Kundapura: ಪ್ರಾಣಿ-ಪಕ್ಷಿಗಳಿಗಾಗಿ ಕಾಡಿನ ಕೆರೆ ಹೂಳೆತ್ತಿದ ರೈತ

ಸ್ವಂತ ಖರ್ಚಿನಲ್ಲಿ ಹೂಳೆತ್ತಿದ ಸರಕಾರಿ ಕೆರೆಯಲ್ಲೀಗ ಸಮೃದ್ಧ ನೀರು

Team Udayavani, Mar 27, 2024, 11:00 AM IST

3-kundapura

ಕುಂದಾಪುರ: ಈ ಬಾರಿ ಕಡಿಮೆ ಮಳೆಯಿಂದಾಗಿ ಎಲ್ಲೆಡೆ ಪ್ರಾಣಿ, ಪಕ್ಷಿ, ಸಸ್ಯಗಳು, ಜೀವಸಂಕುಲಗಳು ಕುಡಿಯುವ ನೀರಿಗೆ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಬಿಸಿಲಿನ ಝಳದಿಂದ ಅಂತರ್ಜಲ ಮಟ್ಟವೂ ಪಾತಾಳಕ್ಕಿಳಿದಿದೆ. ಆದರೆ ಇಲ್ಲೊಬ್ಬರು ರೈತರು ಸರಕಾರಿ ಕೆರೆಯ ಹೂಳೆತ್ತಿ, ಕಾಡು ಪ್ರಾಣಿ – ಪಕ್ಷಿಗಳಿಗೆ ಬೇಸಗೆಯಲ್ಲಿ ದಾಹ ತಣಿಸುವ ಪುಣ್ಯದ ಕಾರ್ಯ ಮಾಡಿ ಪರಿಸರ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಮೊಳಹಳ್ಳಿ ಗ್ರಾಮದ ಹೆಬ್ಗೋಳಿಯ ಪ್ರಗತಿಪರ ಕೃಷಿಕ ಪ್ರವೀಣ್‌ ಕುಲಾಲ್‌ ಅವರೇ ಜೆಸಿಬಿ ಮೂಲಕ ಸ್ವಂತ ಖರ್ಚಿನಲ್ಲಿ ಸರಕಾರಿ ಕೆರೆಯ ಹೂಳೆತ್ತಿ ಪ್ರಾಣಿ – ಪಕ್ಷಿಗಳಿಗೆ ನೀರುಣಿಸುವ ಪ್ರಯತ್ನ ಮಾಡಿದವರು. ಕೆರೆಯಲ್ಲೀಗ ಸಮೃದ್ಧವಾದ ನೀರು ತುಂಬಿಕೊಂಡಿದ್ದು, ಬಿಸಿಲಿನ ತಾಪಕ್ಕೆ ಬಳಲಿ ಬರುವ ಪ್ರಾಣಿ- ಪಕ್ಷಿಗಳಿಗೆ ವರದಾನವಾಗಿದೆ.

ಕಂಪೆನಿ ಕೆಲಸ ಬಿಟ್ಟು ಕೃಷಿ ಕಾಯಕ

ಬೆಂಗಳೂರಿನ ಖಾಸಗಿ ಕಂಪೆನಿ ಯಲ್ಲಿ 10 ವರ್ಷಗಳ ಕಾಲ ಕೆಲಸ ಮಾಡಿ ಕೊರೊನಾ ಸಮಯದಲ್ಲಿ ಅದನ್ನು ಬಿಟ್ಟು ಊರಿಗೆ ಬಂದ ಪ್ರವೀಣ್‌ ಕುಲಾಲ್‌ 4 ವರ್ಷಗಳಿಂದ ಊರಲ್ಲಿಯೇ ಇದ್ದು, ಹತ್ತಾರು ಬಗೆಯ ಕೃಷಿ ಮಾಡಿಕೊಂಡಿದ್ದಾರೆ. ತಕ್ಕಮಟ್ಟಿಗೆ ಉತ್ತಮ ಆದಾಯ ಗಳಿಸುತ್ತಿದ್ದೇನೆ. ಕೃಷಿಯಲ್ಲಿ ಇನ್ನಷ್ಟು ಪ್ರಯೋಗ ಮಾಡುವ ಕನಸಿದೆ ಎಂದವರು ಹೇಳಿಕೊಳ್ಳುತ್ತಾರೆ.

