Anganwadi ಇರುವ ಸಿಬಂದಿಗೆ ಕಾರ್ಯದೊತ್ತಡ, ಯೋಜನೆಗಳ ಅನುಷ್ಠಾನಕ್ಕೆ ತೊಡಕು
ಅಂಗನವಾಡಿ ಸಿಬಂದಿ ಹುದ್ದೆ ಖಾಲಿ
Team Udayavani, Oct 20, 2023, 11:23 PM IST
ಕೋಟ: ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಾಗಿರುವ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಯಾಗದೆ ಹಲವು ತಿಂಗಳು ಕಳೆದಿವೆ. ನೇಮಕಾತಿಗೆ ಆನ್ಲೈನ್ ವಿಧಾನವನ್ನು ಪರಿಚಯಿಸುತ್ತಿರುವುದರಿಂದ ಪ್ರಕ್ರಿಯೆ ತಡವಾಗಲು ಕಾರಣ ಎನ್ನಲಾಗುತ್ತಿದೆ. ಸರಕಾರದ ಯೋಜನೆಗಳ ಅನುಷ್ಠಾನ, ಅಂಗನವಾಡಿ ನಿರ್ವಹಣೆ ಮುಂತಾದ ಕಾರ್ಯಗಳಿಗೆ ಇದರಿಂದ ಕಷ್ಟವಾಗುತ್ತಿದೆ.
ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳ ಅನುಷ್ಠಾನ, ಗೃಹಲಕ್ಷ್ಮಿ ಯೋಜನೆಯಲ್ಲಿನ ಸಮಸ್ಯೆಗಳನ್ನು ಪತ್ತೆಹಚ್ಚಿ ಪರಿಹರಿಸುವುದು ಹಾಗೂ ಅಂಗನವಾಡಿಯ ನಿರ್ವಹಣೆ, ಮಕ್ಕಳಿಗೆ ಅಕ್ಷರಾಭ್ಯಾಸ ಹೀಗೆ ಸಾಕಷ್ಟು ಕರ್ತವ್ಯಗಳಿ ರುವುದರಿಂದ ಅಂಗ® ವಾಡಿಯಲ್ಲಿ ಇಬ್ಬರು ಸಿಬಂದಿ ಇದ್ದರೂ ಮುಗಿಯದಷ್ಟು ಕೆಲಸವಿದೆ. ಸಿಬಂದಿ ಕೊರತೆ ಇರು ವಲ್ಲಿ ಮತ್ತಷ್ಟು ಸಮಸ್ಯೆಯಾಗುತ್ತಿದೆ.
ದಾಖಲಾತಿ ಮೇಲೂ ಪರಿಣಾಮ
ಸಿಬಂದಿ ಕೊರತೆ ಯಿಂದ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ತೊಡಕಾಗುತ್ತದೆ ಎನ್ನುವ ಕಾರಣಕ್ಕೆ ಸರಕಾರಿ ವ್ಯವಸ್ಥೆಯ ಬಗ್ಗೆ ಒಲವಿರುವ ಹೆತ್ತವರೂ ಮಕ್ಕಳನ್ನು ಖಾಸಗಿ ಸಂಸ್ಥೆಗೆ ದಾಖಲಿಸುವ ಸಾಧ್ಯತೆ ಇರುತ್ತದೆ. ಇದರಿಂದ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎನ್ನುವ ಆತಂಕವನ್ನು ಗ್ರಾಮಸಭೆ, ಕೆಡಿಪಿ ಸಭೆಗಳಲ್ಲಿ ಜನಪ್ರತಿನಿಧಿಗಳು, ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಅಂಗನವಾಡಿ ಸಿಬಂದಿ ಹುದ್ದೆ ಖಾಲಿ ಇರುವುದು ಗಮನದಲ್ಲಿದೆ. ಆನ್ಲೈನ್ ಮೂಲಕ ನೇಮಕಾತಿ ನಡೆಯುವುದರಿಂದ ಸ್ವಲ್ಪ ವಿಳಂಬವಾಗಿದೆ. ಸರಕಾರ ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ.
– ಶ್ಯಾಮಲಾ ಸಿ.ಕೆ. / ಕುಮಾರ್,
ಉಪನಿರ್ದೇಶಕರು, ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ಉಡುಪಿ/ದ.ಕ.
-ರಾಜೇಶ್ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