ರಿಂಗ್‌ರೋಡ್‌ ಅಭಿವೃದ್ಧಿಗೆ 20 ಕೋ.ರೂ.


Team Udayavani, Oct 1, 2021, 3:10 AM IST

ರಿಂಗ್‌ರೋಡ್‌ ಅಭಿವೃದ್ಧಿಗೆ 20 ಕೋ.ರೂ.

ಕುಂದಾಪುರ:  ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್‌ ರೋಡ್‌ ಅಭಿವೃದ್ಧಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನವಿಯಂತೆ 20 ಕೋ.ರೂ. ಮಂಜೂರಾಗಿದೆ.

ಬಹೂಪಯೋಗಿ:

ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್‌ ರೋಡ್‌ ಕಾಮಗಾರಿಯನ್ನು 20 ಕೋ.ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಯವರು ಅನುಮೋದಿಸಿದ್ದಾರೆ. ಈ ಬಗ್ಗೆ ಆಡಳಿತ ಇಲಾಖೆಗೆ ತಿಳಿಸಲಾಗಿದೆ. ಇನ್ನು ಟೆಂಡರ್‌ ಪ್ರಕ್ರಿಯೆ ನಡೆಯಬೇಕಿದೆ. ಇದು ಸ್ಥಳೀಯರ ಅನೇಕ ವರ್ಷಗಳ ಬೇಡಿಕೆಯಾಗಿದೆ. ರಿಂಗ್‌ರೋಡ್‌ ನಿರ್ಮಾಣವಾದರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ.   ನಗರದೊಳಗೆ ಪ್ರವೇಶ ಪಡೆಯದೆ ಕೋಡಿ ಮೊದಲಾದ ಭಾಗಗಳಿಗೆ, ಪುರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಹೆದ್ದಾರಿಯಿಂದ ರಿಂಗ್‌ ರೋಡ್‌ ಮೂಲಕ ಹೋಗಲು ಸಾಧ್ಯವಿದೆ. ಆದ್ದರಿಂದ ರಿಂಗ್‌ರೋಡ್‌ ನಿರ್ಮಾಣದ ಅವಶ್ಯವನ್ನು ಶಾಸಕರು ಅಂದೇ ಮನಗಂಡಿದ್ದರು. ಆದರೆ ನಾನಾ ಕಾರಣಗಳಿಂದ ಅನೇಕ ಬಾರಿ ಪ್ರಸ್ತಾವ ಸಲ್ಲಿಸಿದ್ದರೂ ಮಂಜೂರಾತಿ ವಿಳಂಬವಾಗುತ್ತಿತ್ತು.

ಗೊಂದಲ:

ಈ ಮಧ್ಯೆ ರಿಂಗ್‌ ರೋಡ್‌ ಅಭಿವೃದ್ಧಿ ಕುರಿತು ಯಾವುದೇ ಪ್ರಸ್ತಾವ ಇಲ್ಲ ಎಂದು ಈಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸರಕಾರವೇ ಉತ್ತರಿಸಿ ಗೊಂದಲ ಉಂಟು ಮಾಡಿದ್ದೂ ಇದೆ. ವಿಧಾನಪರಿಷತ್‌ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಕೇಳಿದ ಚುಕ್ಕಿ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ರಿಂಗ್‌ ರೋಡ್‌ ನಿರ್ಮಾಣಕ್ಕೆ ಯಾವುದೇ ಪ್ರಸ್ತಾವನೆ ಇರುವುದಿಲ್ಲ ಎಂದು ಹೇಳಿದ್ದರು. ಈ ಉತ್ತರದಿಂದ ನಗರದ ಜನತೆಗೆ ಸಹಜವಾಗಿ ಅಸಮಾಧಾನವಾಗಿತ್ತು.

ಮಂಜೂರು:

ಇದೀಗ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮುಖ್ಯಮಂತ್ರಿಗಳ ಮೂಲಕ ಅನುದಾನ ಮಂಜೂರು ಮಾಡಿಸಿದ್ದಾರೆ. 25 ಕೋ.ರೂ. ಬೇಡಿಕೆ ಇಡಲಾಗಿತ್ತು. ಅಂತೆಯೇ ಅಂದಾಜು ಪಟ್ಟಿಯೂ ತಯಾರಾಗಿತ್ತು. ಆದರೆ ಅಂತಿಮವಾಗಿ ಹಣಕಾಸು ಇಲಾಖೆ 20 ಕೋ.ರೂ. ಮಂಜೂರಾತಿ ನೀಡಿದೆ ಎನ್ನುತ್ತಾರೆ ಶಾಸಕರು.

ನಿರ್ವಹಣೆ ಇಲ್ಲ:

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ರಿಂಗ್‌ರೋಡ್‌ ಅನಂತರದ ದಿನಗಳಲ್ಲಿ ನಿರ್ವಹಣೆ  ಕಾಣದೆ ವರ್ಷಗಳೇ ಸಂದುಹೋಗಿವೆ. ಮಳೆಯ ಅಬ್ಬರಕ್ಕೆ ರಿಂಗ್‌ರೋಡ್‌ನ‌ಲ್ಲಿ  ಬೃಹತ್‌ ಗುಂಡಿಗಳು ಸೃಷ್ಟಿಯಾಗಿ ವಾಹನ ಓಡಾಟ ದುಸ್ತರವೆನಿಸಿದೆ. ಮೀನುಗಾರಿಕೆ ವಲಯ ಎಂದು ಗುರುತಿಸಿಕೊಂಡಿರುವ ಖಾರ್ವಿಕೇರಿ, ಪಂಚಗಂಗಾವಳಿ, ಮದ್ದುಗುಡ್ಡೆ ಪ್ರದೇಶದಲ್ಲಿ ರಿಂಗ್‌ರೋಡ್‌ ಹಾದು ಹೋಗಿದೆ. ಈ ಎರಡು ಪ್ರದೇಶಗಳು ಅತ್ಯಂತ ಜನಸಂದಣಿಯಿಂದ ಕೂಡಿವೆ. ಸಹಸ್ರಾರು ಮನೆಗಳು ಇಲ್ಲಿವೆ. ಮುಖ್ಯವಾಗಿ ನದಿಪಾತ್ರದ ಇಲ್ಲಿಯ ಜನರು ಹೆಚ್ಚಾಗಿ ಮೀನುಗಾರಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಆಶಾದಾಯಕ ಇನ್ನು:

