53 ಲಕ್ಷ ರೂ. ಅಡಿಕೆ ಅಕ್ರಮ ಸಾಗಾಟ
Team Udayavani, Nov 11, 2020, 1:45 AM IST
ಕುಂದಾಪುರ: ಲಾರಿಯಲ್ಲಿ ಉತ್ತರಪ್ರದೇಶಕ್ಕೆ ಅಕ್ರಮವಾಗಿ ಅಡಿಕೆ ಸಾಗಾಟವಾಗುತ್ತಿದ್ದುದನ್ನು ಪಶ್ಚಿಮ ವಲಯ ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರು ಮಂಗಳವಾರ ಪತ್ತೆಹಚ್ಚಿದ್ದಾರೆ. ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭ ಅಂಪಾರು-ಕೊಲ್ಲೂರು ರಸ್ತೆಯ ವಂಡ್ಸೆಯಲ್ಲಿ ಲಾರಿಯನ್ನು ತಡೆ ಹಿಡಿದು 380 ಚೀಲ (24,700 ಕೆ.ಜಿ.) ಅಡಿಕೆಯನ್ನು ವಾಹನದೊಂದಿಗೆ ವಶಪಡಿಸಿಕೊಂಡಿದ್ದಾರೆ.
ವಿಚಾರಣೆ ನಡೆಸಿದಾಗ ಸರಕು ಸಾಗಣೆದಾರರು ಕರ್ನಾಟಕದಲ್ಲಿ ಅಡಿಕೆ ಸರಕನ್ನು ಪಡೆದು ಅದನ್ನು ಕೇರಳ ವರ್ತಕರಿಗೆ ಸಂಬಂಧಿಸಿದ ನಕಲಿ ದಾಖಲೆಗಳೊಂದಿಗೆ ಸಾಗಣೆ ಮಾಡುತ್ತಿರುವುದು ಗೊತ್ತಾಗಿದೆ. ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಪ್ರಕರಣದಡಿಯಲ್ಲಿ ಅಡಿಕೆ ಸಾಗಣೆದಾರರಾದ ಯೂನಿಯನ್ ಕಾರ್ಗೋ ಮೂವರ್ ಪುತ್ತೂರು ಅವರಿಂದ ತೆರಿಗೆ ಮತ್ತು ದಂಡ ಸಹಿತ ಒಟ್ಟು 53.10 ಲಕ್ಷ ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಉದಯಶಂಕರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು