Malenaduನಾಗೋಡಿ ಗ್ರಾಮಸ್ಥರ ಹೃದಯಸ್ಪರ್ಶಿ ಕಾಣಿಕೆ; ವರ್ಗವಾದ ಶಿಕ್ಷಕನಿಗೆ ಬೈಕ್‌ ಉಡುಗೊರೆ!

ಅಚ್ಚರಿಯ ಬೈಕ್‌ ಕಂಡು ಶಿಕ್ಷಕ ಸಂತೋಷ್‌ ಆನಂದಬಾಷ್ಪ

Team Udayavani, Jan 15, 2024, 7:00 AM IST

Malenadu ನಾಗೋಡಿ ಗ್ರಾಮಸ್ಥರ ಹೃದಯಸ್ಪರ್ಶಿ ಕಾಣಿಕೆ; ವರ್ಗವಾದ ಶಿಕ್ಷಕನಿಗೆ ಬೈಕ್‌ ಉಡುಗೊರೆ!

ಸಿದ್ದಾಪುರ: ಮಲೆನಾಡಿನ ಅತ್ಯಂತ ಕುಗ್ರಾಮ, ಸಾಗರ ತಾಲೂಕಿನ ನಾಗೋಡಿಯ ವಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿ ವರ್ಗಾವಣೆಗೊಂಡ ಶಿಕ್ಷಕ ಸಂತೋಷ್‌ ಕಾಂಚನ್‌ ಕೋಟ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಸಂದರ್ಭ ಸುಮಾರು 1.58 ಲಕ್ಷ ರೂ. ಮೌಲ್ಯದ ಬೈಕನ್ನು ಉಡುಗೊರೆಯಾಗಿ ನೀಡಿ ನಿಷ್ಕಲ್ಮಶ ಪ್ರೀತಿಗೆ ಹೊಸ ಭಾಷ್ಯ ಬರೆದ್ದಾರೆ. ಸಂತೋಷ್‌ ಈ ಶಾಲೆಯಲ್ಲಿ 16 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.

ಈ ಸರಕಾರಿ ಶಾಲೆಯು ಕೊಡಚಾದ್ರಿ ಶ್ರೇಣಿಯ ತಪ್ಪಲಿನಲ್ಲಿ ದಟ್ಟ ಕಾನನದ ಮಧ್ಯೆ ಇದೆ. ರಾತ್ರಿಯಾಯಿತೆಂದರೆ ಕಾಡುಪ್ರಾಣಿಗಳ ಹಾವಳಿ. ಸುಮಾರು 130 ಗ್ರಾಮಸ್ಥರು ಇಲ್ಲಿದ್ದಾರೆ. 1ರಿಂದ 7ನೇ ತರಗತಿ ಇರುವ ಈ ಶಾಲೆಯಲ್ಲಿ ಈಗ ಒಟ್ಟು 13 ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕ ಸಂತೋಷ್‌ 2007ರಿಂದ ಈ ಶಾಲೆಯನ್ನು ಮುನ್ನಡೆಸಿಕೊಂಡು ಬಂದಿದ್ದು, ಈಗ ಕೌಟುಂಬಿಕ ಕಾರಣಕ್ಕಾಗಿ ಕುಂದಾಪುರ ತಾಲೂಕಿನ ಉಳ್ಳೂರು-74 ಗ್ರಾಮದ ವಾರಾಹಿ ಸ.ಕಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡಿದ್ದಾರೆ.

ಅಚ್ಚರಿಯ ಬೈಕ್‌ ಉಡುಗೊರೆ
ಹೀಗೊಂದು ಬೀಳ್ಕೊಡುಗೆ ನಡೆಯುತ್ತದೆ ಎಂದು ಸಂತೋಷ್‌ ಅವರಿಗೆ ಗೊತ್ತಿರಲಿಲ್ಲ. ಸಭಾ ಕಾರ್ಯಕ್ರಮ ನಡೆಯುತ್ತಿರುವಾಗ ಹೊಸ ಪಲ್ಸರ್‌ ಬೈಕ್‌ಗೆ ಪೂಜೆ ಮಾಡಿ ಅದನ್ನು ಸಂತೋಷ್‌ ಅವರಿಗೆ ಉಡುಗೊರೆಯಾಗಿ ನೀಡಲಾಯಿತು. ಸಂತೋಷ್‌ ತಮ್ಮ ಕುಟುಂಬದವರನ್ನು, ಊರಿನ ಜನರನ್ನು, ಶಾಲೆಯ ಮಕ್ಕಳನ್ನು ಬೈಕ್‌ ಮೇಲೆ ಕೂರಿಸಿ ಆನಂದಬಾಷ್ಪ ಸುರಿಸಿದರು.

