಯ ದಿನ ಬರುತ್ತದೆ. ಅನಗತ್ಯವಾಗಿ ಆತಂಕಕ್ಕೆ ಒಳಗಾಗಬೇಡಿ, ಕತ್ತಲು ಕಳೆದು ಬೆಳಕು ಬರಲೇಬೇಕು, ಬಂದೇ ಬರುತ್ತದೆ.
ಇಟಾಲೋ ಕೆಲವೇ ದಿನಗಳ ಹಿಂದೆ ಭಾರತದಲ್ಲಿದ್ದರು. ಅದೂ ಇಟಲಿಯಲ್ಲಿ ಕೋವಿಡ್‌ 19 ಉಪಟಳ ಹೆಚ್ಚುತ್ತಿದ್ದ ಸಂದರ್ಭವದು. ಭಾರತ ದಲ್ಲಿ ಇನ್ನೂ ಅಷ್ಟೊಂದು ವೇಗ ಪಡೆದಿ ರಲಿಲ್ಲ. ಆಗ ಭಾರತದ ಜನಸಂಖ್ಯೆ, ತುಂಬಿ ತುಳುಕುತ್ತಿದ್ದ ರೈಲು ನಿಲ್ದಾಣಗಳು ಇತ್ಯಾದಿಗಳೆಲ್ಲವನ್ನೂ ಕಂಡವರು, “ಈ ವೈರಸ್‌ನ ಉಪಟಳ ಭಾರತಕ್ಕೇನಾದರೂ ಬಂದರೆ ಬಹಳ ಕಷ್ಟವಪ್ಪ’ ಎಂದುಕೊಂಡಿದ್ದರಂತೆ.

“ನಮ್ಮ ಇಟಲಿಯಂಥ ಪುಟ್ಟ ದೇಶದಲ್ಲೇ ಆಸ್ಪತ್ರೆಗಳು ತುಂಬಿ ಹೋಗಿವೆ. ಯಾವ ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಹಾಸಿಗೆಗಳಿಲ್ಲ. ಕೋವಿಡ್‌ 19 ಪೀಡಿತರಿಗೆ ಚಿಕಿತ್ಸೆ ಕೊಟ್ಟ ವೈದ್ಯರುಗಳೇ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. ಇಂಥ ಆತಂಕದ ಸ್ಥಿತಿಯಲ್ಲಿ ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಮಾತ್ರ ಬದುಕುಳಿಯಬಲ್ಲವು’.

“ಯಾರೂ ಹೊರಗೆ ಬರಬೇಡಿ, ಇದು ಯುದ್ಧ’ ಎಂದು ಹೇಳುವ ಇಟಾಲೋ, ನಗರ ಮಲಗಿ ಬಹು ದಿನಗಳಾಗಿವೆ. ಯುರೋಪಿನ ದೊಡ್ಡ ರೈಲು ನಿಲ್ದಾಣ ಮಿಲಾನೊ ದಲ್ಲಿ ಜನರೇ ಇಲ್ಲ. ಸಂಪೂರ್ಣ ಖಾಲಿ ಖಾಲಿ, ರೈಲುಗಳಿದ್ದರೂ ಪ್ರಯೋಜನವಿಲ್ಲ. ತುರ್ತು ಸ್ಥಿತಿ ಇದ್ದಲ್ಲಿ ಜನರುಅನುಮತಿ ಪಡೆದು ಬರಬೇಕು. ಇಲ್ಲವಾದರೆ ಪೊಲೀಸರು ಬಂಧಿಸುತ್ತಾರೆ’ ಎಂದು ವಿವರಿಸುತ್ತಾರೆ.

