ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ; ಯಾಂತ್ರೀಕೃತ ಭತ್ತ ಬೇಸಾಯಕ್ಕೆ “ಯಂತ್ರಶ್ರೀ’


Team Udayavani, Nov 6, 2020, 4:41 AM IST

ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ; ಯಾಂತ್ರೀಕೃತ ಭತ್ತ ಬೇಸಾಯಕ್ಕೆ “ಯಂತ್ರಶ್ರೀ’

ಸಾಂದರ್ಭಿಕ ಚಿತ್ರ

ಉಡುಪಿ: ರೈತರ ಜೀವನಾಡಿಯಾಗಿರುವ ಕೃಷಿಯನ್ನು ಲಾಭದಾಯಕ, ರೈತಸ್ನೇಹಿಯಾಗಿ ಮಾಡುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು “ಯಂತ್ರಶ್ರೀ’ ಎಂಬ ಯಾಂತ್ರೀಕೃತ ಭತ್ತ ಬೇಸಾಯವನ್ನು ಪರಿಚಯಿಸಿದ್ದು, ಪ್ರಸ್ತುತ 97 ತಾಲೂಕುಗಳಲ್ಲಿ ಯಶಸ್ವಿಯಾಗಿ ಅನುಷ್ಠಾನವಾಗಿದೆ.

ರಾಜ್ಯದಲ್ಲಿ 15.4 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೇಸಾಯ ಮಾಡಲಾಗುತ್ತಿದ್ದು, ಈ ಹಿಂದೆ ರಾಜ್ಯದ ಬಹಳಷ್ಟು ಪ್ರದೇಶಗಳಲ್ಲಿ ಭತ್ತ ಕೃಷಿಯಲ್ಲಿ ನಷ್ಟ ಉಂಟಾಗುತ್ತಿತ್ತು. ಇದಕ್ಕೆ ಕೂಲಿಯಾಳುಗಳ ಕೊರತೆ, ಸಮರ್ಪಕವಾಗಿ ತಂತ್ರಜ್ಞಾನಗಳನ್ನು ಅನುಸರಿಸದಿರುವುದು ಮತ್ತು ಲೆಕ್ಕಾಚಾರ ಇಟ್ಟು ಕೊಳ್ಳದಿರುವುದೇ ಕಾರಣವಾಗಿದ್ದವು. ಆದರೆ ಈಗ ರಾಜ್ಯದ 164 ಹೋಬಳಿಗಳಲ್ಲಿ ಕೃಷಿ ಯಂತ್ರಧಾರೆ ಬಾಡಿಗೆ ಆಧಾರಿತ ಸೇವಾ ಕೇಂದ್ರವು ಸರಿಸುಮಾರು 10 ಲಕ್ಷಕ್ಕೂ ಅಧಿಕ ಮಂದಿ ರೈತರಿಗೆ ಸುಲಭ ದರದಲ್ಲಿ ಬಾಡಿಗೆಗೆ ಲಭ್ಯವಾಗುತ್ತಿದೆ.

ಕ್ರಾಂತಿಕಾರಕ ಬದಲಾವಣೆ
ಮುಂದಿನ 3 ವರ್ಷಗಳಲ್ಲಿ ಭತ್ತ ಬೇಸಾಯದ ಕುರಿತಾಗಿ ರಾಷ್ಟ್ರದಲ್ಲಿಯೇ ಕ್ರಾಂತಿಕಾರಕ ಬದಲಾವಣೆ ತರುವ ಉದ್ದೇಶ ಹೊಂದಲಾಗಿದೆ. ಇದಕ್ಕೆ
ಹೆಚ್ಚಿನ ಬಲ ಬರಬೇಕಾದರೆ ಹಾಗೂ ಯಶಸ್ವಿಗೊಳಿಸ ಬೇಕಾದರೆ ಆಯಾ ತಾಲೂಕಿನಲ್ಲಿ ಉತ್ಸಾಹಿ ಹಾಗೂ ಕೃಷಿಯಲ್ಲಿ ಆಸಕ್ತಿ ಹೊಂದಿರುವ ಯುವ ಪಡೆ ತಯಾರಿ ಮಾಡಿ ಆ ಮೂಲಕ ಯಾಂತ್ರೀಕೃತ ಭತ್ತ ಬೇಸಾಯದ ಅನುಕೂಲತೆ ಹೆಚ್ಚಿನ ರೈತರಿಗೆ ಸಿಗಬೇಕು ಎಂಬ ಉದ್ದೇಶವಿದೆ.

