ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು


Team Udayavani, May 31, 2023, 3:35 PM IST

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಕುಂದಾಪುರ: ಉಪ್ಪು ನೀರಿನ ಸಮಸ್ಯೆ ಪರಿಹಾರಕ್ಕೆ ಸೌಪರ್ಣಿಕ ನದಿಗೆ ಬಂಟ್ವಾಡಿ ಬಳಿ ಕಿಂಡಿ ಅಣೆಕಟ್ಟು ನಿರ್ಮಿಸಿದ್ದರೂ, ನದಿ ಪಾತ್ರದ ಹತ್ತಾರು ಗ್ರಾಮಗಳಿಗೆ ಇದೇ ಶಾಪವಾಗಿ ಪರಿಣಮಿಸಿದೆ. ಡ್ಯಾಂಗೆ ಹಲಗೆ ಹಾಕಿರುವುದರಿಂದಲೇ ಇಲ್ಲಿನ ಅನೇಕ ಊರುಗಳ ಬಾವಿ ನೀರು ಉಪ್ಪಾಗಿದೆ. ಕೂಡಲೇ ಹಲಗೆ ತೆಗೆಯಬೇಕು ಎನ್ನುವುದಾಗಿ ಈ ಭಾಗದ ಜನರು ಆಗ್ರಹಿಸಿದ್ದಾರೆ.

ಬಂಟ್ವಾಡಿ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕಿರುವುದರಿಂದ ಬಂಟ್ವಾಡಿ ಆಸುಪಾಸಿನ ಊರುಗಳ ಬಾವಿಗಳ ನೀರು ಕಳೆದ ಡಿಸೆಂಬರ್‌ನಿಂದಲೇ ಉಪ್ಪಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ ಎನ್ನುವ ಜನ, ಈಗಲಾದರೂ ಹಲಗೆ ತೆಗೆದರೆ, ನೀರಿನ ಹರಿವಿನಿಂದಾಗಿಯಾದರೂ ಒಂದಷ್ಟು ಅನುಕೂಲವಾಗಬಹುದು ಎನ್ನುತ್ತಾರೆ.

ಯಾವೆಲ್ಲ ಊರಿಗೆ ಸಮಸ್ಯೆ?
ಬಂಟ್ವಾಡಿ ಸುತ್ತಮುತ್ತಲಿನ ಪರಿಸರ ಸೇರಿದಂತೆ, ನಾವುಂದ, ಹಡವು, ಪಡುಕೋಣೆ, ಮರವಂತೆ, ಬಡಾಕೆರೆ, ಹೇರೂರು, ಕೋಣಿR, ಹುಂತನಗೋಳಿ ಆಸುಪಾಸಿನ ಊರುಗಳಿಗೆ ಈ ಬಂಟ್ವಾಡಿ ಡ್ಯಾಂನಿಂದಾಗಿ ಸಮಸ್ಯೆಯಾಗಿದೆ. ಹಲಗೆಗಳನ್ನು ಸರಿಯಾದ ಕ್ರಮದಲ್ಲ ಅಳವಡಿಸದೇ ಇರುವುದು, ಸರಿಯಾದ ಸಮಯಕ್ಕೆ ಅಳವಡಿಸದೇ ಇರುವುದರಿಂದ ಉಪ್ಪು ನೀರೆಲ್ಲ ಅದಾಗಲೇ ಮೇಲೆ ಬಂದಿದ್ದರಿಂದ ಈ ಸಮಸ್ಯೆ ಬಂದಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

