ವರವಾದ ಕೋವಿಡ್ -ಮುಂಗಾರು: ಶೇ.97ರಷ್ಟು ಭತ್ತ ಕೃಷಿ

ಹಡಿಲು ಗದ್ದೆಗಳಿಗೂ ಮರು ಜೀವ ; ನಿರೀಕ್ಷೆಗೂ ಮೀರಿದ ಗುರಿ ಸಾಧನೆ

Team Udayavani, Sep 8, 2020, 4:10 AM IST

ವರವಾದ ಕೋವಿಡ್ -ಮುಂಗಾರು: ಶೇ.97ರಷ್ಟು ಭತ್ತ ಕೃಷಿ

ಕುಂದಾಪುರ: ಕೋವಿಡ್ , ಲಾಕ್‌ಡೌನ್‌ ಬೇರೆ ಎಲ್ಲ ಉದ್ಯಮಗಳಿಗೆ ಸಂಕಷ್ಟ ತಂದಿತ್ತರೆ, ಕೃಷಿಗೆ ಅದರಲ್ಲೂ ಭತ್ತದ ಕೃಷಿಗೆ ಮಾತ್ರ ವರವಾಗಿ ಪರಿಣಮಿಸಿದೆ. ಇದಕ್ಕೆ ಮುಂಗಾರು ಮಳೆಯು ಉತ್ತಮ ರೀತಿಯ ಸಹಕಾರ ನೀಡಿದೆ. ಹಾಗಾಗಿ ಈ ಬಾರಿ ಅವಿಭಜಿತ ಕುಂದಾಪುರ ತಾಲೂಕಿನಲ್ಲಿ
ಶೇ. 97.75ರಷ್ಟು ಭತ್ತದ ಬೇಸಾಯ ಆಗಿದೆ. ಬೆಂಗಳೂರು, ಮುಂಬಯಿ ಮತ್ತಿತರ ಕಡೆಗಳಿಂದ ಊರಿಗೆ ಬಂದಿರುವ ಜನ ಮಾತ್ರವಲ್ಲದೆ ಊರಲ್ಲೇ ಇದ್ದ ಅನೇಕ ಮಂದಿ ಈ ಬಾರಿ ಕೃಷಿಯತ್ತ ಒಲವು ತೋರಿದ್ದರಿಂದ ಈ ಬಾರಿ ನಿರೀಕ್ಷೆಗೂ ಮೀರಿದ ಗುರಿ ಸಾಧನೆಯಾಗಿದೆ.

ವಲಯವಾರು ಎಷ್ಟೆಷ್ಟು?
ಕುಂದಾಪುರ ಹೋಬಳಿಯಲ್ಲಿ 4,670 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಕೃಷಿ ಗುರಿಯಾಗಿದ್ದು, 4,670 ಹೆ. ಪ್ರದೇಶದಲ್ಲಿ ಸಾಧಿಸಲಾಗಿದೆ. ವಂಡ್ಸೆಯಲ್ಲಿ 4,570 ಹೆ. ಪ್ರದೇಶದಲ್ಲಿ ಗುರಿಯಿದ್ದು, 4,255 ಹೆ. ಪ್ರದೇಶದಲ್ಲಿ ಬೆಳೆಯಲಾಗಿದೆ. ಹೆಬ್ರಿಯಲ್ಲಿ 350 ಹೆ. ಪ್ರದೇಶದಲ್ಲಿ ಗುರಿಯಿದ್ದು, 350 ಹೆ. ಗುರಿ ಸಾಧಿಸಲಾಗಿದೆ. ಬೈಂದೂರಲ್ಲಿ 4,410 ಹೆ. ಪ್ರದೇಶದಲ್ಲಿ ಗುರಿಯಿದ್ದು, 4,410 ಸಾಧಿಸಲಾಗಿದೆ. ಬೈಂದೂರು, ಕುಂದಾಪುರ, ಹೆಬ್ರಿಯಲ್ಲಿ ಶೇ.100 ರಷ್ಟು ಗುರಿ ಸಾಧನೆಯಾಗಿದೆ.

ಹಡಿಲು ಗದ್ದೆಯಲ್ಲೂ ಬೇಸಾಯ
ಈ ಬಾರಿಯ ಮುಂಗಾರು ಹಂಗಾಮಿನ ವಿಶೇಷತೆಯೆಂದರೆ ಕುಂದಾಪುರ, ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ಹಡಿಲು ಬಿಟ್ಟಿದ್ದ ಗದ್ದೆಗಳಲ್ಲಿ ಭತ್ತದ ಬೇಸಾಯ ಮಾಡಲಾಗಿದೆ. ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ನೇತೃತ್ವದಲ್ಲಿಯೇ ಕುಂದಾಪುರದ ಬೆಳ್ವೆ, ಅಮಾಸೆಬೈಲು, ಹಾಲಾಡಿ ಸೇರಿದಂತೆ ಹಲವೆಡೆಗಳಲ್ಲಿ 280ಕ್ಕೂ ಹೆಚ್ಚು ಎಕರೆ ಹಡಿಲು ಪ್ರದೇಶಗಳಲ್ಲಿ ಭತ್ತದ ಕೃಷಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಯಿಂದ 700ಕ್ಕೂ ಹೆಚ್ಚು ಎಕರೆ ಪ್ರದೇಶಗಳ ಹಡಿಲು ಗದ್ದೆಗಳಲ್ಲಿ ಭತ್ತದ ಬೇಸಾಯ ಮಾಡುವ ಮೂಲಕ ಮರು ಜೀವ ನೀಡಲಾಗಿದೆ. ಇದಲ್ಲದೆ ಕೋಡಿ, ಪಡುಕೋಣೆ ಸೇರಿದಂತೆ ಅನೇಕ ಕಡೆಗಳಲ್ಲಿ ವಿವಿಧ ಸಂಘ- ಸಂಸ್ಥೆಗಳ ಮುಖಾಂತರ ಹಡಿಲು ಗದ್ದೆಗಳನ್ನು ಬೇಸಾಯ ಮಾಡಲಾಗಿದೆ.

ಉತ್ತಮ ಸಾಧನೆ
ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಭತ್ತದ ಕೃಷಿಯಲ್ಲಿ ಉತ್ತಮ ಸಾಧನೆ ಮೂಡಿ ಬಂದಿದೆ. ಕೊರೊನಾ, ಲಾಕ್‌ಡೌನ್‌ ಕೂಡ ಇದಕ್ಕೆ ಕಾರಣವಾಗಿರಬಹುದು. ಮಳೆಯು ಉತ್ತಮ ವಾಗಿದ್ದು, ಅದು ಕೂಡ ಒಂದು ರೀತಿಯಲ್ಲಿ ಕಾರಣ ಆಗಿರಬಹುದು. ಉತ್ತಮ ಫಸಲಿನ ನಿರೀಕ್ಷೆಯಿದೆ.
-ರೂಪಾ ಮಾಡಾ, ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ ಕುಂದಾಪುರ

ಉತ್ತಮ ಫಸಲು ನಿರೀಕ್ಷೆ
ನಮ್ಮ ಭಾಗದಲ್ಲಿ ಉಪ್ಪು ನೀರಿನ ಸಮಸ್ಯೆ ಇರುವುದರಿಂದ ಪೇಪರ್‌ ಲೋಟದಲ್ಲಿ ಬಿತ್ತನೆ ಮಾಡಿ, ಅದನ್ನು ಗದ್ದೆಯಲ್ಲಿ ನಾಟಿ ಮಾಡಲಾಗಿದೆ. ಈಗ ಒಂದೊಂದು ಬುಡದಲ್ಲಿ 50ಕ್ಕೂ ಹೆಚ್ಚು ಸಸಿಗಳು ಕವಲೊಡೆದಿವೆ. ಮನೆಯವರೆಲ್ಲ ಸೇರಿ ಈ ಕಾರ್ಯವನ್ನು ಮಾಡಿದ್ದೆವು. ಉತ್ತಮ ಫಸಲಿನ ನಿರೀಕ್ಷೆಯಿದೆ.
– ವಿಶ್ವನಾಥ್‌ ಗಾಣಿಗ,  ಕಟ್‌ಬೆಲ್ತೂರು, ಕೃಷಿಕ

 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.