ಯುವ ಕೃಷಿಕರ ತಂಡ
“ಯಂತ್ರಶ್ರೀ ಯೋಧರು’ ಎಂಬ ಯುವ ಕೃಷಿಕರ ತಂಡವನ್ನು ಆಯಾ ಗ್ರಾಮ ಮಟ್ಟದಲ್ಲಿ ಆಯ್ಕೆ ಮಾಡಿ ಅವರಿಗೆ ನಿರಂತರ ತರಬೇತಿ, ತಾಂತ್ರಿಕ ಮಾಹಿತಿ ನೀಡಿ ಭತ್ತ ಬೇಸಾಯದಲ್ಲಿ ಇನ್ನಷ್ಟು ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತದೆ. ಇದಕ್ಕಾಗಿ “ಯಂತ್ರಶ್ರೀ ಯೋಧರು’ ಭತ್ತ ಬೇಸಾಯದ ನಾಟಿಯಿಂದ ಕಟಾವಿನ ತನಕ ಸಂಪೂರ್ಣ ಯಾಂತ್ರೀಕರಣದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಾವಯವ ಕೃಷಿಗೆ ಪೂರಕವಾದ ಹಸುರೆಲೆ ಗೊಬ್ಬರ ಬಳಕೆ, ಸಕಾಲದಲ್ಲಿ ರೈತರ ಸಮಸ್ಯೆಗೆ ಮಾಹಿತಿ ನೀಡಲಿದ್ದಾರೆ. ಕೃಷಿ ಯಂತ್ರೋಪಕರಣ ಸಕಾಲದಲ್ಲಿ ನೀಡುವಿಕೆ, ರೈತರ ನೋಂದಣಿ, ಕನಿಷ್ಠ ಓರ್ವ ಯೋಧ 50 ರಿಂದ 75 ಎಕ್ರೆ ಪ್ರದೇಶದಲ್ಲಿ ಭತ್ತ ಬೇಸಾಯ ಮಾಡುವ ರೈತರ ಆಯ್ಕೆ ಮುಂತಾದ ವಿಚಾರಗಳೊಂದಿಗೆ ತಾಂತ್ರಿಕ ಮಾಹಿತಿಗಳನ್ನು ರೈತರಿಗೆ ನೀಡುವ ಮೂಲಕ ಅವರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿ ಹಾಗೂ ಕೃಷಿಯಲ್ಲಿ ಇನ್ನೂ ಹೆಚ್ಚಿನ ಆದಾಯಗಳಿಸುವಲ್ಲಿ ಯೋಧರು ಶ್ರಮಿಸುತ್ತಾರೆ. ಯೋಧರಿಗೆ ಯೋಜನೆಯಿಂದ ಪ್ರೋತ್ಸಾಹಧನವನ್ನೂ ನೀಡಲಾಗುತ್ತದೆ.

ಜಿಲ್ಲೆಯ ಹಡಿಲು ಬಿದ್ದ ಪ್ರದೇಶದಲ್ಲೂ ಅನುಷ್ಠಾನ
ಯಾಂತ್ರೀಕೃತ ಭತ್ತ ಬೇಸಾಯವನ್ನು ಉಡುಪಿ ಜಿಲ್ಲೆಯಾದ್ಯಂತ ಪ್ರಸ್ತುತ ಮುಂಗಾರಿನಲ್ಲಿ ಅನುಷ್ಠಾನಗೊಳಿಸಲಾಗಿದೆ. 6 ತಾಲೂಕುಗಳ 1920 ಎಕ್ರೆ ಪ್ರದೇಶಗಳಲ್ಲಿ ಹಾಗೂ ವಿಶೇಷವಾಗಿ ಹಡಿಲು ಬಿದ್ದಿರುವ 827 ಎಕ್ರೆ ಪ್ರದೇಶಗಳಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ. ಯಾಂತ್ರೀಕೃತ ಭತ್ತ ಬೇಸಾಯ ಮಾಡಿದ ರೈತರು ಈಗಾಗಲೇ ಉತ್ತಮ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

ಗ್ರಾ.ಪಂ. ಮಟ್ಟದಲ್ಲಿ ತಂಡ
ಯುವ ಸಮುದಾಯ ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಬೇಕು ಎನ್ನುವ ಉದ್ದೇಶವನ್ನು ಹೊಂದಲಾಗಿದೆ. ಇದಕ್ಕಾಗಿ ಪ್ರತೀ ಗ್ರಾ.ಪಂ.ಮಟ್ಟದಲ್ಲಿ ಉತ್ಸಾಹಿ ಯೋಧರ ತಂಡವನ್ನು ಮಾಡಲಾಗುತ್ತದೆ. ಈಗಾಗಲೇ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಮುಂದಿನ ವರ್ಷದಿಂದ ಮತ್ತಷ್ಟು ಉತ್ತಮ ಇಳುವರಿಯ ನಿರೀಕ್ಷೆಯನ್ನು ಇಟ್ಟುಕೊಂಡು ಕಾರ್ಯಾಚರಿಸಲಾಗುವುದು.
-ಗಣೇಶ್‌ ಬಿ., ಹಿರಿಯ ನಿರ್ದೇಶಕರು, ಧ.ಗ್ರಾ.ಯೋಜನೆ, .ಬಿ.ಸಿ. ಟ್ರಸ್ಟ್‌ , ಉಡುಪಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.