ಉಡುಪಿ: ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ: ಯುವ ಸಮುದಾಯವೇ ಅಧಿಕ!


Team Udayavani, May 23, 2022, 11:25 AM IST

suicide

ಉಡುಪಿ: ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದರಲ್ಲಿ ಯುವ ಸಮುದಾಯದವರ ಸಂಖ್ಯೆಯೇ ಅಧಿಕವಾಗಿದೆ. ಅದರಲ್ಲೂ ನೇಣು ಬಿಗಿದು ಆತ್ಮಹತ್ಯೆ ನಡೆಯುತ್ತಿರುವ ಪ್ರಕರಣಗಳು ಅತ್ಯಧಿಕವಾಗಿ ವರದಿಯಾಗುತ್ತಿವೆ.

15ರಿಂದ 35 ವಯೋಮಿತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಸೂಕ್ತ ಜಾಗೃತಿ ಹಾಗೂ ಕಾಳಜಿಯಿಂದಷ್ಟೇ ಇದರ ನಿಯಂತ್ರಣ ಸಾಧ್ಯವಿದೆ. ಜನರನ್ನು ಇನ್ನೂ ಬೆಂಬಿಡದ ಕೋವಿಡ್‌ ಬಿಕ್ಕಟ್ಟು ಕೂಡ ಈ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಕೋವಿಡ್‌ ಸಂದರ್ಭದಲ್ಲಿ ಜನರು ವಿವಿಧ ಕಾರಣಗಳಿಗಾಗಿ ಸಾಲ ಮಾಡಿದ್ದರು. ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದ್ದು, ಪಡೆದ ಸಾಲವನ್ನು ಹಿಂತಿರುಗಿಸಲಾಗದ ಅತಂತ್ರರಾಗಿದ್ದಾರೆ. ಇದು ಕೂಡ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದೆ.

ಸಂಚಲನ ಉಂಟುಮಾಡಿದ್ದ ಪ್ರಕರಣಗಳು

ಜಿಲ್ಲೆಯಲ್ಲಿ ಈ ವರ್ಷದಲ್ಲಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಹಾಗೂ ಡಿಎಆರ್‌ ಹೆಡ್‌ ಕಾನ್‌ಸ್ಟೆಬಲ್‌ ರಾಜೇಶ್‌ ಕುಂದರ್‌ ಆತ್ಮಹತ್ಯೆ ಪ್ರಕರಣಗಳು ತೀವ್ರ ಚರ್ಚೆಗೆ ಗ್ರಾಸಮಾಡಿಕೊಟ್ಟಿದ್ದವು. ಉಳಿದಂತೆ ಯುವ ಉದ್ಯಮಿ, ಮಹಿಳೆಯರು, ಅಸ್ತಮ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿ, ಹಣಕಾಸು ಬಾಧೆ, ಹೊಟೇಲ್‌ ಕಾರ್ಮಿಕ ಹೀಗೆ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರಣಗಳೇನು?

ಕಳೆದ 2 ವರ್ಷಗಳಿಂದ ಹೆಚ್ಚಿನವರಿಗೆ ಸಾಮಾನ್ಯ ಜೀವನ ವೆಂಬುವುದೇ ಮರೀಚಿಕೆಯಾಗಿದೆ. ಖನ್ನತೆ, ಮದ್ಯಪಾನ, ಪರೀಕ್ಷೆ ಒತ್ತಡ ಹಾಗೂ ಅನುತೀರ್ಣ, ಕೌಟುಂಬಿಕ ದೌರ್ಜನ್ಯ ಹಾಗೂ ಕಲಹ, ಆರೋಗ್ಯ ಸಮಸ್ಯೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿ ಮೊಟಕುಗೊಂಡ ಸಂಬಂಧಗಳು, ಬಿದ್ದುಹೋದ ಗೆಳೆತನ, ಮನೆಮಂದಿ ಸೂಕ್ತ ರೀತಿಯಲ್ಲಿ ಸ್ಪಂದಿಸದಿರುವುದೆಲ್ಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗುತ್ತಿದೆ.