ಕಾಡಿನ ಮಧ್ಯೆ ಇರುವ ಈ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆಯ ನಡುವೆಯೂ ಸಂತೋಷ್‌ ಪ್ರತಿನಿತ್ಯ ರಾತ್ರಿ ಉಳಿದು ಮಕ್ಕಳಿಗೆ ಪಾಠ ಮಾಡಿದ್ದಾರೆ. ಇಲ್ಲಿನ ಜನರದು ಕೂಲಿ ಹಾಗೂ ಕಾಡುತ್ಪತ್ತಿ ಸಂಗ್ರಹಿಸುವ ಬದುಕು. ಇವರಿಗೆ ಅಕ್ಷರ ಕಲಿಸುವುದೇ ಒಂದು ಸವಾಲು. ಸಂತೋಷ್‌ ಅಂತಹ ಮಕ್ಕಳಿಗೆ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿಸಿದ್ದಾರೆ. ಈ ಶಾಲೆಯ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಮೂರು ಬಾರಿ ರಾಜ್ಯಮಟ್ಟದ ಇನ್‌ಸ್ಪೈರ್‌ ಪ್ರಶಸ್ತಿ ಪಡೆದಿದ್ದಾರೆ.

ಮುಂದುವರಿದ ರಾತ್ರಿ ವಾಸ್ತವ್ಯ
ಶಿಕ್ಷಕ ಸಂತೋಷ್‌ ಕಾಂಚನ್‌ ಅವರು ವಾರಾಹಿ ಸ.ಕಿ.ಪ್ರಾ. ಶಾಲೆಗೆ ವರ್ಗವಾದ ಮೇಲೆ ವಳೂರು ಶಾಲೆಗೆ ಅವರಂಥ ಶಿಕ್ಷಕಿಯೇ ಲಭಿಸಿದ್ದಾರೆ. ಪ್ರಸ್ತುತ ಶಿಕ್ಷಕಿಯಾಗಿರುವ ನಯನಾ ಶಾಲೆಯಲ್ಲಿಯೇ ವಾಸ್ತವ್ಯ ಇದ್ದು, ದಿನದ 24 ಗಂಟೆಯೂ ಮಕ್ಕಳಿಗೆ ಲಭ್ಯರಿರುತ್ತಾರೆ.

ಆ್ಯಂಬುಲೆನ್ಸ್‌ ಆಗಿತ್ತು ಬೈಕ್‌
ಸಂತೋಷ್‌ 16 ವರ್ಷಗಳ ಹಿಂದೆ ಶಿಕ್ಷಕರಾಗಿ ಇಲ್ಲಿಗೆ ಬಂದಾಗ ಇಡೀ ಊರಿನಲ್ಲಿ ಒಂದೇ ಒಂದು ಬೈಕ್‌ ಇರಲಿಲ್ಲ. ಇಲ್ಲಿಂದ ತಾಲೂಕು ಕೇಂದ್ರವಾದ ಸಾಗರಕ್ಕೆ ತಲುಪಬೇಕಾದರೆ ಸುಮಾರು 80 ಕಿ.ಮೀ., ಶರಾವತಿ ಹಿನ್ನೀರು ದಾಟಿ ಹೋದರೆ ಹೊಸನಗರಕ್ಕೆ 65 ಕಿ.ಮೀ. ಹಾಗೂ ಕೊಲ್ಲೂರಿಗೆ 15 ಕಿ.ಮೀ. ಆಗುತ್ತದೆ. ಊರಿನ ಜನರು ಮತ್ತು ಮಕ್ಕಳು ಅನಾರೋಗ್ಯಕ್ಕೆ ತುತ್ತಾದರೆ ಸಂತೋಷ್‌ ಹಗಲು ರಾತ್ರಿ ಎನ್ನದೇ ಸ್ವಂತ ಬೈಕಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಊರಿನ ಜನರು ಶಿಕ್ಷಕರ ಬೈಕನ್ನು “ಆ್ಯಂಬುಲೆನ್ಸ್‌’ ಎಂದೇ ಕರೆಯುತ್ತಿದ್ದರು.

ವಳೂರು ಶಾಲೆಯಲ್ಲಿ 16 ವರ್ಷ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಇಲ್ಲಿನ ಮಕ್ಕಳ ಮತ್ತು ಗ್ರಾಮಸ್ಥರ ಪ್ರೀತಿಗೆ ಚಿರಋಣಿ.
-ಸಂತೋಷ್‌ ಕಾಂಚನ್‌, ಶಿಕ್ಷಕ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.