ನಾಳೆ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಕುಂದಾಪುರ ಡಿಪೋದಿಂದ 45 ವಿಶೇಷ ಬಸ್ಗಳು
Team Udayavani, Jun 17, 2020, 1:31 PM IST
ಸಾಂದರ್ಭಿಕ ಚಿತ್ರ
ಕುಂದಾಪುರ: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂ. 18 ರಂದು ನಡೆಯಲಿದ್ದು, ಕುಂದಾಪುರ ಕೆಎಸ್ಆರ್ಟಿಸಿ ಡಿಪೋದಿಂದ ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ 45 ವಿಶೇಷ ಬಸ್ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡಲಾಗಿದೆ. ಪ.ಪೂ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಯಾಯ ಪ.ಪೂ. ಕಾಲೇಜಿನ ಮುಖಾಂತರ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ್ದು, ಸ್ವಂತ, ಖಾಸಗಿ ವಾಹನದಲ್ಲಿ ಬರುವ ವಿದ್ಯಾರ್ಥಿಗಳು ಹೊರತುಪಡಿಸಿ, ಬಾಕಿ ಅವಶ್ಯವಿರುವ ಉಳಿದ ಎಲ್ಲರಿಗೂ ಬಸ್ ವ್ಯವಸ್ಥೆ ಮಾಡಲಾಗಿದೆ.
ಯಾವೆಲ್ಲ ರೂಟ್ಗಳು?
ಕುಂದಾಪುರ – ಬೈಂದೂರು, ಗೋಳಿಹೊಳೆ – ಕುಂದಾಪುರ, ಉಪ್ಪುಂದ – ನಾವುಂದ, ಗೋಳಿಯಂಗಡಿ- ಬಾರ್ಕೂರು, ಭಟ್ಕಳ- ಬೈಂದೂರು, ಕೊಲ್ಲೂರು – ವಂಡ್ಸೆ, ಹೊಸಂಗಡಿ – ಬಿದ್ಕಲ್ಕಟ್ಟೆ, ಹಳ್ಳಿಹೊಳೆ – ಬಿದ್ಕಲ್ಕಟ್ಟೆ, ಶೇಡಿಮನೆ- ಬಿದ್ಕಲ್ಕಟ್ಟೆ, ಬೇಳೂರು – ಕೋಟೇಶ್ವರ, ಕೊಲ್ಲೂರು – ಕುಂದಾಪುರ, ಕುಂದಾಪುರ – ಬ್ರಹ್ಮಾವರ, ಸಿದ್ದಾಪುರ – ಬ್ರಹ್ಮಾವರ, ಕುಂದಾಪುರ- ಉಡುಪಿ, ಗಂಗೊಳ್ಳಿ – ಕುಂದಾಪುರ ಮಾರ್ಗದಲ್ಲಿ ಬಸ್ಗಳು ಸಂಚರಿಸಲಿದೆ.
ಎಲ್ಲಿಂದ ? ಎಷ್ಟು ಬಸ್?
ಕುಂದಾಪುರದ ವಿವಿಧೆಡೆಯಿಂದ 45 ಕೆಎಸ್ಆರ್ಟಿಸಿ ಬಸ್ಗಳನ್ನು ಕಲ್ಪಿಸಲಾಗಿದೆ. ಗಂಗೊಳ್ಳಿ – 6, ಗೋಳಿಹೊಳೆ – 1, ಉಪ್ಪುಂದ – 2, ಕೊಲ್ಲೂರು – 5, ಭಟ್ಕಳ-5, ಬೈಂದೂರು – 2, ಹೊಸಂಗಡಿ-4, ಹಳ್ಳಿಹೊಳೆ-2, ಶೇಡಿಮನೆ-1, ಮಚ್ಚಟ್ಟು-2, ಬೇಳೂರು -1, ಕೆರಾಡಿ-1, ಆಲೂರು-1, ನೆಲ್ಲಿಕಟ್ಟೆ -1, ನೂಜಾಡಿ -1, ಹಾಲಾಡಿ-2, ಕೊಂಡಳ್ಳಿ-1, ಆವರ್ಸೆ-1, ಸಿದ್ದಾಪುರ-3, ಗೋಳಿಯಂಗಡಿ-1, ಕುಂದಾಪುರ-2 ಬಸ್ಗಳು ಸಂಚರಿಸಲಾಗಿದೆ.
ಪರೀಕ್ಷಾ ಕೇಂದ್ರಗಳು
ಅವಿಭಜಿತ ಕುಂದಾಪುರ ತಾಲೂಕಿನ 9 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆಯಲಿದ್ದು, ಕುಂದಾಪುರ ಸರಕಾರಿ ಪ.ಪೂ., ಭಂಡಾರ್ಕಾರ್ ಕಾಲೇಜು, ಆರ್.ಎನ್. ಶೆಟ್ಟಿ ಪ.ಪೂ. ಕಾಲೇಜು, ಬೈಂದೂರು, ಶಿರೂರು, ನಾವುಂದ, ವಂಡ್ಸೆ, ಬಿದ್ಕಲ್ಕಟ್ಟೆ, ಕೋಟೇಶ್ವರ ಪ.ಪೂ. ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