ಬೆಂಗಳೂರು – ಕಾರವಾರ ರೈಲಿನ ವೇಳೆೆ ಬದಲಿಗೆ ಆಗ್ರಹ


Team Udayavani, Oct 23, 2017, 7:53 AM IST

23-5.jpg

ಕುಂದಾಪುರ: ಬೆಂಗಳೂರು-ಕಾರವಾರ ರೈಲು ಫೆಬ್ರವರಿಯ ಅನಂತರ ಕುಣಿಗಲ್‌ ಮಾರ್ಗವಾಗಿ ಸಂಚರಿಸುವ ಬಗ್ಗೆ ನೈಋತ್ಯ ರೈಲ್ವೇ ಮಂಡಳಿ ಒಪ್ಪಿಗೆ ನೀಡಿದ್ದು, ವಾರದಲ್ಲಿ ನಾಲ್ಕು ದಿನ ಬೆಂಗಳೂರು- ಕುಣಿಗಲ್‌- ಶ್ರವಣಬೆಳಗೊಳ- ಹಾಸನ ಮಾರ್ಗವಾಗಿ ಹಾಗೂ ಉಳಿದ ಮೂರು ದಿನ ಮೈಸೂರು ಹಾಸನ ಮಾರ್ಗವಾಗಿ ಮಂಗಳೂರು ತಲುಪಲಿದೆ. ಆದರೆ ಕುಣಿಗಲ್‌ ಮೂಲಕ ಸಂಚರಿಸುವ ವೇಳಾಪಟ್ಟಿಯಲ್ಲಿ ಬದಲಿಸುವಂತೆ ರೈಲು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಮಂಗಳೂರಿನ ರೈಲು ನಿಲ್ದಾಣದಲ್ಲಿ ಬೆಳಗ್ಗಿನ ಹೊತ್ತಿನಲ್ಲಿ ಬಹಳಷ್ಟು ರೈಲುಗಳು ಬಂದು ಹೋಗುವುದರಿಂದ ಪ್ಲಾಟ್‌ ಫಾರ್ಮ್ನಲ್ಲಿ ಕೊರತೆಯ ಕಾರಣದಿಂದಾಗಿ ವಾರದ ನಾಲ್ಕು ದಿನ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಬದಲಾಗಿ ರೈಲು 10.30ಕ್ಕೆ ಹೊರಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಅನ್ಯಾಯವಾಗಲಿದೆ. ಪ್ರಸ್ತುತ ರೈಲು ಕುಂದಾಪುರಕ್ಕೆ ಬೆಳಗ್ಗೆ 10.56ಕ್ಕೆ ತಲುಪುತ್ತಿದ್ದು, ಬೆಂಗಳೂರಿನಿಂದ ಹೊರಡುವ ಸಮಯವನ್ನು 7.30ಕ್ಕೆ ನಿಗದಿಪಡಿಸಬೇಕು ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಬೇಡಿಕೆ ಇಟ್ಟಿದೆ.

ಕುಣಿಗಲ್‌ ಮೂಲಕ ರೈಲು ಸಂಚರಿಸುವುದರಿಂದ  ಸುಮಾರು 90 ಕಿ.ಮೀ. ಉಳಿತಾಯವಾಗಲಿದ್ದು, ರಾತ್ರಿ 8.30ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಂಗಳೂರಿಗೆ ಬೆಳಗ್ಗೆ ಸುಮಾರು 6 ಗಂಟೆಗೆ ತಲುಪುವುದರಿಂದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಆದರೆ ಈಗಾಗಲೇ ನಿರ್ಧರಿಸಿದಂತೆ ರಾತ್ರಿ 10.30ಕ್ಕೆ ಬೆಂಗಳೂರಿನಿಂದ ರೈಲು ಹೊರಟರೆ ಉಡುಪಿ, ಕುಂದಾಪುರಕ್ಕೆ ತಲುಪುವಾಗ ಸಾಕಷ್ಟು ವಿಳಂಬವಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರಿಗೆ ಊಟಕ್ಕಿಲ್ಲದ ಉಪ್ಪಿನ ಕಾಯಿಯಂತಾಗಲಿದೆ ಎನ್ನುವುದು ಪ್ರಯಾಣಿಕರ ಅಭಿಪ್ರಾಯ.

ಬೆಂಗಳೂರಿನಿಂದ ರೈಲು ಹೊರಡುವ ಸಮಯವನ್ನು ಬದಲಾಯಿಸುವಂತೆ ಮಾಡಲಾದ ಬೇಡಿಕೆಗೆ ನೈಋತ್ಯ ರೈಲ್ವೇ ಮುಖ್ಯ ನಿರ್ವಹಣಾಧಿಕಾರಿ ಎಚ್‌.ಎಂ. ದಿನೇಶ್‌ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇದಕ್ಕೆ ಮೂರು ರೈಲು ವಲಯಗಳ ಹೊಂದಾಣಿಕೆ ಬೇಕಾಗಿರುವುದರಿಂದ ಮೂರು ವಲಯಗಳ ಹಿರಿಯ ಅಧಿಕಾರಿಗಳ ಜಂಟಿಯಾಗಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಮಂಗಳೂರು ರೈಲು ನಿಲ್ದಾಣವನ್ನು 4.30.-5 ಗಂಟೆಗೆ ತಲುಪುವಂತೆ ಬೆಂಗಳೂರಿನಿಂದ ಬೇಗ ರೈಲು ಹೊರಟಲ್ಲಿ ಕುಂದಾಪುರ, ಉಡುಪಿ ಭಾಗಗಳಿಗೆ ತೆರಳುವವರಿಗೆ ಬಹಳಷ್ಟು ಅನುಕೂಲವಾಗಲಿದೆ. ಇದರಿಂದಾಗಿ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ.
ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಂಸದ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.