ಅಜೆಕಾರು: ತೋಡು, ಮೋರಿ, ಕುಡಿಯುವ ನೀರಿನ ಪೈಪ್‌ಲೈನ್‌ಗೆ ಹಾನಿ


Team Udayavani, Mar 7, 2024, 12:58 PM IST

ಅಜೆಕಾರು: ತೋಡು, ಮೋರಿ, ಕುಡಿಯುವ ನೀರಿನ ಪೈಪ್‌ಲೈನ್‌ಗೆ ಹಾನಿ

ಅಜೆಕಾರು: ವಾರಾಹಿ ನೀರಾವರಿ ಯೋಜನೆಯ ಪೈಪ್‌ಲೈನ್‌ ಕಾಮಗಾರಿಯು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದು ಕೆಲವು ಪ್ರದೇಶಗಳಲ್ಲಿ ಸ್ಥಳಿಯರಿಗೆ ಸಮಸ್ಯೆ ತಂದೊಡ್ಡಿದೆ.

ಮರ್ಣೆ ಗ್ರಾ.ಪಂ. ವ್ಯಾಪ್ತಿಯ ಜ್ಯೋತಿ ನಗರ, ಮಂಗಳ ನಗರ ಪ್ರದೇಶಗಳಲ್ಲಿ ವಾರಾಹಿ ನೀರಾವರಿ ಯೋಜನೆಯ ಪೈಪ್‌ಲೈನ್‌ ಕಾಮಗಾರಿ ನಡೆಯು ತ್ತಿದ್ದು ರಸ್ತೆಗೆ ಹೊಂದಿಕೊಂಡೇ ಪೈಪ್‌ಲೈನ್‌ ಕಂದಕಗಳನ್ನು ಮಾಡಲಾಗುತ್ತಿದೆ. ಈ ಕಂದಕಗಳಿಗೆ ಪೈಪ್‌ಲೈನ್‌ ಅಳವಡಿಸಿ ಮಣ್ಣು ಮುಚ್ಚಲಾಗುತ್ತದೆಯಾದರೂ ರಸ್ತೆಯ ಅಂಚಿನಲ್ಲಿಯೇ ಕಂದಕಗಳನ್ನು
ಮಾಡಿರುವುದರಿಂದ ಮಳೆಗಾಲದಲ್ಲಿ ಮಣ್ಣು ಕುಸಿತಗೊಂಡು ವಾಹನಗಳ ಅಪಘಾತಕ್ಕೆ ಆಹ್ವಾನ ನೀಡಿದಂತಾಗುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಲ್ಲದೆ ಪೈಪ್‌ಲೈನ್‌ ಕಾಮಗಾರಿ ನಡೆಸುವ ವೇಳೆ ರಸ್ತೆಯಂಚಿನ ನೀರು ಹರಿಯುವ ತೋಡುಗಳನ್ನು ಸಂಪೂರ್ಣ ಮುಚ್ಚಲಾಗಿದೆ. ಇದರಿಂದಾಗಿ ಮಳೆ ಗಾಲದಲ್ಲಿ ನೀರು ರಸ್ತೆಯಲ್ಲಿಯೇ ಹರಿಯುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಮೋರಿಗೆ ಹಾನಿ
ಪೈಪ್‌ಲೈನ್‌ ಕಾಮಗಾರಿಯಿಂದಾಗಿ ಮಂಗಳಾ ನಗರ ಪ್ರದೇಶದ 2 ಮೋರಿಗಳು ಒಂದು ಪಾರ್ಶ್ವದಲ್ಲಿ ಸಂಪೂರ್ಣ ಹಾನಿಗೀಡಾಗಿದೆ. ಸುಮಾರು ಎರಡು ವರ್ಷಗಳ ಹಿಂದೆಯಷ್ಟೇ ತಲಾ 50 ಸಾ.ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಎರಡೂ ಮೋರಿಗಳು
ಹಾನಿಯಾಗಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು ಈ ಬಗ್ಗೆ ಸ್ಥಳೀಯಾಡಳಿತ ಕಾಮಗಾರಿ ಗುತ್ತಿಗೆದಾರರಲ್ಲಿ ಮೋರಿ ದುರಸ್ತಿಪಡಿಸುವಂತೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕುಡಿಯುವ ನೀರಿನ ಪೈಪ್‌ಲೈನ್‌ಗೂ ಹಾನಿ
ವಾರಾಹಿ ಪೈಪ್‌ಲೈನ್‌ ಕಾಮಗಾರಿಯಿಂದಾಗಿ ಬೇಸಗೆಯ ಸಮಯದಲ್ಲಿ ನೀರಿನ ಪೈಪ್‌ಲೈನ್‌ಗೂ ಹಾನಿಯಾಗಿದ್ದು ಹಲವಾರು ಪ್ರದೇಶದ ಜನರಿಗೆ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಕಾಡುಹೊಳೆಯಿಂದ ಅಂಡಾರು ಮೂಲಕ ಪೈಪ್‌ ಲೈನ್‌ ಅಳವಡಿಸಲಾಗಿದ್ದು ಈ ಸಂದರ್ಭ ಅಂಡಾರು ಭಾಗದ ಹಲವು ಪ್ರದೇಶಗಳಿಗೆ ಕಳೆದ 10 ದಿನಗಳಿಂದ ಕುಡಿಯುವ ನೀರಿನ ಪೂರೈಕೆಯೇ ಸ್ಥಗಿತಗೊಂಡಿದೆ.

