ಆಕಸ್ಮಿಕ ಬೆಂಕಿ ಅವಘಡ: ಅಂಗಡಿ ಭಸ್ಮ
ಬೆಂಕಿ ಹತ್ತಿ ಉರಿದ ಪರಿಣಾಮ ಕಟ್ಟಡವು ಬಿರುಕು ಬಿಟ್ಟಿದೆ.
Team Udayavani, Jan 11, 2023, 9:34 AM IST
ಕೋಟೇಶ್ವರ: ಕೋಟೇಶ್ವರ ಪೇಟೆಯ ಎಸ್ಬಿಐ ಬ್ಯಾಂಕ್ ಸನಿಹದ ತಿರುವಿನ ಸಂಕೀರ್ಣದ ಮಹಾಲಕ್ಷ್ಮೀ ಕಂಗನ್ ಸ್ಟೋರ್ನಲ್ಲಿ ಜ.10ರಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಅಲ್ಲಿನ ಬೆಳೆಬಾಳುವ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಸ್ಟೋರ್ನ ಮಾಲಕ ಸುಧಾಕರ ಜೋಗಿ ಅವರು ಜ.10ರಂದು ಮಧ್ಯಾಹ್ನ ಕಾರ್ಯನಿಮಿತ್ತ ಅಂಗಡಿ ಮುಚ್ಚಿ ಕೋಟಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಹೊತ್ತಿಕೊಂಡು ಬೆಲೆಬಾಳುವ ಬಳೆ, ಆಟಿಕೆ ಸಾಮಾನುಗಳು, ಮನೆಬಳಕೆಯ ವಸ್ತುಗಳು ಬೆಂಕಿಗೆ ಆಹುತಿಯಾಯಿತು.
ಅಂಗಡಿಯ ಒಂದು ಪಾರ್ಶ್ವದಲ್ಲಿ ಹೊಗೆ ಹೊತ್ತಿಕೊಳ್ಳುತ್ತಿದ್ದಂತೆ ಆಸುಪಾಸಿನವರು ಬೆಂಕಿ ಆರಿಸಲು ಪ್ರಯತ್ನಪಟ್ಟರೂ ಅಷ್ಟರಲ್ಲೇ ಸಂಪೂರ್ಣವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿದರು. ಗ್ರಾಮಸ್ಥರು ಸಹಕರಿಸಿದರು.
ನಗದು ಬೆಂಕಿಗೆ ಆಹುತಿ: ಅಂಗಡಿ ಬಾಡಿಗೆ ಸಹಿತ ವ್ಯವಹಾರಕ್ಕಾಗಿ ಇಟ್ಟಿದ್ದ 2 ಲಕ್ಷ ರೂ. ನಗದು ಹಣ ಬೆಂಕಿಗೆ ಆಹುತಿಯಾಗಿರುವುದಾಗಿ ಸುಧಾಕರ ಜೋಗಿ ಉದಯವಾಣಿಗೆ ತಿಳಿಸಿದ್ದಾರೆ. ಬೆಂಕಿ ಹತ್ತಿ ಉರಿದ ಪರಿಣಾಮ ಕಟ್ಟಡವು ಬಿರುಕು ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್!