“ನಮ್ಮ ತಪ್ಪಿಗೆ ಎರಡು ಕಾರಣಗಳಿವೆ ಎನ್ನುವುದಕ್ಕಿಂತಲೂ ಎರಡು ರೀತಿ ಯಲ್ಲಿ ನಮ್ಮಿಂದ ತಪ್ಪುಗಳಾಗಿವೆ. ಮೊದಲನೆ ಯದು – ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಾಗ ಸ್ವಲ್ಪ ಎಡವಿದೆವು. ಎರಡನೆಯದು- ಹಲವು ಸಲಹೆಗಳನ್ನು ಲಘುವಾಗಿ ತೆಗೆದುಕೊಂಡೆವು. ಹಾಗಾಗಿ ಇಂದಿನ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಂಕ್ರಾ ಮಿಕ ವೈರಾಣುಗಳ ಹರಡುವಿಕೆಗೆ ನಾವೂ ಸಹ ಕಾರಣರಾಗಬಾರದೆಂದರೆ ಮನೆಯೊಳಗೆ ಇರುವುದೇ ಕ್ಷೇಮ. ಆ ಮೂಲಕವೇ ನಾವು ವೈರಾಣುವನ್ನು ಸೋಲಿಸಿ ಈ ಯುದ್ಧದಲ್ಲಿ ಗೆಲ್ಲಬಹುದು ಎನ್ನುತ್ತಾರೆ ಅವರು.

ನಾವು ಅದನ್ನೇ ಮಾಡುತ್ತಿದ್ದೇವೆ
ನಾವೂ ನಮ್ಮ ನಮ್ಮ ವಸತಿ ಸಮುಚ್ಚಯಗಳಲ್ಲಿ ಏಕಾಂತದಲ್ಲಿದ್ದೇವೆ. ಮನೆಯಿಂದ ಹೊರಗೆ ಬಾರದೇ ಹಲವು ದಿನಗಳು ಆಗಿವೆ. ಆದರೂ ಹತಾಶರಾಗಿಲ್ಲ. ಒಂದಿಷ್ಟು ಓದು, ಬರಹ ಹೀಗೆ ಕಾಲ ಕಳೆಯುತ್ತಿದ್ದೇವೆ. ಜೀವನ ಪ್ರೀತಿ ಉಳಿಸಿಕೊಳ್ಳಲು ಸ್ಪೀಕರ್‌ಗಳಲ್ಲಿ ದೊಡ್ಡದಾಗಿ ರಾಷ್ಟ್ರಗೀತೆಯನ್ನು ಕೇಳುತ್ತೇವೆ. ಅದು ನಮ್ಮೊಳಗೆ ಸ್ಫೂರ್ತಿ ತುಂಬುತ್ತದೆ. ಇನ್ನೂ ಬದುಕಬೇಕೆಂಬ ಪ್ರೀತಿಯನ್ನು ಉಕ್ಕಿಸುತ್ತದೆ. ನೀವೂ ಹಾಗೆಯೇ ಮಾಡಿ.

ಮನೆಯೊಂದರ ಬಾಗಿಲಿನ ಮೇಲೆ ಬರೆದ “ಎಲ್ಲವೂ ಸರಿಯಾಗುತ್ತದೆ, ಒಳ್ಳೆಯ ದಿನ ಬರುತ್ತದೆ’ (ಇಟಾಲಿಯನ್‌ ಭಾಷೆಯಲ್ಲಿ ಬರೆದ ಸಾಲು) ಎಂಬುದನ್ನು ನೋಡಿಯೇ ಬದುಕುತ್ತೇವೆ. ಇಂಥ ಸಾಲುಗಳು ಹಲವಾರು ಮನೆಗಳ ಬಾಗಿಲುಗಳನ್ನು ಸುಂದರಗೊಳಿಸುತ್ತಾ ಸಕಾರಾತ್ಮಕ ದೃಷ್ಟಿಕೋನವನ್ನು ಬೆಂಬಲಿಸುತ್ತಿದೆ. ಇಡೀ ಜಗತ್ತು ಸ್ತಬ್ಧಗೊಳ್ಳುತ್ತಿದೆ ಎನಿಸುತ್ತಿರುವ ಹೊತ್ತಿನಲ್ಲಿ ಇಂಥ ಕೆಲವು ಸಾಲುಗಳೇ ನಮ್ಮೊಳಗೆ ಬದುಕಿನ ಬಗೆಗಿನ ಪ್ರೀತಿಯನ್ನು ಉಳಿಸಬಲ್ಲವು. ಬದುಕಿನ ಸೌಂದರ್ಯವನ್ನು ತಿಳಿಸಬಲ್ಲವು.
– ಇಟಾಲೋ ಸ್ಪಿನೆಲಿ.
ಸಿನೆಮಾ ನಿರ್ದೇಶಕ, ಇಟಲಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.