ರಿಂಗ್‌ ರೋಡ್‌ ಸಾಕಾರಗೊಂಡು 15 ವರ್ಷ ಸಂದರೂ ಇನ್ನೂ ಪೂರ್ಣಪ್ರಮಾಣದಲ್ಲಿ ಡಾಮರು ಕಾಮಗಾರಿ  ನಡೆದಿಲ್ಲ. ಹಲವೆಡೆ ನದಿ ದಂಡೆಗೆ ರಿಂಗ್‌ ರೋಡ್‌ಗೆಂದು ಕಟ್ಟಿದ ರಿವಿಟ್‌ಮೆಂಟ್‌ ಕುಸಿದಿದೆ. ಸಂಜೆ ವಿಹಾರಿಗಳು, ಪ್ರವಾಸಿಗರನ್ನು ಬರ ಸೆಳೆಯುವ ರಿಂಗ್‌ರೋಡ್‌ನ‌ ಉದ್ದಕ್ಕೂ ಕೊಳಚೆ ಕಣ್ಣಿಗೆ ಕಟ್ಟುತ್ತಿದೆ. ಸ್ಥಳೀಯಾಡಳಿತ ರಿಂಗ್‌ರೋಡ್‌ ನಿರ್ವಹಣೆಗೆ ಅನುದಾನ ತರುವಲ್ಲಿ  ಸೋತಿದೆ  ಎಂಬ ಆರೋಪ ಕೇಳಿಬಂದಿದೆ. ನದಿ ಪಾತ್ರದ ಜನರ ಸಂಪರ್ಕಕ್ಕೆ ಹಾದಿ ಇದಾಗಿದ್ದರೂ ಅಭಿವೃದ್ಧಿ ನನೆಗುದಿಗೆ ಬಿದ್ದ ಬಗ್ಗೆ ಆಕ್ರೋಶ ಇತ್ತು. ಈಗ ಶಾಸಕರ ಪ್ರಯತ್ನದಿಂದ ಪುರಸಭೆ ಮೇಲಿನ ಅಪವಾದ ದೂರವಾಗಿದೆ. ಮುಂದಿನ ದಿನಗಳು ಆಶಾದಾಯಕವಾಗಿದೆ.

ರಿಂಗ್‌ರೋಡ್‌ :

ಕುಂದಾಪುರ ನಗರವನ್ನು ಸುತ್ತುವರಿದಿರುವ ಮಹತ್ವಾಕಾಂಕ್ಷೆಯ ರಿಂಗ್‌ರೋಡ್‌ ನಾಗರಿಕರ ಪಾಲಿಗೆ ದುರ್ಲಭ ಎಂಬಂತೆ ಭಾಸವಾಗುತ್ತಿತ್ತು. 2006-07ನೇ ಸಾಲಿನಲ್ಲಿ  ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ದೂರದೃಷ್ಟಿತ್ವದಲ್ಲಿ ಸಾಕಾರಗೊಂಡ ಈ ಮಹತ್ವಾ ಕಾಂಕ್ಷೆಯ ಯೋಜನೆ ನಿರ್ವಹಣೆ ಇಲ್ಲದೆ ಸೊರಗುತ್ತಿತ್ತು. ಕುಂದಾಪುರದ ಸಂಗಂನಿಂದ ಮೊದಲ್ಗೊಂಡು ಪಂಚ ಗಂಗಾವಳಿ ನದಿ ಪಾತ್ರದಲ್ಲಿ ಹಾದು ಹೋಗುವ ರಿಂಗ್‌ ರೋಡ್‌ ಚರ್ಚ್‌ ರಸ್ತೆಯನ್ನು ಸಂಧಿಸುತ್ತದೆ. ಅಲ್ಲಿಂದ ಕುಂದಾಪುರ ನಗರವನ್ನು ಹತ್ತಿರದಿಂದ ಸಂಧಿಸಬಹುದಾಗಿದೆ.

ರಿಂಗ್‌ರೋಡ್‌ ಅಭಿವೃದ್ಧಿಗೆ ಅನುದಾನ ಬೇಕೆಂದು ಅನೇಕ ವರ್ಷಗಳ ಬೇಡಿಕೆಯಾಗಿದ್ದು ಶಾಸಕರ ಸತತ ಪ್ರಯತ್ನದಿಂದ ದೊಡ್ಡ ಮೊತ್ತ ಮಂಜೂರಾಗಿದೆ. ಪುರಸಭೆ ಅಭಿವೃದ್ಧಿಗೆ ಇನ್ನಷ್ಟು ಅನುದಾನ ತರಿಸುವ ಭರವಸೆ ಅವರಿಂದ ದೊರೆತಿದೆ. ಇದರಿಂದ ನಗರದ ಬೆಳವಣಿಗೆಗೆ ಸಹಕಾರಿಯಾಗಲಿದೆ. -ವೀಣಾ ಭಾಸ್ಕರ ಮೆಂಡನ್‌ ಅಧ್ಯಕ್ಷರು, ಪುರಸಭೆ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.