ಯಕ್ಷಗಾನ ಮೇಳಗಳ ತಿರುಗಾಟ; ಕ್ಷೇತ್ರಗಳಲ್ಲೇ ಪ್ರದರ್ಶನಕ್ಕೆ  ಒತ್ತು


Team Udayavani, Oct 31, 2020, 6:14 AM IST

ಯಕ್ಷಗಾನ ಮೇಳಗಳ ತಿರುಗಾಟ; ಕ್ಷೇತ್ರಗಳಲ್ಲೇ ಪ್ರದರ್ಶನಕ್ಕೆ  ಒತ್ತು

ಸಾಂದರ್ಭಿಕ ಚಿತ್ರ

ಕುಂದಾಪುರ: ಕೋವಿಡ್ ಕಾರಣದಿಂದ ಧಾರ್ಮಿಕ ಕ್ಷೇತ್ರಗಳಿಂದ ಹೊರಡುವ ಯಕ್ಷಗಾನ ಮೇಳಗಳು ಈ ಬಾರಿ ತಿರುಗಾಟದ ಆರಂಭದ ದಿನಗಳಲ್ಲಿ ಕ್ಷೇತ್ರದಲ್ಲೇ ಸೇವೆ ಸಲ್ಲಿಸಲು ಆದ್ಯತೆ ನೀಡಿವೆ. ಕಟ್ಟುಪಾಡುಗಳು ಸಡಿಲಗೊಂಡ ಬಳಿಕ ಊರಿನೊಳಗೆ ತಿರುಗಾಡಲಿವೆ. ಆದರೆ ಕ್ಷೇತ್ರದ ಮೇಳಗಳಿಗೆ ಕೆಲವು ಧಾರ್ಮಿಕ ನಿಬಂಧನೆಗಳು ಇರುವುದರಿಂದ ಎಚ್ಚರಿಕೆಯ ಹೆಜ್ಜೆಯಿಡುತ್ತಿವೆ.

ಧರ್ಮಸ್ಥಳ: 30 ದಿನ ಕ್ಷೇತ್ರದಲ್ಲಿ ಆಟ
ಧರ್ಮಸ್ಥಳ ಮೇಳ ನ.19ರಿಂದ ತಿರುಗಾಟ ಆರಂಭಿಸಲಿದ್ದು ಯಕ್ಷ ಕಲಾವಿದರ ಅನುಕೂಲಕ್ಕಾಗಿ 30 ದಿನ ಕ್ಷೇತ್ರದಲ್ಲೇ ಸೇವೆಯಾಟ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಡಿಸೆಂಬರ್‌ ಬಳಿಕ ಸರಕಾರದ ಸೂಚನೆಯಂತೆ ತಿರುಗಾಟದ ವ್ಯವಸ್ಥೆಗೆ ಯೋಜನೆ ರೂಪಿಸಲಾಗುತ್ತಿದೆ.

ಕಟೀಲು: ಕ್ಷೇತ್ರದಿಂದ ಹೊರಗೆ
ಪ್ರದರ್ಶನಕ್ಕೆ ಚಿಂತನೆ ಕಟೀಲು 6 ಮೇಳಗಳ ತಿರುಗಾಟ ಡಿ. 9ರಂದು ಆರಂಭವಾಗಲಿದೆ. ಜಿಲ್ಲಾಡಳಿತದ ಅನುಮತಿ ಯಂತೆ ತಿರುಗಾಟ ನಡೆಯಲಿದೆ. ಕ್ಷೇತ್ರದಲ್ಲಿ ದೇವಿ ಮಹಾತೆ¾ ಪ್ರದರ್ಶನಕ್ಕೆ ಅವಕಾಶ ಇಲ್ಲ. ಈ ನಿಟ್ಟಿನಲ್ಲಿ ಸಮೀಪದ ಸ್ಥಳಗಳಲ್ಲಿ ನಿಯಮಾನುಸಾರ ಆರಂಭಿಕ ಪ್ರದರ್ಶನಗಳಿಗೆ ಮುತುವರ್ಜಿ ವಹಿಸ ಲಾಗುವುದು ಎಂದು ಕಟೀಲು ಹರಿನಾರಾಯಣದಾಸ ಆಸ್ರಣ್ಣ ತಿಳಿಸಿದ್ದಾರೆ.
ಮಂದಾರ್ತಿ 5 ಮೇಳಗಳು ಈಗಾಗಲೇ ಮಳೆಗಾಲದ ಸೇವೆ ಆಟಗಳನ್ನು ಕ್ಷೇತ್ರದಲ್ಲಿ ನಡೆಸಲಾರಂಭಿಸಿವೆ. ಡಿಸೆಂಬರ್‌ನಲ್ಲಿ ತಿರುಗಾಟಕ್ಕೆ ತಾರಾನುಕೂಲ ನೋಡಿ ದಿನ ನಿಗದಿಯಾಗಲಿದ್ದು ಜಿಲ್ಲಾಡಳಿತದ ಮಾರ್ಗಸೂಚಿ, ಅನುಮತಿ ಪ್ರಕಾರ ತಿರುಗಾಟ ಹೊರಡಲಿದೆ. ಅಲ್ಲಿವರೆಗೆ ಕ್ಷೇತ್ರದಲ್ಲೇ ಸೇವೆಯಾಟ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ಶೆಟ್ಟಿ ತಿಳಿಸಿದ್ದಾರೆ. 2048ನೆಯ ಇಸವಿಯವರೆಗೆ ಸೇವೆ ಬುಕಿಂಗ್‌ ಆಗಿದ್ದು 2008ರಲ್ಲಿ ಬುಕಿಂಗ್‌ ಮಾಡಿದವರಿಗೆ ಈ ವರ್ಷ ಅವಕಾಶ ದೊರೆಯುತ್ತಿದೆ.

