“ಶ್ರದ್ಧಾಭಕ್ತಿಯಿಂದ ಪೂಜಿಸಿದರೆ ಇಷ್ಟಾರ್ಥ ಸಿದ್ಧಿ: ಕಾಳಹಸ್ತೇಂದ್ರ ಶ್ರೀ
Team Udayavani, Apr 25, 2019, 6:30 AM IST
ಉಡುಪಿ: ಅಮ್ಮನ ಆಶೀರ್ವಾದದಿಂದ ಭವ್ಯ ಸುಂದರ ಮಂದಿರ ನಿರ್ಮಾಣವಾಗಿದೆ. ದೇವರನ್ನು ಶ್ರದ್ಧಾಭಕ್ತಿಯಿಂದ ಪೂಜಿಸಿದರೆ ನಮ್ಮ ಇಷ್ಟಾರ್ಥ ನೆರವೇರಿ ಸಕಲ ಸಂಪತ್ತು ದೇವರು ದಯಪಾಲಿಸುವರು. ಆದ್ದರಿಂದ ನಾವು ಧರ್ಮದ ಮಾರ್ಗದಲ್ಲಿ ನಡೆಯಬೇಕು ಎಂದು ಕಟಪಾಡಿ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನಂ ಸರಸ್ವತಿ ಪೀಠಾಧೀಶ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಶ್ರೀಗಳು ಹೇಳಿದರು .
ಅವರು ಎ.24ರಂದು ಉಡುಪಿ ಪುತ್ತೂರು ಶ್ರೀ ಕಾಳಿಕಾಂಬಾ ಭಜನಾ ಮಂದಿರ ಇದರ ಪುನಃ ಪ್ರತಿಷ್ಠೆ , ಸುವರ್ಣ ಮಹೋತ್ಸವ , ಭಜನ ಮಂಗಲೋತ್ಸವದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ವೇ| ಮೂ| ಪುತ್ತೂರು ಶ್ರೀನಿವಾಸ ತಂತ್ರಿ, ಬಾರಕೂರು ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಶ್ರೀ ಕಾಳಿಕಾಂಬಾ ಭಜನ ಮಂದಿರದ ಅಧ್ಯಕ್ಷ ಅಪ್ಪು ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ ಆಚಾರ್ಯ, ಕೋಶಾಧಿಕಾರಿ ಶ್ರೀಧರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ ಆಚಾರ್ಯ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