ಗ್ರಾಮಾಂತರದಲ್ಲಿ ಪೂರ್ಣ ಪ್ರಮಾಣದಲ್ಲಿ ಸಂಚರಿಸದ ಬಸ್
ಆತಂಕದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು
Team Udayavani, Jun 15, 2020, 5:29 AM IST
ಸಾಂದರ್ಭಿಕ ಚಿತ್ರ.
ಕುಂದಾಪುರ: ಮುಂಜಾಗ್ರತಾ ಕ್ರಮಗಳೊಂದಿಗೆ ಜೂ.18ಕ್ಕೆ ಇಂಗ್ಲಿಷ್ ಪಿಯು ಪರೀಕ್ಷೆ ಹಾಗೂ ಜೂ. 25ರಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಆದರೆ ಕುಂದಾಪುರ, ಬೈಂದೂರು ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗ ದಿರುವುದರಿಂದ ಈ ಪ್ರದೇಶಗಳಿಂದ ಬಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಾಧ್ಯತೆಗಳಿವೆ.
ಹಕ್ಲಾಡಿ, ನೂಜಾಡಿ, ಜಡ್ಕಲ್, ಮುದೂರು, ಹೆಂಗವಳ್ಳಿ, ಹಳ್ಳಿಹೊಳೆ, ಯಡಮೊಗೆ, ಹೇರಂಜಾಲು, ಕಾಲ್ತೋಡು ಮತ್ತಿತರ ಕಡೆಗಳಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ. ಹಾಗಾಗಿ ಈ ಭಾಗದಿಂದ ಕುಂದಾಪುರ ಅಥವಾ ಬೇರೆ ಪರೀಕ್ಷಾ ಕೇಂದ್ರ
ಗಳಿಗೆ ಬರುವ ಮಕ್ಕಳಿಗೆ ಸಮಸ್ಯೆಯಾಗಲಿದೆ. ಮುದೂರು, ಜಡ್ಕಲ್ ಭಾಗದ ವಿದ್ಯಾರ್ಥಿಗಳಿಗೆ ಕೊಲ್ಲೂರು ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ. ಗೋಳಿಯಂಗಡಿ, ಬೆಳ್ವೆ, ಅಲಾºಡಿ, ಹೆಂಗವಳ್ಳಿ ಭಾಗದವರಿಗೆ ಆವರ್ಸೆಯಲ್ಲಿ ಪರೀಕ್ಷೆ ನಡೆಯಲಿದೆ. ಆರ್ಡಿ, ಹಾಲಾಡಿ ಭಾಗದವರಿಗೆ ಬಿದ್ಕಲ್ಕಟ್ಟೆಯಲ್ಲಿ ಪರೀಕ್ಷೆ ನಡೆಯಲಿದೆ. ಇಲ್ಲಿನ ಕೆಲ ಕಡೆಗಳಲ್ಲಿ ಬಸ್ ಸಂಚಾರ ಇಲ್ಲದಿದ್ದರೆ, ಮತ್ತೆ ಕೆಲವೆಡೆಗಳಲ್ಲಿ ಮಕ್ಕಳಿಗೆ ಅನುಕೂಲ ಕರ ಸಮಯದಲ್ಲಿ ಬಸ್ಸಿಲ್ಲ.
ಪಿಯು : 9 ಪರೀಕ್ಷಾ ಕೇಂದ್ರ
ಅವಿಭಜಿತ ಕುಂದಾಪುರ ತಾಲೂಕಿನ 9 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆಯಲಿದ್ದು, ಕುಂದಾಪುರ ಸರಕಾರಿ ಪ.ಪೂ., ಭಂಡಾರ್ಕಾರ್ ಕಾಲೇಜು, ಆರ್.ಎನ್. ಶೆಟ್ಟಿ ಪ.ಪೂ. ಕಾಲೇಜು, ಬೈಂದೂರು, ಶಿರೂರು, ನಾವುಂದ, ವಂಡ್ಸೆ, ಬಿದ್ಕಲ್ಕಟ್ಟೆ, ಕೋಟೇಶ್ವರ ಪ.ಪೂ. ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿವೆ.
ಕುಂದಾಪುರ : 2,457 ವಿದ್ಯಾರ್ಥಿಗಳು
ಎಸೆಸೆಲ್ಸಿ ಪರೀಕ್ಷೆಗೆ ಕುಂದಾಪುರ ವಲಯದಲ್ಲಿ 8 ಕೇಂದ್ರಗಳಿದ್ದು, ಹೆಚ್ಚುವರಿಯಾಗಿ ಒಂದೆರಡು ಕೇಂದ್ರಗಳನ್ನು ಮಾಡಲಾಗಿದೆ. ಕುಂದಾಪುರ ಬೋರ್ಡ್ ಹೈಸ್ಕೂಲ್, ಸೈಂಟ್ ಮೇರಿಸ್, ಪಬ್ಲಿಕ್ ಶಾಲೆ ಕೋಟೇಶ್ವರ, ಬಿದ್ಕಲ್ಕಟ್ಟೆ, ಶಂಕರನಾರಾಯಣ, ಸಿದ್ದಾಪುರ, ಬಸೂÅರು, ಗಂಗೊಳ್ಳಿ ಕೇಂದ್ರ ಗಳಲ್ಲಿ ಒಟ್ಟು 2,457 ಮಂದಿ ಪರೀಕ್ಷೆ ಬರೆಯಲಿದ್ದಾರೆ.
ಬೈಂದೂರು : 2,060 ವಿದ್ಯಾರ್ಥಿಗಳು
ಬೈಂದೂರು ವಲಯದಲ್ಲಿ 8 ಕೇಂದ್ರಗಳಿದ್ದು, ಬೈಂದೂರು ಸರಕಾರಿ ಪ್ರೌಢಶಾಲೆ, ರತ್ತುಬಾಯಿ ಜನತಾ ಪ್ರೌಢಶಾಲೆ, ಉಪ್ಪುಂದ ಜೂ| ಕಾಲೇಜು, ಕಂಬದಕೋಣೆ ಜೂ| ಕಾಲೇಜು, ನಾವುಂದ ಜೂ| ಕಾಲೇಜು, ತಲ್ಲೂರು ಸರಕಾರಿ ಪ್ರೌಢಶಾಲೆ, ವಂಡ್ಸೆ ಜೂನಿಯರ್ ಕಾಲೇಜು ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಗಳಲ್ಲಿ ಒಟ್ಟು 2,060 ಮಂದಿ ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ.
ಬಸ್ಸಿಲ್ಲದೆ ಸಮಸ್ಯೆ
ನಮ್ಮ ಮನೆ ಹಕ್ಲಾಡಿ. ಪರೀಕ್ಷೆ ಇರುವುದು ಕುಂದಾಪುರದಲ್ಲಿ. ಈ ಮಾರ್ಗದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.. ಈ ಮಾರ್ಗದಲ್ಲಿ ವಿಶೇಷ ಬಸ್ ಕಲ್ಪಿಸಿದರೆ ಸಹಕಾರಿ ಯಾಗಲಿದೆ ಎಂದು ಹಕ್ಲಾಡಿಯ ವಿದ್ಯಾರ್ಥಿನಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು
ಈಗಾಗಲೇ ಇಲಾಖೆಯಿಂದ ಯಾವೆಲ್ಲ ಮಾರ್ಗಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದರ ಕುರಿತು ರೂಟ್ಗಳನ್ನು ಸಿದ್ಧಪಡಿಸಿ ಜಿಲ್ಲಾಡಳಿತದ ಗಮನಕ್ಕೆ ತಂದು, ಕೆಎಸ್ಆರ್ಟಿಸಿಗೆ ನೀಡಲಾಗಿದೆ. ಇನ್ನು ಏನಾದರೂ ಸಮಸ್ಯೆಗಳಿದ್ದರೆ ಆಯಾಯ ಕಾಲೇಜುಗಳ ಶಿಕ್ಷಕರ ಗಮನಕ್ಕೆ ತನ್ನಿ. ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು.
– ಭಗವಂತ ಕಟ್ಟಿಮನೆ, ಉಪ ನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