ಮಾರಣಕಟ್ಟೆ
ಮಾರಣಕಟ್ಟೆ 3 ಮೇಳಗಳ ತಿರುಗಾಟ ನವಂಬರ್‌ ಕೊನೆಗೆ ಆರಂಭವಾಗಲಿದ್ದು ಒಂದು ತಿಂಗಳು ಕ್ಷೇತ್ರದಲ್ಲೇ ಸೇವೆಯಾಟ ನಡೆಯಲಿದೆ. 2035ರವರೆಗೆ ಯಕ್ಷಗಾನ ಸೇವೆ ಬುಕಿಂಗ್‌ ಆಗಿದ್ದು ಅನೇಕರು ಮನೆಯಲ್ಲೇ ಸೇವೆ ಆಗಬೇಕೆಂದು ಬಯಸುತ್ತಾರೆ.

ಡೇರೆ ಮೇಳ
ಪೆರ್ಡೂರು ಹಾಗೂ ಸಾಲಿಗ್ರಾಮ ಎರಡೇ ಡೇರೆ ಮೇಳಗಳಿದ್ದು ತಿರುಗಾಟದ ತೀರ್ಮಾನವಾಗಿಲ್ಲ. ಡಿಸೆಂಬರ್‌ ಕೊನೆ ಅಥವಾ ಜನವರಿಯಲ್ಲಿ ತಿರುಗಾಟ ಆರಂಭಿಸುವ ಸಾಧ್ಯತೆಯಿದೆ. ಸೌಕೂರು ಮೇಳದ ತಿರುಗಾಟ ಡಿ.18ಕ್ಕೆ ಆರಂಭವಾಗಲಿದೆ. 20 ಕಟ್ಟುಕಟ್ಟಳೆ ಆಟಗಳು ಮಾರ್ಗಸೂಚಿ ಪ್ರಕಾರ ನಡೆಯಲಿದೆ.

ಮಾರ್ಗಸೂಚಿಯ ನಿರೀಕ್ಷೆ
ಬಹುತೇಕ ಮೇಳಗಳು ತಿರುಗಾಟ ದಿನವನ್ನು ನಿಶ್ಚಯಸಿದ್ದು ಜಿಲ್ಲಾಡಳಿತದ ಮಾರ್ಗಸೂಚಿಯನ್ನು ನಿರೀಕ್ಷಿಸುತ್ತಿವೆ. ಯಕ್ಷಗಾನ ಕಲಾವಿದರಿಗೆ ತಿರುಗಾಟಕ್ಕೆ ಮುನ್ನ ಹಾಗೂ ಆರಂಭದ ಬಳಿಕ ಪ್ರತಿ 3 ದಿನಕ್ಕೊಮ್ಮೆ ಉಚಿತ ಕೊರೊನಾ ಪರೀಕ್ಷೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈಗಾಗಲೇ ಘೋಷಿಸಿದ್ದಾರೆ. ಒಟ್ಟಿನಲ್ಲಿ ಕೊರೊನಾ ಪರಿಸ್ಥಿತಿ ಯಾವ ರೀತಿ ಇರಲಿದೆ ಎನ್ನುವುದರ ಮೇಲೆ ಮೇಳಗಳ ಮುಂದಿನ ತಿರುಗಾಟದ ಸ್ಪಷ್ಟಚಿತ್ರಣ ದೊರೆಯಲಿದೆ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.