ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ
Team Udayavani, Aug 31, 2022, 2:45 PM IST
ತೆಕ್ಕಟ್ಟೆ : ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗ ವಿಶೇಷ ಪೂಜೆಯೊಂದಿಗೆ ಆ.31ರಂದು ಸಂಭ್ರಮದಿಂದ ಜರುಗಿತು .
ಶ್ರೀ ದೇವಳ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದು ಈ ಸಂದರ್ಭದಲ್ಲಿ ನಂಬಿದ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದರು.
ಹರಿದು ಬಂದ ಭಕ್ತ ಸಮೂಹ: ಕೂಡಾ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿಯಂದು ಸಹಸ್ರಾರು ಭಕ್ತರು ಮುಂಜಾನೆಯಿಂದ ಶ್ರೀ ದೇವರ ದರ್ಶನ ಪಡೆದು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು
ಈ ಬಾರಿ ಸಂಭ್ರಮದ ಶ್ರೀ ವಿನಾಯಕ ಚತುರ್ಥಿಗೆ ರಾಜ್ಯ ಮೂಲೆ ಮೂಲೆಗಳಿಂದಲೂ ಸುಮಾರು 60 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಶ್ರೀಸನ್ನಿಧಿಗೆ ಆಗಮಿಸಿ ದೇವರ ದರ್ಶನ ಪಡೆಯುವ ಸಾಧ್ಯತೆಗಳಿದ್ದು, ಸುಮಾರು 10 ಸಾವಿರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸುವ ಸಾಧ್ಯತೆಗಳಿರುವುದರಿಂದ ಸುವ್ಯವಸ್ಥಿತವಾಗಿ ನಿರ್ವಹಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಕೊಳ್ಳಲಾಗಿದೆ. 500 ತೆಂಗಿನಕಾಯಿ , 5ಕ್ವಿಂಟಾಲ್ ಸಕ್ಕರೆ, ಎಳ್ಳು ಸೇರಿದಂತೆ ಪಂಚ ದ್ರವ್ಯಗಳನ್ನು ಒಳಗೊಂಡಿರುವ ಸುಮಾರು 12ಸಾವಿರಕ್ಕೂ ಅಧಿಕ ಪಂಚಕಜ್ಜಾಯಗಳು ಸಿದ್ಧವಾಗಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಉದಯವಾಣಿಗೆ ತಿಳಿಸಿದ್ದಾರೆ.
ಪ್ರಾತಃ ಕಾಲದಿಂದ ಸಂಜೆಯವರೆಗೆ ಭಕ್ತರಿಗೆ ಪ್ರಸಾದ ವಿತರಣೆ : ಓರ್ವ ಭಕ್ತರಿಂದ ದೇವರ ಪ್ರಾತಃ ಕಾಲದ ಪೂಜೆಯಿಂದ ಸಾಯಂ ಪೂಜೆಯ ವರೆಗೆ ವಿವಿಧ ರೀತಿಯ ಇಷ್ಟ ಪ್ರಸಾದಗಳನ್ನು ಭಕ್ತರಿಗೆ ವಿತರಿಸಲಾಗುತ್ತದೆ.
ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಅರ್ಚಕ ದೇವಿದಾಸ ಉಪಾಧ್ಯಾಯ ಹಾಗೂ ಸಹೋದರರು, ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
-ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