ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳು

ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಕ್ತಾಯ

Team Udayavani, May 17, 2023, 3:48 PM IST

ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳು

ಕುಂದಾಪುರ/ಕಾರ್ಕಳ: ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಡ ಳಿತಾವಧಿ ಪೂರ್ಣಗೊಂಡಿದ್ದು, ಅಧಿಕಾರಿಗಳು ಆಡ ಳಿತ ನಡೆಸುವಂತೆ ಅಧಿಸೂಚನೆ ಹೊರಡಿಸ ಲಾಗಿದೆ.
ನಗರಸಭೆಗೆ ಡೆಪ್ಯೂಟಿ ಕಮಿಷನರ್‌ ಅಥವಾ ಸಮಾನ ದರ್ಜೆಯ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಪುರಸಭೆಗಳಿಗೆ ಸಂಬಂಧಿಸಿದಂತೆ ಅಸಿಸ್ಟೆಂಟ್‌ ಕಮಿಷನರ್‌ ದರ್ಜೆಗೆ ಕಡಿಮೆ ಇಲ್ಲದ ಅಧಿಕಾರಿ ಹಾಗೂ ಜಿಲ್ಲಾ ಮುಖ್ಯಸ್ಥ ಕಾರ್ಯಸ್ಥಾನದಲ್ಲಿನ ಮುನ್ಸಿಪಲ್‌ ಕೌನ್ಸಿಲ್‌ ತಹಶೀಲ್ದಾರ್‌ ಅಥವಾ ಸಮಾನ ದರ್ಜೆಯ ಅಧಿಕಾರಿಗಳು ಮತ್ತು ಇತರ ಮುನ್ಸಿಪಲ್‌ ಕೌನ್ಸಿಲ್‌ಗ‌ಳ ಸಂದರ್ಭದಲ್ಲಿ (ಪಟ್ಟಣ ಪಂಚಾಯತ್‌) ತಹಶೀಲ್ದಾರರು ಅಧಿಕಾರದಲ್ಲಿರಲಿದ್ದಾರೆ.

ಅರ್ಧಅವಧಿ ಪೂರ್ಣ
ಒಟ್ಟು 5 ವರ್ಷಗಳ ಸದಸ್ಯರ ಅಧಿಕಾರಾವಧಿ ಯಲ್ಲಿ ತಲಾ ಎರಡೂವರೆ ವರ್ಷಗಳ ಕಾಲ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಧಿಕಾರ ಇರುತ್ತದೆ. ಈ ಹಿಂದಿನ ಪುರಸಭೆ ಆಡಳಿತಾವಧಿ ಮುಗಿದು 2018ರ ಸೆಪ್ಟಂಬರ್‌ನಲ್ಲಿ ಚುನಾವಣೆ ಆಗಿತ್ತು. ಆದರೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಬಂದುದು ಎರಡೂವರೆ ವರ್ಷಗಳ ಬಳಿಕ. ಹಾಗಾಗಿ 2020ರಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿತ್ತು. ಈಗ ಎರಡೂವರೆ ವರ್ಷ ಪೂರ್ಣಗೊಂಡಿದೆ. ಮತ್ತೆ ಎರಡೂವರೆ ವರ್ಷದ ಆಡಳಿತದ ಬಳಿಕವೇ ಚುನಾವಣೆ ನಡೆಯಲಿದೆ.

ಮುಂದಿನ ಆಯ್ಕೆ ಹೇಗೆ?
ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೀಸಲಾತಿಗೆ ಅನುಗುಣವಾಗಿ ಮುಂದಿನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯ ಲಿದೆ. ಹಲವು ಮಂದಿ ಆಕಾಂಕ್ಷಿಗಳಿದ್ದರೆ ಅದಕ್ಕೂ ಮುನ್ನ ಸರ್ವಸದಸ್ಯರ ಮೂಲಕ ಚುನಾವಣೆ ನಡೆದು ಆಯ್ಕೆಯನ್ನು ಅಂತಿಮಗೊಳಿಸಲಾಗುತ್ತದೆ.

ಗೊಂದಲ ಉಂಟಾದರೆ ಮತ್ತೆ ಕಷ್ಟಕರ
ಈ ಹಿಂದಿನಂತೆ ಮೀಸಲಾತಿ ವಿಚಾರದಲ್ಲಿ ಮತ್ತೆ ಗೊಂದಲ ಉಂಟಾದರೆ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಹೊಸ ಸರಕಾರ ಬಂದ ಬಳಿಕವೇ ಆದೇಶ ಬರಬೇಕಿರುವ ಕಾರಣ ಜನರ ನಿರೀಕ್ಷೆ ಸರಕಾರದ ಮೇಲಿದೆ.

ಅಧಿಕಾರಿಗಳ ದರ್ಬಾರ್‌
ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಆಡಳಿತಾವಧಿ ಮುಕ್ತಾಯಗೊಂಡು ಒಂದು ತಿಂಗಳು ಕಳೆಯುತ್ತಿದೆ. ಕೆಲವೆಡೆ ಎಪ್ರಿಲ್‌ ತಿಂಗಳ‌ಲ್ಲಿ ಮುಕ್ತಾಯಗೊಂಡರೆ ಮತ್ತೆ ಕೆಲವೆಡೆ ಮೇ ತಿಂಗಳಲ್ಲಿ ಪೂರ್ಣಗೊಂಡಿದೆ. ಈ ಬಗ್ಗೆ ಸರಕಾರವೂ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಸಭೆಗಳು ಆಡಳಿತಾಧಿಕಾರಿ ನೇತೃತ್ವದಲ್ಲಿಯೇ ನಡೆಯಲಿದೆ.

