ಕೊಲೆಯತ್ನ ಆರೋಪಿಗಳಿಗೆ ಜಾಮೀನು: ಬಿಡುಗಡೆ
Team Udayavani, Jun 2, 2020, 8:11 AM IST
ಸಾಂದರ್ಭಿಕ ಚಿತ್ರ
ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಕೊಲೆಯತ್ನ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿ ಬಿಡುಗಡೆ ಹೊಂದಿದ್ದಾರೆ. ಈ ವರ್ಷದ ಮೇ 21ರಂದು ಆಸಿಫ್ ಅವರು ತನ್ನ ಸಂಬಂಧಿಕರೊಂದಿಗೆ ಬಡಾಕೆರೆಯಿಂದ ಉಪ್ಪಿನ ಕುದ್ರಿಗೆ ಹೋಗುತ್ತಿರುವಾಗ ತ್ರಾಸಿ ಗ್ರಾಮದ ಅಣ್ಣಪ್ಪಯ್ಯ ಸಭಾಭವನದ ಬಳಿಯ ರಾ.ಹೆ. 66ರಲ್ಲಿ ಮಾರಕ ಆಯುಧ ಹೊಂದಿದ್ದ ಆರೋಪಿಗಳು ಇವರ ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದರು.
ತತ್ಕ್ಷಣ ಇವರು ಕಾರು ನಿಲ್ಲಿಸಿದಾಗ ಆರೋಪಿಗಳಾದ ಮಹಮ್ಮದ್ ರಿಯಾಜ್, ಅಶ್ಫಕ್ ಅಹ್ಮದ್, ಮೊಹಮ್ಮದ್ ಅಶ್ರಫ್, ಅಹ್ಮದ್ ಅವರು ತಲವಾರಿನಿಂದ ಬೀಸಿದ್ದಾರೆ ಎನ್ನಲಾಗಿದೆ. ಅವರಿಂದ ತಪ್ಪಿಸಿಕೊಂಡ ಮೊಹಮ್ಮದ್ ಆಸಿಫ್ ಅವರು ಗಂಗೊಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳು, ಸರಕಾರದ ಪರ ವಾದ ಆಲಿಸಿದ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನರಹರಿ ಮರಾಠೆ ಅವರು ಆರೋಪಿಗಳಿಗೆ ಜಾಮೀನು ನೀಡುವಂತೆ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ಉಡುಪಿಯ ಹಿರಿಯ ವಕೀಲರಾದ ಮಟ್ಟಾರು ರತ್ನಾಕರ ಹೆಗ್ಡೆ, ನಿತೇಶ್ ಶೆಟ್ಟಿ ಮಟ್ಟಾರು ಮತ್ತು ರಶ್ಮಿತಾ ಆರ್.ಕಲ್ಮಾಡಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