ಬಾವಿಯೇ ಇಲ್ಲದ ಹಲವು ಮನೆಗಳಿಗೆ ವರಂಗ ಪಂಚಾಯತ್‌ ಆಡಳಿತ 2 ದಿನಕ್ಕೊಮ್ಮೆ ಟ್ಯಾಂಕರ್‌ ನೀರು ಒದಗಿಸುತ್ತಿದೆ.
ಬೇಸಗೆಯ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಂಕಷ್ಟ ಎಲ್ಲೆಡೆ ಇದ್ದು ಈ ಸಮಯದಲ್ಲಿಯೇ ವಾರಾಹಿ ಯೋಜನೆಯ ಕಾಮಗಾರಿ ನಡೆಸಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಹಾನಿ ಮಾಡಿರುವ ಬಗ್ಗೆ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆಯಂಚಿನಲ್ಲಿಯೇ ಕೆಲವೆಡೆ 10 ಅಡಿಗೂ ಹೆಚ್ಚಿನ ಆಳ ಮಾಡಿದ್ದರೆ, ಕೆಲವೆಡೆ ಸುಮಾರು 5 ಅಡಿ ಆಳದ ಕಂದಕಗಳನ್ನು ಮಾಡಲಾಗಿದ್ದು ಇದರಿಂದ ತೆಗೆದ ಮಣ್ಣು ರಸ್ತೆಯ ಮೇಲೆ ಹರಡಿರುವುದರಿಂದ ಅಜೆಕಾರು ಮಿಯ್ನಾರು ರಾಜ್ಯ ಹೆದ್ದಾರಿ ಹಾಗೂ ಮಂಗಳಾ ನಗರ ರಸ್ತೆ ಮತ್ತು ಕಾಡುಹೊಳೆ ಅಂಡಾರು ರಸ್ತೆ ಸಂಪೂರ್ಣ ಧೂಳಿನಿಂದ ಆವೃತವಾಗಿದೆ.

ಕುಡಿಯುವ ನೀರು, ಬೃಹತ್‌ ನೀರಾವರಿ ಯೋಜನೆಗಳ ಪೈಪ್‌ ಲೈನ್‌ ಕಾಮಗಾರಿ ರಸ್ತೆ ಅಂಚಿನಲ್ಲಿ ಮಾಡುವ ಬದಲಿಗೆ ರಸ್ತೆಯಿಂದ
ಕೆಲವು ಅಡಿಗಳಷ್ಟಾದರೂ ದೂರದಲ್ಲಿ ನಿರ್ಮಿಸಿದಲ್ಲಿ ಸಂಚಾರಕ್ಕೆ ಯಾವುದೇ ಅಪಾಯವಾಗದು. ಈ ನಿಟ್ಟಿನಲ್ಲಿ ಸ್ಥಳೀಯಾಡಳಿತ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಕಾಮಗಾರಿಯ ಗುತ್ತಿಗೆದಾರರಿಗೆ ಸೂಚನೆ ನೀಡಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಶೀಘ್ರ ಕ್ರಮ ಕೈಗೊಳ್ಳಿ
ಮಳೆಗಾಲದಲ್ಲಿ ಮಳೆ ನೀರು ಹರಿಯಲು ನಿರ್ಮಿಸಲಾದ ಎರಡೂ ಮೋರಿಗಳನ್ನು ವಾರಾಹಿ ಪೈಪ್‌ಲೈನ್‌ ಕಾಮಗಾರಿ ವೇಳೆ
ಹಾನಿಮಾಡಲಾಗಿದ್ದು ಈ ಬಗ್ಗೆ ಸ್ಥಳೀಯಾಡಳಿತ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು.
ರತ್ನಾಕರ ಡಿ. ಮಾಬಿಯಾನ್‌
ಸ್ಥಳೀಯರು, ಮಂಗಳಾ ನಗರ

ಗುತ್ತಿಗೆದಾರರಿಗೆ ಸೂಚನೆ
ವಾರಾಹಿ ಯೋಜನೆಯ ಪೈಪ್‌ಲೈನ್‌ ಕಾಮಗಾರಿ ವೇಳೆ ಮಂಗಳಾ ನಗರ ಪ್ರದೇಶದಲ್ಲಿ ಹಾನಿಯಾದ ಮೋರಿಗಳನ್ನು ಪರಿಶೀಲಿಸಿ
ದುರಸ್ತಿ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗುವುದು.
ತಿಲಕ್‌ರಾಜ್‌, ಪಿಡಿಒ, ಮರ್ಣೆ ಗ್ರಾ.ಪಂ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Kolluru Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Kollur Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.