ಪ್ರವೀಣ್‌ ಕುಲಾಲ್‌ ಕೃಷಿ ತೋಟದ ಸ್ವಲ್ಪ ದೂರದಲ್ಲಿಯೇ ಇರುವ ಹತ್ತಾರು ಎಕರೆ ವಿಸ್ತೀರ್ಣದ ಈ ಕೆರೆ ಬಹಳ ವರ್ಷಗಳಿಂದಲೂ ಕಾಡಿನ ಪ್ರಾಣಿ-ಪಕ್ಷಿಗಳಿಗೆ ನೀರುಣಿಸುತ್ತಿದೆ. ಕೆಲವು ವರ್ಷಗಳಿಂದ ಹೂಳು, ಗಿಡ ಗಂಟಿ ತುಂಬಿ ಮರೆಯಾಗುವ ಸ್ಥಿತಿಗೆ ತಲುಪಿತ್ತು.

7-8 ಅಡಿ ನೀರು ಸಂಗ್ರಹ

ಇದನ್ನು ಮನಗಂಡ ಪ್ರವೀಣ್‌ ಕಳೆದ ಮಾರ್ಚ್‌-ಎಪ್ರಿಲ್‌ನಲ್ಲಿ ಸುಮಾರು 15 ದಿನಗಳ ಕಾಲ ಜೆಸಿಬಿ ತಂದು ಹೂಳೆತ್ತಿದರು. ಆಗ ಅಧಿಕಾರಿಗಳು, ಕೆಲವರಿಂದ ವಿರೋಧ ಬಂದರೂ ಲೆಕ್ಕಿಸಲಿಲ್ಲ. ಈ ಬಾರಿ ಮಳೆ ಕಡಿಮೆ ಯಾದರೂ ಕೆರೆಯಲ್ಲಿ ಸುಮಾರು 2 ಎಕರೆ ಜಾಗದಲ್ಲಿ ನೀರು ತುಂಬಿಕೊಂಡಿದೆ. ಕೆಲವೆಡೆ 7-8 ಅಡಿಯಷ್ಟು ನೀರಿದೆ. ಇದು ಎರಡು ಕಾಡುಗಳ ಮಧ್ಯೆ ಇರುವ ಕೆರೆಯಾಗಿದ್ದು, ಆಚೆಯಿಂದ ಈಚೆಗೆ, ಈಚೆಗೆ ಆಚೆಗೆ ಹೋಗುವ ಕಾಡು ಪ್ರಾಣಿಗಳಿಗೆ ನೀರು ಕುಡಿಯಲು ಅನುಕೂಲವಾಗಲಿದೆ.

ಮುಖ್ಯವಾಗಿ ಜಿಂಕೆ, ಕಡವೆ, ಹಂದಿ, ನವಿಲು, ಕಾಡುಕೋಣ, ಮೊಲ, ಚಿರತೆಗಳು ಬಂದು ನೀರು ಕುಡಿಯುತ್ತವೆ ಎನ್ನುತ್ತಾರೆ ಪ್ರವೀಣ್‌.

ಇಲ್ಲಿ ಬಂದು ಸಂಜೆ ಕುಳಿತುಕೊಂಡಾಗ ಪ್ರಾಣಿ, ಪಕ್ಷಿಗಳು ಬಂದು ನೀರು ಕುಡಿಯುವುದನ್ನು ನೋಡಿದಾಗ ನಾನು ಮಾಡಿದ ಕೆಲಸದ ಬಗ್ಗೆ ತೃಪ್ತಿಯಾಗುತ್ತದೆ. ಮುಂದಿನ ದಿನಗಳಲ್ಲಿ ಅವುಗಳಿಗಾಗಿ ಕೆರೆಯ ಸುತ್ತ ಹಣ್ಣಿನ ಗಿಡಗಳು, ಗೆಡ್ಡೆ, ಗೆಣಸು ನೆಡುವ ಬಗ್ಗೆ ಯೋಚನೆ ಹಾಕಿಕೊಂಡಿದ್ದೇನೆ. ಇದರಿಂದ ಕಾಡು ಪ್ರಾಣಿಗಳು ತೋಟಕ್ಕೆ ಬರದಂತೆಯೂ ತಡೆಯಬಹುದು. – ಪ್ರವೀಣ್‌ ಕುಲಾಲ್‌ ಹೆಬ್ಗೋಳಿ, ಪ್ರಗತಿಪರ ಕೃಷಿಕ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.