ಲಾಕ್‌ಡೌನ್‌ ವೇಳೆ ಅಧಿಕ ಆತ್ಮಹತ್ಯೆ

ಜಿಲ್ಲೆಯಲ್ಲಿ 2020ರಲ್ಲಿ ಜನವರಿಯಿಂದ ಜೂನ್‌ ತಿಂಗಳವರೆಗೆ 90ಕ್ಕೂ ಅಧಿಕ ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಕೋವಿಡ್‌-ಲಾಕ್‌ಡೌನ್‌ ಸಡಿಲಿಕೆ ಅನಂತರವೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಮಾನಸಿಕ ಖನ್ನತೆ, ಆರ್ಥಿಕ ಮುಗ್ಗಟ್ಟು, ಉದ್ಯೋಗ ನಷ್ಟ, ಮದ್ಯ ವ್ಯಸನ, ಕೋವಿಡ್‌ ಸೋಂಕಿನ ಭಯ, ಕೌಟುಂಬಿಕ ಕಲಹ, ದೀರ್ಘ‌ಕಾಲದ ಅನಾರೋಗ್ಯ, ವಿಪರೀತ ಒತ್ತಡಗಳು ಆತ್ಮಹತ್ಯೆಗೆ ಮೂಲ ಕಾರಣವಾಗಿದೆ.

ಪರಿಹಾರ ಹೇಗೆ?

ಒಬ್ಬ ವ್ಯಕ್ತಿಯ ಚಲನವಲನಗಳಿಂದಲೇ ಮುನ್ಸೂಚನೆ ಲಭಿಸುತ್ತದೆ. ಸಿಕ್ಕ ಸಿಕ್ಕವರಿಗೆ ಕರೆಮಾಡಿ ಮಾತನಾಡುವುದು, ತನಗೆ ಬಯಸಿದ ಸ್ಥಳಗಳಿಗೆ ಭೇಟಿ ನೀಡಿ ಸುತ್ತಾಡು ವುದು, ಒಮ್ಮೆಲೆ ಚುರುಕುತನ ಪಡೆಯುವುದು ಇವುಗಳೆಲ್ಲ ಲಕ್ಷಣ ಗಳಾಗಿವೆ. ಖನ್ನತೆಯಲ್ಲಿರುವವರು ಒಮ್ಮೆಲೇ ಚುರುಕುಗೊಂಡರೂ ಅದು ಆತ್ಮಹತ್ಯೆಗೆ ಪ್ರಚೋದನೆಗೊಳಗಾಗುವ ಸಾಧ್ಯತೆಗಳಿರುತ್ತವೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ವಿನಯಪೂರ್ವಕ ಮಾತು ಅಗತ್ಯ

ಮನೆ ಮಂದಿ ಹಾಗೂ ಗೆಳೆಯರು ಪರಸ್ಪರ ಆತ್ಮೀಯವಾಗಿ ವರ್ತಿಸಬೇಕು. ಗೆಳೆಯರ ಬಗ್ಗೆ ಅನುಮಾನ ಬಂದರೆ ತತ್‌ಕ್ಷಣ ವಿನಯದಿಂದ ಮಾತನಾಡಿಸಿ ಅವರನ್ನು ಪರಿವರ್ತನೆ ಮಾಡಲು ಸಾಧ್ಯವಿದೆ. ಹೆಲ್ಪ್ಲೈನ್‌ ಸಂಖ್ಯೆ 104ಕ್ಕೆ ಕರೆಮಾಡಿಯೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಡಾ| ಮಾನಸ್‌ ಕುಮಾರ್‌, ಮಾನಸಿಕ ತಜ್ಞರು, ಬಾಳಿಗ ಆಸ್ಪತ್ರೆ

ಪುನೀತ್‌ ಸಾಲ್ಯಾನ್

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.