ಮತ್ತೆ ನೆರೆ ಭೀತಿ
ಪ್ರತೀ ಮಳೆಗಾಲದಲ್ಲೂ ಬಂಟ್ವಾಡಿ ಕಿಂಡಿ ಅಣೆಕಟ್ಟಿನ ಹಲಗೆ ತೆಗೆಯುವ ಪ್ರಕ್ರಿಯೆ ವಿಳಂಬ ಆಗುತ್ತಿರು ವುದರಿಂದ ನಾವುಂದ, ಅರೆಹೊಳೆ, ಮರವಂತೆ, ಕೋಣಿR ಸುತ್ತಮುತ್ತಲಿನ ಪರಿಸರದಲ್ಲಿ ಕೃತಕ ನೆರೆ ಉಂಟಾಗುತ್ತದೆ. ಮಳೆಗಾಲಕ್ಕೂ ಮೊದಲೇ ತೆಗೆಯದೇ, ಕೊನೆಗೆ ಮಳೆ ಶುರುವಾದ ನಂತರ ತೆಗೆಯಲೂ ಆಗದೇ, ಅಲ್ಲೇ ಕೆಲ ಹಲಗೆ ಬಿಡುವ ಪ್ರಮೇಯವೂ ಇರುತ್ತದೆ. ಈ ಬಾರಿಯಾದರೂ ಕಿಂಡಿ ಅಣೆಕಟ್ಟಿನ ಹಲಗೆ ಬೇಗ ತೆಗೆದರೆ, ಆರಂಭದ ಮಳೆಗೆ ಡ್ಯಾಂನ ಕಿಂಡಿಗಳಲ್ಲಿ ನಿಲ್ಲುವ ಮರ, ಮಟ್ಟುಗಳು, ಕಸ, ಕಡ್ಡಿಗಳು ಕೊಚ್ಚಿ ಹೋಗಿ, ನೆರೆ ಭೀತಿ ಕಡಿಮೆಯಾಗಬಹುದು ಎನ್ನುವುದು ಈ ಭಾಗದ ಜನರ ಅಭಿಪ್ರಾಯ.

ಏನು ಪ್ರಯೋಜನ?
ಬಂಟ್ವಾಡಿ, ನಾವುಂದ, ಬಡಾಕೆರೆ, ಹುಂತನಗೋಳಿ ಆಸುಪಾಸಿನ ಭಾಗದಲ್ಲಿ ಸಾಮಾನ್ಯವಾಗಿ ಬಡಾಕೆರೆ ಹಬ್ಬದ ಸಮಯದಲ್ಲಿ ಅಂದರೆ ಜ.27ರ ಹುಣ್ಣಿಮೆ ನೀರು ಮೇಲೆ ಬರುವ ಸಮಯದಲ್ಲಿ ಉಪ್ಪು ನೀರಾಗುವುದು ವಾಡಿಕೆ. ಆದರೆ ಈ ಬಾರಿ ಗುಡ್ಡಮ್ಮಾಡಿ ಷಷ್ಠಿ ಸಂದರ್ಭ ಅಂದರೆ ಡಿಸೆಂಬರ್‌ನಲ್ಲಿಯೇ ಇಲ್ಲಿನ ಬಾವಿಗಳ ನೀರು ಉಪ್ಪಾಗಿದೆ. ಹಾಗಾದರೆ ಹಲಗೆ ಹಾಕಿ ಏನು ಪ್ರಯೋಜನ ಅನ್ನುವುದು ನಾವುಂದ ಗ್ರಾಮ ಪಂಚಾಯತ್‌ ಸದಸ್ಯ ರಾಜೇಶ್‌ ಸಾಲುºಡ ಅವರ ಪ್ರಶ್ನೆ.

