6 ತಿಂಗಳ ಬಳಿಕ ಭಕ್ತರಿಗೆ ತೆರೆಯಲಿದೆಯೇ ಶ್ರೀಕೃಷ್ಣಮಠ?

ಸೆ.21ರ ಬಳಿಕ ದರ್ಶನಕ್ಕೆ ಅವಕಾಶ ಸಾಧ್ಯತೆ; ಸೇವೆ, ಅನ್ನದಾನದ ಬಗ್ಗೆ ಇನ್ನಷ್ಟೇ ನಿರ್ಧಾರ

Team Udayavani, Sep 19, 2020, 6:00 AM IST

6 ತಿಂಗಳ ಬಳಿಕ ಭಕ್ತರಿಗೆ ತೆರೆಯಲಿದೆಯೇ ಶ್ರೀಕೃಷ್ಣಮಠ?

ಸಾಂದರ್ಭಿಕ ಚಿತ್ರ

ಉಡುಪಿ: ಶ್ರೀಕೃಷ್ಣಮಠ ಆರು ತಿಂಗಳ ಬಳಿಕ ಭಕ್ತರಿಗೆ ತೆರೆದುಕೊಳ್ಳುವ ಸಾಧ್ಯತೆ ಇದೆ. ಮಾ. 22ರಿಂದ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು. ಜೂ. 8ರಿಂದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕೇವಲ ದರ್ಶನ ಮಾತ್ರವಾಗಿತ್ತು, ಸೇವೆಗಳು ಇರಲಿಲ್ಲ. ಇದೀಗ ಸೆ. 1ರಿಂದ ಸೇವೆಗಳನ್ನು ಸ್ವೀಕರಿಸಲೂ ಇಲಾಖೆ ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಎಲ್ಲ ದೇವಸ್ಥಾನಗಳಲ್ಲಿ ಸೇವೆಗಳು ಆರಂಭಗೊಂಡಿವೆ.

ಕೋವಿಡ್ ಸೋಂಕು ವಿಸ್ತರಣೆಯಾಗುತ್ತಲೇ ಇದ್ದ ಕಾರಣ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕ ಭಕ್ತರ ಪ್ರವೇಶ ನಿರ್ಬಂಧವನ್ನು ಮುಂದುವರಿಸ ಲಾಗಿತ್ತು. ಶ್ರೀಕೃಷ್ಣ ಜಯಂತಿ, ವಿಟ್ಲಪಿಂಡಿ ಹಬ್ಬಗಳನ್ನೂ ಸಾಂಪ್ರದಾಯಿಕವಾಗಿ ಮಾತ್ರ ನೆರವೇರಿಸಲಾಗಿತ್ತು. ಸೆ. 21ರಿಂದ ಕೇಂದ್ರ ಸರಕಾರ ಹೊಸ ಮಾರ್ಗದರ್ಶಿ ಸೂತ್ರ ಹೊರಡಿಸಲಿದೆ. ಅದರಂತೆ ರಾಜ್ಯವೂ ಪಾಲಿಸಲಿದ್ದು, ಇದು ಜಿಲ್ಲೆಗೂ ಅನ್ವಯವಾಗು ವುದರಿಂದ ಶ್ರೀಕೃಷ್ಣಮಠದಲ್ಲಿ ದೇವರ ದರ್ಶನ ಸೆ. 21ರ ಬಳಿಕ ಆರಂಭವಾಗುವ ಸಾಧ್ಯತೆ ಇದೆ.

ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಜ. 18ರಂದು ಪೂಜಾಧಿಕಾರ ವಹಿಸಿಕೊಂಡ ಬಳಿಕ ದೇವರ ದರ್ಶನ ಮಾಡುವ ಮಾರ್ಗ ಬದಲಾಯಿಸಿದ್ದರು. ಇದೀಗ ಕೊರೊನಾ ಅವಧಿಯಲ್ಲಿ ಸಂಪೂರ್ಣ ಬಂದ್‌ ಮಾಡಿದ್ದರಿಂದ ದರ್ಶನ ಮಾಡುವ
ಮಾರ್ಗೋಪಾಯ ವ್ಯವಸ್ಥಿತಗೊಳಿಸಲಾಗಿದೆ. ಶ್ರೀಕೃಷ್ಣಮಠದ ರಾಜಾಂಗಣ ಬಳಿಯಿಂದ ಭೋಜನ ಶಾಲೆ ಉಪ್ಪರಿಗೆ ಮಾರ್ಗದಿಂದ ತೆರಳಿ ಅಲ್ಲಿಂದ ಶ್ರೀಕೃಷ್ಣಮಠದ ಗರ್ಭಗುಡಿ ಹೊರಾವರಣಕ್ಕೆ ಇಳಿದು ಅಲ್ಲಿಂದಲೇ ದೇವರ ದರ್ಶನ ಮಾಡಿ ಹಿಂದಿರುಗುವ ವ್ಯವಸ್ಥೆ ಮಾಡಲಾಗಿದೆ. ಗರ್ಭಗುಡಿ ಹೊರಾವರಣದಲ್ಲಿ ಗರುಡ ದೇವರ ಗುಡಿ ಸಮೀಪ ಭಕ್ತರು ಇಳಿದರೆ, ನಿರ್ಗಮಿಸುವಾಗ ಗರುಡ ದೇವರ ಗುಡಿ ಎದುರಿಗಿರುವ ಮುಖ್ಯಪ್ರಾಣ ದೇವರ ಗುಡಿ ಸಮೀಪ ಮೆಟ್ಟಿಲು ಹತ್ತಿ ನಿರ್ಗಮಿಸಬೇಕು. ಒಳಬರಲು ಒಂದು ದಾರಿಯಾದರೆ ಹೊರ ಹೋಗಲು ಇನ್ನೊಂದು ದಾರಿ ಇದೆ.

ನಿಯಮಾವಳಿಗೆ ಬದ್ಧವಾಗಿ ತೆರೆಯುವ ಸಾಧ್ಯತೆ ಕೋವಿಡ್ ಸೋಂಕು ಇನ್ನಷ್ಟು ವ್ಯಾಪಿಸುತ್ತಿರುವುದರಿಂದ,  ಉಡುಪಿಯಲ್ಲಿ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿ ಯಾಗಿರುವುದರಿಂದ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವ ಇರಾದೆ ಪರ್ಯಾಯ ಸ್ವಾಮೀಜಿಯವರಿಗೆ ಇದ್ದರೂ ಸರಕಾರದ ನಿಯಮಾವಳಿಗೆ ಬದ್ಧವಾಗಿ ಭಕ್ತರಿಗೆ ತೆರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಡಗುಮಾಳಿಗೆಯಲ್ಲಿ ನೈಸರ್ಗಿಕ ಬಣ್ಣ
ಕೊರೊನಾ ಅವಧಿಯಲ್ಲಿ ಭೋಜನ ಶಾಲೆ ಮುಖ್ಯಪ್ರಾಣ ದೇವರ ಗುಡಿ ಹೊರಗೆ ಹಳೆಯ ಕಾಲದಂತೆ ಹೆಂಚಿನ ಮಾಡನ್ನು ನಿರ್ಮಿಸಲಾಗಿದೆ. ಭೋಜನ ಶಾಲೆ, ಬಡಗುಮಾಳಿಗೆಯಲ್ಲಿ ನೈಸರ್ಗಿಕ ಬಣ್ಣ ವನ್ನು ಕೊಡಲಾಗಿದೆ. ಮಧ್ವಸರೋವರದಲ್ಲಿ ಮುಳಿಹುಲ್ಲಿನ ಮಾಡು ನಿರ್ಮಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳಿಗೆ ಸೆ. 1ರಿಂದ ಸೇವೆ ಆರಂಭಿಸಲು ಸೂಚನೆ ನೀಡುವಾಗ ಭೋಜನ ಪ್ರಸಾದದ ಕುರಿತು ಮೌನವಾಗಿತ್ತು. ಆದರೆ ಕೆಲವು ದೇವಸ್ಥಾನಗಳು ಭೋಜನ ಪ್ರಸಾದವನ್ನು ಆರಂಭಿಸಿವೆ. ಶ್ರೀಕೃಷ್ಣಮಠದಲ್ಲಿ ಈಗ ಚಾತುರ್ಮಾಸ್ಯದ ಅವಧಿಯಾಗಿರುವುದರಿಂದ ಉತ್ಥಾನ ದ್ವಾದಶಿವರೆಗೆ (ನ. 27) ರಥೋತ್ಸವ ನಡೆಯುವುದಿಲ್ಲ. ಈಗ ಏನಿದ್ದರೂ ಸಾಮಾನ್ಯ ಸೇವೆಗಳು ಮಾತ್ರ. ಸೆ. 21ರಿಂದ ದರ್ಶನಾವಕಾಶ ಕಲ್ಪಿಸುವುದಾದರೆ ಇತರ ಸೇವೆಗಳನ್ನು ಸಲ್ಲಿಸಲು ಅವಕಾಶವಿದೆಯೇ? ಭೋಜನ ಪ್ರಸಾದ ಆರಂಭವಾಗುವುದೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.