ಬಸ್ರೂರು – ಹಟ್ಟಿಕುದ್ರು ಸೇತುವೆ ಕಾಮಗಾರಿ ಶೀಘ್ರ ಆರಂಭ ?

ಕೊರೊನಾ, ಮಳೆಯ ಕಾರಣ ಸ್ಥಗಿತಗೊಂಡ ಕಾಮಗಾರಿ

Team Udayavani, Oct 13, 2020, 4:18 AM IST

ಬಸ್ರೂರು – ಹಟ್ಟಿಕುದ್ರು ಸೇತುವೆ ಕಾಮಗಾರಿ ಶೀಘ್ರ ಆರಂಭ ?

ಬಸ್ರೂರು: ಮಂಡಿಕೇರಿಯ ಕಳುವಿನ ಬಾಗಿಲಿನಿಂದ 330 ಮೀ. ಉದ್ದದ ಹಟ್ಟಿಕುದ್ರುವಿಗೆ ಹೋಗುವ ಸೇತುವೆಗೆ ಶಿಲಾನ್ಯಾಸ ಜನವರಿಯಲ್ಲಾಗಿದ್ದು, ಆದರೆ ಕೋವಿಡ್ ಕಾರಣದಿಂದ ಸ್ಥಗಿತಗೊಂಡ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಈಗ ಮಳೆ ಕಡಿಮೆಯಾಗಿದ್ದು, ಕಾಮಗಾರಿ ಶೀಘ್ರ ಆರಂಭಗೊಳ್ಳುವ ನಿರೀಕ್ಷೆಯಿದೆ.

ಕೊರೊನಾ, ಮಳೆಯಿಂದಾಗಿ ಸೇತುವೆ ಕಾಮಗಾರಿಯನ್ನು ಮಾರ್ಚ್‌ನಲ್ಲಿ ಸ್ಥಗಿತಗೊಳಿಸಲಾಗಿತ್ತು. ಅದಲ್ಲದೆ ಒಂಭತ್ತು ಪಿಲ್ಲರ್‌ಗಳ ಮುಂದೆ ನೀರಿದ್ದಲ್ಲಿ ಗಟ್ಟಿ ಮಣ್ಣನ್ನು ತುಂಬಿಸಲಾಗಿತ್ತು. ಆದರೆ ನದಿ ತುಂಬಿ ಹರಿಯುವಾಗ ಇಲ್ಲಿ ಮಣ್ಣಿನ ತಡೆಯಿಂದ ಹಟ್ಟಿಕುದ್ರು ಭಾಗದ ನದಿ ಪ್ರದೇಶದಲ್ಲಿ ಕೊರೆತ ಆರಂಭವಾಗುವ ಅಪಾಯವೂ ಇತ್ತು. ಈ ಕಾರಣದಿಂದ ಅಲ್ಲಿ ತುಂಬಿಸಿದ್ದ ಮಣ್ಣನ್ನು ಮಳೆಗಾಲದಲ್ಲಿ ಕಡಿದು ಕೊಡಲಾಗಿತ್ತು.

ಹಟ್ಟಿಕುದ್ರು ಸೇತುವೆ ಜನರ ಬಹು ಹಿಂದಿನ ಕನಸಾಗಿತ್ತು. ಆದರೆ ಇಲ್ಲಿಯವರೆಗೆ ಕಾಲ ಕೂಡಿ ಬಂದಿರಲಿಲ್ಲ. ವಿಧಾನ ಪರಿಷತ್‌ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಶಿಫಾರಸಿನ ಮೇರೆಗೆ ವಾರಾಹಿ ನೀರಾವರಿ ನಿಗಮದಿಂದ ಈ ಸೇತುವೆ ನಿರ್ಮಾಣಕ್ಕೆ 14.59 ಕೋ.ರೂ. ಮಂಜೂರಾಗುವ ಮೂಲಕ ದಶಕಗಳ ಕನಸು ನನಸಾಗಿತ್ತು.

ಇನ್ನೂ 12 ಪಿಲ್ಲರ್‌
ಇಲ್ಲಿ ಇನ್ನೂ 12 ಫಿಲ್ಲರ್‌ ನಿರ್ಮಿಸಬೇಕಾಗಿದ್ದು ಎಷ್ಟು ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ಈಗಲೇ ಹೇಳುವುದು ಕಷ್ಟ. ಒಟ್ಟು 21 ಪಿಲ್ಲರ್‌ಗಳನ್ನು ನಿರ್ಮಿಸಬೇಕಾಗಿದ್ದು ಒಮ್ಮೆ ಕಾಮಗಾರಿ ಆರಂಭವಾದರೆ ಅನಂತರ ಯಾವ ಕಾರಣಕ್ಕೂ ನಿಲ್ಲದು ಎನ್ನುವುದು ಇಲ್ಲಿನ ಜನರ ನಂಬಿಕೆಯಾಗಿದೆ. ಪ್ರಸ್ತುತ ಶಾಲಾ ಕಾಲೇಜು ಇಲ್ಲದಿದ್ದರೂ ವಿದ್ಯಾಗಮ ತರಗತಿ ಮತ್ತಿತರ ಕೆಲಸಗಳಿಗಾಗಿ ವಿದ್ಯಾರ್ಥಿಗಳು, ಜನರು ಇರುವ ಒಂದೇ ದೋಣಿಯಲ್ಲಿ ಸಾಗಬೇಕಾಗಿದೆ.

ಶೀಘ್ರ ಕಾಮಗಾರಿ
ಕೊರೊನಾ, ಮಳೆಗಾಲದ ಕಾರಣದಿಂದ ಸೇತುವೆ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಸದ್ಯ ಮಳೆ ಕಡಿಮೆಯಾಗಿದೆ. ಈ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತನಾಡಿದ್ದು ಬಿಹಾರ, ಉತ್ತರ ಪ್ರದೇಶ ಮತ್ತು ಒರಿಸ್ಸಾ ಪ್ರದೇಶದ ಕಾರ್ಮಿಕರು ಆಗಮಿಸಲಿದ್ದು ಸೇತುವೆ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ.
– ರಾಮ್‌ ಕಿಶನ್‌ ಹೆಗ್ಡೆ ಬಸ್ರೂರು, ಉಪಾಧ್ಯಕ್ಷ, ತಾ.ಪಂ. ಕುಂದಾಪುರ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.