ಕೂಡಲೇ ತೆಗೆಸುವ ಕ್ರಮ
ಈಗಾಗಲೇ ಹಲಗೆ ತೆಗೆಯಲು ಮುಂದಾಗಿದ್ದು, ಕೂಡಲೇ ಎಲ್ಲ ಹಲಗೆಯನ್ನು ತೆಗೆಸಲು ಕ್ರಮ ಕೈಗೊಳ್ಳಲಾಗುವುದು. ಮಳೆಗಾಲಕ್ಕೂ ಮೊದಲೇ ತೆಗೆಸಲಾಗುವುದು.
– ನಾಗಲಿಂಗ ಎಚ್‌., ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌,
ಸಣ್ಣ ನೀರಾವರಿ ಇಲಾಖೆ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Road Mishap; ಬೈಕ್ ಅಪಘಾತ: ಯುವಕ ಸಾವು

Road Mishap; ಬೈಕ್ ಅಪಘಾತ: ಯುವಕ ಸಾವು

India ವಿಶ್ವಕಪ್ ಗೆಲ್ಲಲಿ ಎಂದು ಕಾಡಸಿದ್ದೇಶ್ವರರಿಗೆ ಹೂ ಮಾಲೆ ಅರ್ಪಿಸಿದ ಅಭಿಮಾನಿ

India ವಿಶ್ವಕಪ್ ಗೆಲ್ಲಲಿ ಎಂದು ಕಾಡಸಿದ್ದೇಶ್ವರರಿಗೆ ಹೂ ಮಾಲೆ ಅರ್ಪಿಸಿದ ಅಭಿಮಾನಿ

Lok Sabha Elections:ನನ್ನ ಪರವಾಗಿ ಯಾರ ಹೆಸರನ್ನೂ ಶಿಫಾರಸು ಮಾಡೊಲ್ಲ: ಶ್ರೀನಿವಾಸ ಪ್ರಸಾದ್

Lok Sabha Elections:ನನ್ನ ಪರವಾಗಿ ಯಾರ ಹೆಸರನ್ನೂ ಶಿಫಾರಸು ಮಾಡೊಲ್ಲ: ಶ್ರೀನಿವಾಸ ಪ್ರಸಾದ್

Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ

Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ

Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ

Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ

Election ಹೊಸ್ತಿಲಲ್ಲಿ ಮಾತ್ರ ಬಿಜೆಪಿಗರಿಗೆ ಹಿಂದೂ ಧರ್ಮ ನೆನಪಾಗುತ್ತೆ: ಸಚಿವ ತಂಗಡಗಿ

Election ಹೊಸ್ತಿಲಲ್ಲಿ ಮಾತ್ರ ಬಿಜೆಪಿಗರಿಗೆ ಹಿಂದೂ ಧರ್ಮ ನೆನಪಾಗುತ್ತೆ: ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಕರಾವಳಿಯ 59 ಗ್ರಾಮ ಪಂಚಾಯತ್‌ಗಳಲ್ಲಿ ಕೂಸಿನ ಮನೆ

Udupi ಕರಾವಳಿಯ 59 ಗ್ರಾಮ ಪಂಚಾಯತ್‌ಗಳಲ್ಲಿ ಕೂಸಿನ ಮನೆ

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Manipal ಚೂರಿ ಇರಿತ: ನಾಲ್ವರ ಬಂಧನ

Manipal ಚೂರಿ ಇರಿತ: ನಾಲ್ವರ ಬಂಧನ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

SHREE DEVI

Bolllywood: ಡಯಟ್‌ನಿಂದ ನಟಿ ಶ್ರೀದೇವಿ ಸಾವು- ಬೋನಿ ಕಪೂರ್‌ ಹೇಳಿಕೆ

Road Mishap; ಬೈಕ್ ಅಪಘಾತ: ಯುವಕ ಸಾವು

Road Mishap; ಬೈಕ್ ಅಪಘಾತ: ಯುವಕ ಸಾವು

india finance growth

Finance: ಪ್ರಸಕ್ತ ವಿತ್ತೀಯ ವರ್ಷದಲ್ಲಿ ಭಾರತ ಶೇ.6.3ರ ದರದಲ್ಲಿ ಆರ್ಥಿಕಾಭಿವೃದ್ಧಿ

physics nobel

Nobel: ಮೂವರು ಸಂಶೋಧಕರಿಗೆ ಭೌತ ನೊಬೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.