ಅಮಾಸೆಬೈಲು -ಹೆಬ್ರಿ ಸಂಪರ್ಕಿಸುವ ಕಿರು ಸೇತುವೆ ಕುಸಿತ


Team Udayavani, Jun 24, 2021, 4:50 AM IST

ಅಮಾಸೆಬೈಲು -ಹೆಬ್ರಿ ಸಂಪರ್ಕಿಸುವ ಕಿರು ಸೇತುವೆ ಕುಸಿತ

ಕುಂದಾಪುರ: ಅಮಾಸೆ ಬೈಲಿನಿಂದ ಹೆಬ್ರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಸಾರದತೋಡು ಎಂಬಲ್ಲಿ ನಿರ್ಮಿಸಲಾದ ಕಿರು ಸೇತುವೆ (ಸ್ಲ್ವಾಬ್‌ ಮೋರಿ)ಯ ಒಂದು ಬದಿಯ ತಳಭಾಗದಲ್ಲಿ ಕುಸಿದಿದೆ. ಇದರಿಂದ ಸದ್ಯಕ್ಕೇನು ಅಪಾಯ ವಿಲ್ಲದಿದ್ದರೂ, ಮಳೆಗಾಲವಾದ್ದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕುಸಿಯುವ ಭೀತಿ ಇದೆ.

ಅಮಾಸೆಬೈಲಿನಿಂದ ಶೇಡಿಮನೆ, ಮಾಯ ಬಜಾರ್‌ ಮೂಲಕವಾಗಿ ಹೆಬ್ರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ನಿತ್ಯ 200ರಿಂದ 300 ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ಈಗ ಬಸ್‌ ಸಂಚಾರ ಇಲ್ಲದಿದ್ದರೂ, ಹಿಂದೆ ಈ ಮಾರ್ಗದಲ್ಲಿ ಶೇಡಿಮನೆ, ಜಡ್ಡಿನಗದ್ದೆ, ಕೆಲಾ, ನಡಂಬೂರು ಭಾಗಕ್ಕೆ ಅನೇಕ ಬಸ್‌ಗಳು ಈ ಮಾರ್ಗವಾಗಿ ಸಂಚರಿಸುತ್ತಿದ್ದವು.

ಪ್ರಮುಖ ರಸ್ತೆ:

ಅಮಾಸೆಬೈಲುವಿನಿಂದ ಹೆಬ್ರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಈ ಮಾರ್ಗವಾಗಿ 24 ಕಿ.ಮೀ. ಅಂತರವಿದ್ದರೆ, ಹಾಲಾಡಿ ಮೂಲಕವಾಗಿ ಅಮಾಸೆಬೈಲಿನಿಂದ ಹೆಬ್ರಿಗೆ 35-40 ಕಿ.ಮೀ. ದೂರವಿದೆ. ಇದಲ್ಲದೆ ಜಡ್ಡಿನಗದ್ದೆ, ಕೆಳಸುಂಕ, ಕೆಲಾ, ಶೇಡಿಮನೆ, ಮಾಯಾಬಜಾರ್‌, ನಡಂಬೂರು ಮತ್ತಿತರ ಊರುಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದೆ.

45  ವರ್ಷ  ಹಳೆಯ ಸೇತುವೆ :

ಇದು ಸುಮಾರು 45 ವರ್ಷಗಳ ಹಳೆಯ ಸೇತುವೆಯಾಗಿದ್ದು, ಆಗ ಕಲ್ಲುಗಳನ್ನೇ ಪಿಲ್ಲರ್‌ಗಳಾಗಿ ನಿರ್ಮಿಸಿ, ಅದರ ಆಧಾರದಲ್ಲಿ ಈ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ. ಸೇತುವೆಯು 3.6 ಮೀ. ಅಗಲವಿದ್ದು, ಸದ್ಯ 1 ಮೀ.ವರೆಗೆ ಟೇಪ್‌ ಕಟ್ಟಿ, ಆ ಭಾಗದಲ್ಲಿ ವಾಹನ ಸಂಚರಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಸೇತುವೆಯ ತಳಭಾಗದಲ್ಲಿ ಕಟ್ಟಿರುವ ಕಲ್ಲಿನ ಪಿಲ್ಲರ್‌ ಸುಮಾರು 2 ಮೀ.ವರೆಗೆ ಕುಸಿದಿದ್ದು, ಸದ್ಯಕ್ಕೇನು ಅಪಾಯವಿಲ್ಲ. ಕಲ್ಲಿನಿಂದಲೇ ನಿರ್ಮಿಸಿರುವ ಕಿರು ಸೇತುವೆಯಾಗಿದ್ದರಿಂದ ಭದ್ರವಾಗಿದ್ದು, ವಾಹನ ಸಂಚರಿಸಲು ತೊಂದರೆಯಿಲ್ಲ ಎನ್ನುವುದಾಗಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಸ್ಪಷ್ಟಪಡಿಸಿದ್ದಾರೆ.

ಅಮಾಸೆಬೈಲಿನಿಂದ ಅನೇಕ ಊರುಗಳಿಗೆ, ಪ್ರಮುಖವಾಗಿ ಹೆಬ್ರಿಗೆ ಸಂಚರಿಸಬೇಕಾದರೆ ಇದೇ ಪ್ರಮುಖ ರಸ್ತೆಯಾಗಿದೆ. ಈ ಮಾರ್ಗದಲ್ಲಿ ಸಂಪರ್ಕ ಕಡಿತಗೊಂಡರೆ ನಿತ್ಯ ಸಂಚರಿಸುವ ನೂರಾರು ಮಂದಿಗೆ ತೊಂದರೆಯಾಗಲಿದೆ. ಇದು ಹಳೆಯ ಸೇತುವೆಯಾಗಿದ್ದರಿಂದ, ಶಿಥಿಲಾವಸ್ಥೆಯಲ್ಲಿದ್ದು, ಆದಷ್ಟು ಬೇಗ ಹೊಸ ಸೇತುವೆ ಆಗಬೇಕಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಲಿ. ಕೃಷ್ಣ ಪೂಜಾರಿ, ಗ್ರಾ.ಪಂ. ಸದಸ್ಯರು, ಅಮಾಸೆಬೈಲು

ಈ  ಕುಸಿದಿರುವ ಸ್ಲ್ಯಾಬ್‌ ಮೋರಿಯನ್ನು ಈಗಾಗಲೇ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಮೋರಿಯ ಒಂದು ಭಾಗದ ತಳಭಾಗದಲ್ಲಿ ಸ್ವಲ್ಪ ಕುಸಿದಿದೆ. ಒಂದು ಬದಿಯಲ್ಲಿ ಕುಸಿದಿರುವುದರಿಂದ ಅಪಾಯವೇನಿಲ್ಲ. ವಾಹನ ಸಂಚರಿಸುವ ಭಾಗ ಭದ್ರ ವಾಗಿದೆ. ಮುನ್ನೆಚ್ಚರಿಕೆಯಾಗಿ ಕುಸಿದಿರುವ ಪ್ರದೇಶದ ಮೇಲ್ಭಾಗದಲ್ಲಿ ಟೇಪ್‌ ಕಟ್ಟಲಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ಕೂಡಲೇ ದುರಸ್ತಿ ಮಾಡಲಾಗುವುದು.  – ಹರ್ಷವರ್ಧನ್‌, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.