“ಅಂಫಾನ್’ಭೀತಿ: ಮತ್ತೆ ಮೀನುಗಾರಿಕೆಗೆ ಬ್ರೇಕ್
Team Udayavani, May 19, 2020, 5:00 AM IST
ಗಂಗೊಳ್ಳಿ: ಲಾಕ್ಡೌನ್ನಿಂದಾಗಿ ಕೆಲ ದಿನಗಳ ಹಿಂದಷ್ಟೇ ಆರಂಭಗೊಂಡಿದ್ದ ಯಾಂತ್ರೀಕೃತ ಮೀನುಗಾರಿಕೆಗೆ ಈಗ “ಅಂಫಾನ್’ ಚಂಡಮಾರುತದ ಭೀತಿ ಎದುರಾಗಿದ್ದು, ಸೋಮವಾರ ಯಾವುದೇ ಬೋಟ್ಗಳು, ನಾಡದೋಣಿಗಳು ಕಡಲಿಗಿಳಿದಿಲ್ಲ.
ಸಮುದ್ರದಲ್ಲಿ ಗಾಳಿಯ ಅಬ್ಬರ ಜೋರಾಗಿದ್ದು, ಗಂಟೆಗೆ 40 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಗಾಳಿ ಬೀಸುತ್ತಿದೆ. ಇದಲ್ಲದೆ ಅಲೆಗಳ ಅಬ್ಬರವು ಹೆಚ್ಚಾಗಿದ್ದು, ಮೀನುಗಾರರು ಅಪಾಯವನ್ನರಿತು ಮಂಗಳವಾರವೂ ಕಡಲಿಗಿಳಿಯದಿರಲು ನಿರ್ಧರಿಸಿದ್ದಾರೆ. ಗಂಗೊಳ್ಳಿ, ಮರವಂತೆ, ಕೋಡಿ, ಕೊಡೇರಿ, ಮಡಿಕಲ್, ಶಿರೂರು ಸೇರಿದಂತೆ ಎಲ್ಲ ಕಡೆಗಳಲ್ಲಿ ಸೋಮವಾರ ಮೀನುಗಾರಿಕೆ ನಡೆದಿಲ್ಲ.
ಕೋವಿಡ್ದಿಂದಾಗಿ ಲಾಕ್ಡೌನ್ ಘೋಷಣೆ ಯಾದಂದಿನಿಂದ ಎಲ್ಲ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಆ ಬಳಿಕ ಎ. 12ರಿಂದ ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಮೇ 8 ರಿಂದ ಯಾಂತ್ರೀಕೃತ ಮೀನುಗಾರಿಕೆಗೂ ಕೂಡ ಜಿಲ್ಲಾಡಳಿತ ಅನುಮತಿ ನೀಡಿತ್ತು.
ನಿರೀಕ್ಷಿತ ಮೀನಿಲ್ಲ
ಮೀನುಗಾರಿಕೆ ಆರಂಭವಾದರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಮೀನು ಸಿಗುತ್ತಿಲ್ಲ. ಮೀನುಗಾರಿಕೆಗೆ ತೆರಳಿ ನಷ್ಟ ಅನುಭವಿಸುವುದು ಬೇಡವೆಂದು ಹೆಚ್ಚಿನ ಬೋಟ್ಗಳು ಕಡಲಿಗಿಳಿಯದೇ ದಡದಲ್ಲಿಯೇ ಲಂಗರು ಹಾಕಿವೆ. ಸೀಸನ್ನಲ್ಲೇ 45 ದಿನಗಳಿಗೂ ಹೆಚ್ಚು ಕಾಲದಿಂದ ಮೀನುಗಾರಿಕೆಯಿಲ್ಲದೆ ಸಂಕಷ್ಟದಲ್ಲಿರುವ ಮೀನುಗಾರರಿಗೆ ಈಗ ಅಂಫಾನ್ ಚಂಡಮಾರುತದಿಂದ ಹೊಡೆತ ಬಿದ್ದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…