ಗಂಗೊಳ್ಳಿ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ 100 ಕೋ.ರೂ.: ಸಂಸದ ರಾಘವೇಂದ್ರ
Team Udayavani, Jul 22, 2022, 6:04 AM IST
ಗಂಗೊಳ್ಳಿ: ಇಲ್ಲಿ ಸುಮಾರು 100 ಕೋ.ರೂ. ವೆಚ್ಚದಲ್ಲಿ ಕೋಸ್ಟಲ್ ಬರ್ತ್ ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಸಮ್ಮತಿಸಿದ್ದಾರೆ. ಇದು ಗಂಗೊಳ್ಳಿಯ ಜೀವನಾಡಿ ಮತ್ಸ್ಯೋದ್ಯಮ ಚೇತನಕ್ಕೆ ಪೂರಕವಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಅನುದಾನ ಮಂಜೂರಾದ ಕುರಿತು ಹೇಳಿಕೆ ನೀಡಿರುವ ಅವರು, ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಹೊರಹೊಮ್ಮಲಿದೆೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತಿಸಲು ವಿನಂತಿಸಲಾಗಿತ್ತು.
ಅದರಂತೆ ಸುಮಾರು 19 ಎಕರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಿಂದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದ್ದಾರೆೆ.
ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಸದರು ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