ಬಸ್ರೂರು ಬಸ್ ನಿಲ್ದಾಣ ಸಮೀಪ ಅಪಾಯಕಾರಿ ತಿರುವು
ಕನಿಷ್ಠ ಸೂಚನಾ ಫಲಕವೂ ಇಲ್ಲ
Team Udayavani, Sep 30, 2020, 2:07 AM IST
ಬಸ್ರೂರು ಬಸ್ ನಿಲ್ದಾಣ ಸಮೀಪವಿರುವ ಅಪಾಯಕಾರಿ ತಿರುವು.
ಬಸ್ರೂರು: ಬಸ್ರೂರು ಬಸ್ ನಿಲ್ದಾಣದ ಸಮೀಪ ಕುಂದಾಪುರ ಕಡೆಗೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಇರುವ ತಿರುವು ಅಪಾಯಕಾರಿಯಾಗಿದ್ದು, ವಾಹನ ಸವಾರರು ಅತಿ ಎಚ್ಚರಿಕೆಯಿಂದ ಸಂಚರಿಸ ಬೇಕಾಗಿದೆ.
ಬಸ್ರೂರು ಕಡೆಯಿಂದ ಸಾಗುವ ವಾಹನಗಳಿಗೆ ಈ ತಿರುವಿನಲ್ಲಿ ಎದುರುಗಡೆಯಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಇಲ್ಲಿ ಕನಿಷ್ಠ ಒಂದು ಸೂಚನಾ ಫಲಕವೂ ಇಲ್ಲ. ಸಿದ್ದಾಪುರ – ಶಿವಮೊಗ್ಗ ಕಡೆಯಿಂದ ಬರುವ ವಾಹನಗಳಿಗೆ ಈ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಈಗಾಗಲೇ ಹಲವು ಅಪಘಾತಗಳು ಸಂಭವಿಸಿವೆ.
ಇನ್ನಾದರೂ ಸಂಬಂಧಪಟ್ಟ ಇಲಾಖೆ ಕನಿಷ್ಠ ವಾಹನ ಸವಾರರಿಗೆ ಕಾಣಿಸುವಂತೆ ಒಂದು ಸೂಚನಾ ಫಲಕವನ್ನು ಹಾಕಬೇಕು. ಅದಲ್ಲದೆ ಅತಿ ವೇಗದಲ್ಲಿ ಬರುವ ವಾಹನಗಳಿಗೆ ತಡೆಯಾಗಿ “ಹಂಪ್ಸ್’ (ವೇಗತಡೆ) ನಿರ್ಮಿಸ ಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಶೀಘ್ರ ಸೂಚನಾ ಫಲಕ ಅಳವಡಿಕೆ
ಬಸ್ರೂರು ಬಸ್ ನಿಲ್ದಾಣದ ಸಮೀಪ ನೀರಿನ ಟ್ಯಾಂಕ್ ಹತ್ತಿರದ ತಿರುವು ಅಪಾಯಕಾರಿಯಾಗಿದ್ದು ಶೀಘ್ರ ಇಲ್ಲಿ ಅಗತ್ಯ ಸೂಚನಾ ಫಲಕ ಅಳವಡಿಸಲಾಗುವುದು.
-ನಾಗೇಂದ್ರ ಜೆ., ಅಭಿವೃದ್ಧಿ ಅಧಿಕಾರಿ, ಬಸ್ರೂರು ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