ಹೆಮ್ಮಾಡಿ: ಸ್ಕೂಟಿಗೆ ಟಿಪ್ಪರ್ ಢಿಕ್ಕಿಯಾಗಿ ಮಹಿಳೆ ದಾರುಣ ಸಾವು; ಪತಿ, ಮಗು ಪಾರು
ವೃದ್ಧಾಶ್ರಮ ಒಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಅಪಘಾತ
Team Udayavani, Mar 13, 2022, 12:24 PM IST
ಕುಂದಾಪುರ: ಹೆದ್ದಾರಿಯಲ್ಲಿ ಹೋಗುತ್ತಿದ್ದ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ರವಿವಾರ ನಡೆದಿದೆ.
ಸ್ಕೂಟಿಯಲ್ಲಿದ್ದ ಅರೆಹೊಳೆ ಎರುಕೋಣೆ ಸಮೀಪಸ ರಾಗಿಹಕ್ಲು ನಿವಾಸಿ ಜ್ಯೋತಿ ಮೃತರು. ಇವರ ಪತಿ ಶರತ್ ಹಾಗೂ ಮಗು ಇಬ್ಬರೂ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಹೆಮ್ಮಾಡಿ ಕಡೆಯಿಂದ ಕುಂದಾಪುರ ಕಡೆಗೆ ಮಣ್ಣು ಸಾಗಾಟದ ಟಿಪ್ಪರ್ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದಿದ್ದು ಅದೇ ದಾರಿಯಲ್ಲಿ ಜತೆಯಾಗಿ ಹೋಗುತ್ತಿದ್ದ ಸ್ಕೂಟಿಗೆ ಢಿಕ್ಕಿಯಾಗಿದೆ. ಪರಿಣಾಮ ಜತೆಗೆ ಬೀಳುತ್ತಿದ್ದ ಮಗುವನ್ನು ಇನ್ನೊಂದು ಮಗ್ಗುಲಿಗೆ ತಪ್ಪಿಸಿದ ಮಹಿಳೆ ಬೊಬ್ಬೆ ಹೊಡೆದರೂ ಕೇಳಿಸದೆ ಆಕೆಯ ಮೇಲೆ ಟಿಪ್ಪರ್ ಹರಿದಿದೆ. ಮಗು ಹಾಗೂ ಆಕೆಯ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ದಂಪತಿ ಕುಂದಾಪುರದಲ್ಲಿ ವೃದ್ಧಾಶ್ರಮ ಒಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