ಉಡುಪಿ ನಗರಸಭೆ
ಜಿಲ್ಲಾಧಿಕಾರಿ ಆಡಳಿತ
ಉಡುಪಿ ನಗರಸಭೆ ಅಧ್ಯಕ್ಷರಾಗಿ ಇದುವರೆಗೆ ಎರಡೂವರೆ ವರ್ಷ ಸುಮಿತ್ರಾ ನಾಯಕ್‌, ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜು ಕೊಳ ಸೇವೆ ಸಲ್ಲಿಸಿದ್ದರು. ಎ. 29ರಂದು ಇವರ ಅವಧಿ ಮುಗಿದಿದ್ದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆವರೆಗೆ ಇವರು ಆಡಳಿತಾಧಿಕಾರಿಯಾಗಿ ಮುಂದು ವರಿಯುವರು. ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕವೇ ಮೀಸಲಾತಿ ಆದೇಶ ಹೊರಬೀಳಲಿದೆ. ಅನಂತರ ಅಧ್ಯಕ್ಷ- ಉಪಾಧ್ಯಕ್ಷರ ನೇಮಕ ನಡೆಯಲಿದೆ ಎಂದು ಪೌರಾಯುಕ್ತ ಆರ್‌.ಪಿ.ನಾಯ್ಕ ತಿಳಿಸಿದ್ದಾರೆ.

ಕುಂದಾಪುರ ಪುರಸಭೆ: ಆಡಳಿತಾಧಿಕಾರಿಯಾಗಿ ಸಹಾಯಕ ಕಮಿಷನರ್‌
ಕುಂದಾಪುರ: ಕುಂದಾಪುರ ಪುರಸಭೆಯಲ್ಲಿ ಅಧ್ಯಕ್ಷರಾಗಿ ವೀಣಾ ಭಾಸ್ಕರ ಮೆಂಡನ್‌, ಉಪಾಧ್ಯಕ್ಷರಾಗಿ ಸಂದೀಪ್‌ ಖಾರ್ವಿ ಕಾರ್ಯ ನಿರ್ವಹಿಸುತ್ತಿದ್ದರು. ಸಹಾಯಕ ಕಮಿಷನರ್‌ ಅವರು ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಬೇಕಿದ್ದು ಈ ಬಗ್ಗೆ ಅಧಿಕೃತ ಆದೇಶವಾಗಬೇಕಿದೆ.

ಕಾರ್ಕಳ ಪುರಸಭೆ: ಇನ್ನೂ ನೇಮಕವಾಗದ ಆಡಳಿತಾಧಿಕಾರಿ
ಕಾರ್ಕಳ: ಕಾರ್ಕಳ ಪುರಸಭೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆ ಸುಮಾಕೇಶವ್‌ ಅಧ್ಯಕ್ಷೆಯಾಗಿ, ಪಲ್ಲವಿ ಪ್ರವೀಣ್‌ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.

ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಗಿದಿದ್ದು ಚುನಾವಣೆ ಇತ್ಯಾದಿ ಕಾರಣಗಳಿಂದ ಆಡಳಿತಾಧಿಕಾರಿ ನೇಮಕ ವಿಳಂಬವಾಗಿದೆ.

ಸಾಲಿಗ್ರಾಮ ಪ.ಪಂ.ನಲ್ಲಿ ಆಡಳಿತಾಧಿಕಾರಿ ಆಡಳಿತ
ಕೋಟ: ಸಾಲಿಗ್ರಾಮ ಪ.ಪಂ. ಅಧ್ಯಕ್ಷರಾಗಿ ಸುಲತಾ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಅನಸೂಯಾ ಹೇಳೆì ಅವರು ಸೇವೆ ಸಲ್ಲಿಸಿ ದ್ದರು. ಮೇ 2ರಂದು ಇವರ ಆಡಳಿತಾವಧಿ ಮುಕ್ತಾಯಗೊಂಡಿದೆ. ರಾಜ್ಯ ಸರಕಾರದಿಂದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಯಾಗಿ ಆಯ್ಕೆಯಾಗುವವರೆಗೆ ಆಡಳಿತಾಧಿಕಾರಿಯವರು ಆಡಳಿತ ನಡೆಸಲಿದ್ದಾರೆ.

ಕಾಪು ಪುರಸಭೆಗೆ ಚುನಾವಣೆ ನಡೆದು ಸದಸ್ಯರ ಆಯ್ಕೆಯಾದರೂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಲಿಲ್ಲ. ಹೀಗಾಗಿ ಇಲ್ಲಿ ಕುಂದಾಪುರದ ಸಹಾಯಕ ಕಮಿಷನರ್‌ ಅವರೇ ಆಡಳಿತಾಧಿಕಾರಿಯಾಗಿದ್ದಾರೆ.

ಬೈಂದೂರು ಪಟ್ಟಣ ಪಂಚಾಯತ್‌ ರಚನೆಯಾಗಿದೆಯೇ ವಿನಾ ಚುನಾವಣೆಯೇ ನಡೆದಿಲ್ಲ. ಹೀಗಾಗಿ ಬೈಂದೂರು ಪ.ಪಂ. ಆಡಳಿತಾಧಿಕಾರಿಯಾಗಿ ಬೈಂದೂರು ತಹಶೀಲ್ದಾರ್‌ ಶ್ರೀಕಾಂತ ಹೆಗ್ಡೆ ಅವರು ಆಡಳಿತಾಧಿಕಾರಿಯಾಗಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.