225 ಟವರ್ ಮಂಜೂರು: ಡಿಸೆಂಬರ್ನೊಳಗೆ ಪೂರ್ಣ: ಸಂಸದ ರಾಘವೇಂದ್ರ
Team Udayavani, May 28, 2023, 1:34 PM IST
ಕುಂದಾಪುರ: ದೂರ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ದಿಂದ 225 ಟವರ್ಗಳನ್ನು ಮಂಜೂರು ಮಾಡಿದ್ದು, ಬೈಂದೂರು ತಾಲೂಕಿಗೆ 27 ಟವರ್ಗಳು ಬರಲಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಕೆಲವೆಡೆ ಖಾಸಗಿ ದೂರ ಸಂಪರ್ಕ ಕಂಪೆನಿಗಳು ಮೊಬೈಲ್ ಟವರ್ಗಳನ್ನು ಸ್ಥಾಪಿಸಿದರೂ ಕೆಲವು ಕುಗ್ರಾಮಗಳಲ್ಲಿ ಜನವಸತಿ ಕಡಿಮೆ ಇರುವುದರಿಂದಾಗಿ ಟವರ್ ನಿರ್ಮಾಣಕ್ಕೆ ಆಸಕ್ತಿ ತೋರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ದಿಂದಲೇ ಟವರ್ ನಿರ್ಮಿಸಲು ಮನವಿ ಸಲ್ಲಿಸಿದ್ದು, ಮಂಜೂರಾತಿ ದೊರೆತಿದೆ ಎಂದರು.
ಡಿಸಿಗೆ ಸೂಚನೆ: ಬೈಂದೂರು ಕ್ಷೇತ್ರದ ಕಂದಾಯ ಇಲಾಖೆಯ 23 ಸ್ಥಳಗಳನ್ನು ಕೂಡಲೇ ಹಸ್ತಾಂತರಿಸುವಂತೆ ಜಿಲ್ಲಾಧಿ ಕಾರಿಗಳಿಗೆ ಸೂಚಿಸಲಾಗಿದೆ.ಅರಣ್ಯ ಪ್ರದೇಶದ ವ್ಯಾಪ್ತಿಯ ಸ್ಥಳಗಳಲ್ಲಿ ಟವರ್ ನಿರ್ಮಾಣಕ್ಕೆ ಅನುಮತಿಕೋರಿ ಪರಿವೇಶ್ ಪೋರ್ಟಲ್ನಲ್ಲಿ ವಿವರ ಒದಗಿಸಲಾಗಿದ್ದು, ಶೀಘ್ರ ಕೇಂದ್ರ ಸರಕಾರದ ಮೂಲಕ ಅನುಮತಿ ಕೊಡಿಸುವಂತೆ ಕೇಂದ್ರ ಸಚಿವರನ್ನು ಒತ್ತಾಯಿಸಿದ್ದೇನೆ ಎಂದರು.
ಅಧಿಕಾರಿಗಳ ಸಭೆ
ಮೊಬೈಲ್ ಟವರ್ಗಳನ್ನು ನಿಗದಿತ ಕಾಲ ಮಿತಿಯಲ್ಲಿ ಕಾರ್ಯ ಗತಗೊಳಿಸಲು ಸಂಸದರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಬಿಸ್ಸೆನ್ನೆಲ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಈ ಯೋಜನೆಗಳನ್ನು ಸಕಾಲದಲ್ಲಿ ಕಾರ್ಯಗತಗೊಳಿಲಾಗುವುದು.
ಜನಸಾಮಾನ್ಯರಿಗೆ ತೊಂದರೆ ಯಾಗ ದಂತೆ ಅನುಷ್ಠಾನಗೊಳಿಸಲಾಗುವುದು. ಈಗಾಗಲೇ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಬಿಸ್ಸೆನ್ನೆಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ನೆಟ್ವರ್ಕ್ ಇಲ್ಲದೇ ಜನಸಾಮಾನ್ಯರಿಗೆ ಆನ್ಲೈನ್ ಮೂಲಕ ಹಣದ ವ್ಯವ ಹಾರ ಮಾಡಲೂ ಸಹ ತೊಂದರೆ ಆಗಿದೆ. ಈಗಿರುವ ಟವರ್ಗಳಲ್ಲಿ ಉತ್ತಮ ರೀತಿಯಲ್ಲಿ ನೆಟ್ವರ್ಕ್ ಸಂಪರ್ಕ ದೊರೆಯುವಂತೆ ಗಮನ ಹರಿಸಲು ಸಂಸದರು ಸೂಚಿಸಿದರು.
ಪ್ರತಿ ಟವರ್ ನಿರ್ಮಾಣಕ್ಕೆ 75 ಲಕ್ಷ ರೂ.ನಿಂದ 1 ಕೋ.ರೂ. ವರೆಗೆ ವೆಚ್ಚ ತಗುಲ ಲಿದ್ದು, 225 ಟವರ್ ನಿರ್ಮಾಣಕ್ಕೆ ಅಂದಾಜು 200 ಕೋ.ರೂ.ಗೂ ಮಿಕ್ಕಿ ಅನುದಾನವನ್ನು ಕೇಂದ್ರ ಸರಕಾರವು ಬಿಎಸ್ಸೆನ್ನೆಲ್ ಮೂಲಕ ಯುಎಸ್ಒಎಫ್ ಅನುದಾನದಲ್ಲಿ ನೀಡಲಿದೆ. ಡಿಸೆಂಬರ್ನೊಳಗೆ ಬಹುತೇಕ ಎಲ್ಲ ಟವರ್ಗಳು ನಿರ್ಮಾಣವಾಗಲಿದೆ. ಇದರಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂರಾರು ಕುಗ್ರಾಮಗಳಿಗೆ ದೂರಸಂಪರ್ಕ ವ್ಯವಸ್ಥೆ ಒದಗಲಿದೆ.
– ಬಿ.ವೈ . ರಾಘವೇಂದ್ರ,
ಶಿವಮೊಗ್ಗ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